nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    ತುಮಕೂರು March 2, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    By adminMarch 2, 2026No Comments2 Mins Read
    k n rajanna

    ತುಮಕೂರು: ಯಾವುದೇ ಸಭೆ ಸಮಾರಂಭಗಳಲ್ಲಿ ಮೇಲ್ವರ್ಗದವರು, ಕೆಳವರ್ಗದವರು ಎಂಬ ಪದ ಬಳಕೆ ಮಾಡಬಾರದು. ಬದಲಾಗಿ ಮುಂದುವರಿದವರು ಮತ್ತು ಹಿಂದುಳಿದವರು ಎಂಬ ಪದ ಬಳಕೆ ಮಾಡಿ ಎಂದು ಮಾಜಿ ಸಚಿವರು, ಶಾಸಕರಾದ ಕೆ.ಎನ್.ರಾಜಣ್ಣ ಸಲಹೆ ನೀಡಿದರು.

    ಇಲ್ಲಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಚರಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಮತ್ತು ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಬಹಳಷ್ಟು ಕಾರ್ಯಕ್ರಮಗಳಲ್ಲಿ ಮೇಲು–ಕೀಳು ಎಂಬ ಪದ ಬಳಕೆ ಮಾಡಲಾಗುತ್ತದೆ. ಇದನ್ನು ಬದಲಾಯಿಸಿಕೊಳ್ಳುವುದು ಒಳಿತು. ಏಕೆಂದರೆ, ಯಾರೂ ಕೀಳಲ್ಲ. ಮೇಲು–ಕೀಳು ಎಂಬ ಪದ ಬಳಕೆಯೇ ಸರಿ ಇಲ್ಲ. ಇದರ ಬದಲಿಗೆ ಹಿಂದುಳಿದವರು ಎಂಬ ಪದ ಬಳಕೆ ಮಾಡುವುದು ಸೂಕ್ತ ಎಂದರು.


    Provided by
    Provided by

    ಹಿಂದುಳಿದ ವರ್ಗಗಳಲ್ಲಿಯೂ ಸಾಕಷ್ಟು ಬುದ್ಧಿವಂತಿದ್ದಾರೆ. ಅವರನ್ನು ನಾವುಗಳು ಗುರುತಿಸಬೇಕು. ಇಂತಹ ಸಮಾರಂಭಗಳಲ್ಲಿ ಅವರ ಸಾಧನೆಯನ್ನು ಗೌರವಿಸಿದಾಗ ಮತ್ತಷ್ಟು ಕೆಲಸ ಮಾಡಲು ಶಕ್ತಿ ನೀಡಿದಂತಾಗುತ್ತದೆ. ಈ ಕಾರಣಕ್ಕಾಗಿ ಅಭಿನಂದನಾ ಸಮಾರಂಭಗಳು ಮುಖ್ಯವಾಗುತ್ತವೆ ಎಂದರು.

    ದಲಿತ ಸಂಘಟನೆಗಳ ಹೋರಾಟ ಯಾವತ್ತೂ ತಮ್ಮ ಹಕ್ಕುಗಳಿಗೆ ವಂಚನೆಯಾದಾಗ ಪ್ರತಿಭಟಿಸುವ ರೀತಿ ಇರಬೇಕು. ಆದರೆ ಇತರೆ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಹೋಗಬೇಕು. ಯಾವಾಗಲೂ ಇತರರನ್ನು ದೂಷಿಸುತ್ತಾ ಹೋದರೆ ನಮ್ಮ ಹೋರಾಟ ಗುರಿ ಮುಟ್ಟುವುದಿಲ್ಲ. ಇತರೆ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಹೋರಾಟ ಮುಂದುವರಿಸಬೇಕೇ ಹೊರತು, ಅವರನ್ನು ದ್ವೇಷಿಸುತ್ತಾ ಮುನ್ನಡೆಯುವುದು ಸರಿಯಲ್ಲ ಎಂದು ಕರೆ ನೀಡಿದರು.

    “ಹಿಂದಿನ ದಲಿತ ಸಂಘರ್ಷ ಸಮಿತಿ ಆಶಯ ಮತ್ತು ಈಗಿನ ಹೋರಾಟಗಳಿಗೆ ಸಾಕಷ್ಟು ಭಿನ್ನತೆಗಳು ಇವೆ. ಈಗಿನ ಹೋರಾಟಗಳು ಸ್ವಾರ್ಥಕ್ಕೆ ಆಗುತ್ತಿವೆಯೇನೋ ಎಂದೆನಿಸುತ್ತದೆ. ಸಂಘಟನೆಗಳನ್ನು ಯಾವತ್ತೂ ಸ್ವಾರ್ಥಕ್ಕೆ ಬಳಸಿಕೊಳ್ಳಬಾರದು. ಸಮುದಾಯದಲ್ಲಿರುವ ಅಜ್ಞಾನವನ್ನು ತೊಡೆದು ಹಾಕಲು, ಶಿಕ್ಷಣವಂತರನ್ನಾಗಿಸಲು ಸಂಘಟನೆಗಳು ಶ್ರಮಿಸಬೇಕು. ಇಂತಹ ಅರಿವಿನಿಂದಲೇ ಹಿಂದುಳಿದ, ಅಶಕ್ತ, ದಲಿತ ಸಮುದಾಯ ಮುಂದೆ ಬರಲು ಸಾಧ್ಯ ಎಂದರು.

