ನವದೆಹಲಿ: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿ ಬಂದಿದೆ. ಇಂದು ರಾಮನವಮಿ ಹಿನ್ನೆಲೆಯಲ್ಲಿ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಭಕ್ತ ಸಾಗರವೇ ಹರಿದುಬಂದಿದೆ.
ಈ ದಿನದ ವಿಶೇಷ ಎಂಬಂತೆ ಇಂದು ಮಧ್ಯಾಹ್ನ 12:16ರ ಸುಮಾರಿಗೆ ಸೂರ್ಯಕಿರಣಗಳು ಬಾಲರಾಮನ ಮೂರ್ತಿಗೆ ಮುತ್ತಿಕ್ಕಲಿವೆ. ಸುಮಾರು 5 ನಿಮಿಷಗಳ ಕಾಲ ಸೂರ್ಯ ರಶ್ಮಿ ಬಾಲರಾಮನ ಮೇಲಿರಲಿದೆ.
ಸುಮಾರು 17 ಲಕ್ಷ ಭಕ್ತರು ಅಯೋಧ್ಯೆಯತ್ತ ಬರುವ ನಿರೀಕ್ಷೆಯಿದೆ. ಹೀಗಾಗಿ ಮಂದಿರದ ವಿವಿಐಪಿ ಹಾಗೂ ವಿಐಪಿ ದರ್ಶನ ರದ್ದು ಮಾಡಲಾಗಿದೆ. ಬೆಳಗ್ಗೆ 3:30ರಿಂದ ರಾತ್ರಿ 11 ಗಂಟೆಯವರೆಗೆ ನಿರಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296