    ಮುಂದುವರಿದ ಜನಾಂಗಕ್ಕಿಂತ ಹೆಚ್ಚಾಗಿ ದಲಿತರು ಮತ್ತು ಹಿಂದುಳಿದವರೇ ಹೆಚ್ಚು ದೈವ ಭಕ್ತರು. ಈ ಜನಾಂಗದವರೇ ದೇವರುಗಳಿಗೆ ಹೆಚ್ಚು ಹರಕೆ ಮಾಡುತ್ತಾರೆ. ಮುಂದುವರಿದ ಜಾತಿಗಳಿಗಿಂತ ಇವರೇ ಹೆಚ್ಚು ಹೋಮ, ಹವನ ನಡೆಸುತ್ತಾರೆ. ದಲಿತ ಸಂಘರ್ಷ ಸಮಿತಿ ಹೋರಾಟ ಕಲಿಸಿಕೊಟ್ಟಿರುವುದು ಇದನ್ನೇನಾ ಎಂದು ನಾವೆಲ್ಲಾ ಪ್ರಶ್ನಿಸಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ವಿಶ್ಲೇಷಿಸಿದರು.

    ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ತರಲು ನಾನು 1980 ರಿಂದ ಪ್ರಯತ್ನಿಸುತ್ತಿದ್ದೇನೆ. ಕೆಲವು ಪಟ್ಟಭದ್ರರು ಈ ಕ್ಷೇತ್ರವನ್ನು ತಮ್ಮ ಮುಷ್ಠಿಯಲ್ಲಿ ಹಿಡಿದುಕೊಂಡಿದ್ದರು. ಈಗ ಬದಲಾಗಿದೆ. ಎಲ್ಲರಿಗೂ ಸಾಲ ನೀಡುವಂತಾಗಿದೆ. ಹಿಂದೆ ಸಾಲ ನೀಡುವವರೂ ಅವರೇ, ಪಡೆದುಕೊಳ್ಳುವವರೂ ಅವರೇ ಆಗಿದ್ದರು. ದಲಿತರಿಗೆ ಇಲ್ಲಿ ಅವಕಾಶವೇ ಇರಲಿಲ್ಲ. ಮೀಸಲಾತಿಯಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಸಹಕಾರ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಹಿಂದುಳಿದವರು, ದಲಿತರು, ಮಹಿಳೆಗೆ ಇಲ್ಲಿ ಅವಕಾಶವಿದೆ. ಧ್ವನಿ ಇಲ್ಲದವರಿಗೂ ಇಲ್ಲಿ ಧ್ವನಿ ನೀಡಲಾಗಿದೆ. ನಾವು ಮಾಡಬೇಕಾಗಿರುವುದು ಇದೇ ಕೆಲಸ ಎಂದರು.

    ಸಮಕಾಲೀನ ಸಾಮಾಜಿಕ ರಾಜಕೀಯ ಸಾಂಸ್ಕೃತಿಕ ತಲ್ಲಣಗಳು ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ವಿಚಾರ ಗೋಷ್ಠಿಯಲ್ಲಿ ವಿಷಯ ಮಂಡಿಸಿದರು. ದಲಿತ ಚಳುವಳಿಯ ಸವಾಲು ಮತ್ತು ಸಾಧ್ಯತೆಗಳು ಕುರಿತು ರವಿಕುಮಾರ್ ಬಾಗಿ, ಸಮಕಾಲೀನ ಕರ್ನಾಟಕ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆ ಕುರಿತು ಎ.ಎಲ್.ನರಸಿಂಹಮೂರ್ತಿ ಅವರು ವಿಷಯ ಮಂಡಿಸಿ ಮಾತನಾಡಿದರು.

    ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ತಂಬೂರಿ ರಾಮಯ್ಯ, ಬಾಬು ಜಗಜೀವನರಾಂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕುಂದೂರು ತಿಮ್ಮಯ್ಯ, ಕೆ.ದೊರೈರಾಜ್ ಅವರಿಗೆ ಅಭಿನಂದನೆ ನಡೆಯಿತು. ಡಾ.ರವಿಕುಮಾರ್ ನೀಹ ಅಭಿನಂದನಾ ನುಡಿಗಳನ್ನಾಡಿದರು. ಡಾ.ಶಿವಣ್ಣ ತಿಮ್ಮಾಪುರ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಚರಕ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಪರಶುರಾಮ ಅಧ್ಯಕ್ಷತೆ ವಹಿಸಿ ಆಶಯ ನುಡಿಗಳನ್ನಾಡಿದರು. ಉಪ ವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಲೇಖಕಿಯರ ಸಂಘದ ಅಧ್ಯಕ್ಷೆ ಆಶಾ ಬೆಳ್ಳದೂರು, ಸಾಮಾಜಿಕ ಹೋರಾಟಗಾರ ಶ್ರೀ ಪಾದ ಭಟ್ ಇತರರಿದ್ದರು. ಎ.ರಾಮಚಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದ್ಯಾಗೇರಹಳ್ಳಿ ವಿರೂಪಾಕ್ಷ, ತುಮಕೂರು ಶ್ರೀ ಧರ್, ಕುಂದೂರು ಮುರುಳಿ ಇತರರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.