nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ October 2, 2023

    ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ: ಡಿ.ಕೆ.ಶಿವಕುಮಾರ್

    By adminOctober 2, 2023No Comments3 Mins Read
    d k shivakumar

     

    ಬೆಂಗಳೂರು: ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.


    Provided by
    Provided by

    ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆಯ ಪ್ರಯುಕ್ತ ಅವರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

    ಇಂದು ದೇಶದ ಇಬ್ಬರು ಮಹಾಚೇತನರಾದ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿ ಅವರ ದೂರದೃಷ್ಟಿಯನ್ನು ನೆನೆಯುವ ದಿನ.ಗಾಂಧೀಜಿ ಅವರ ಬದುಕು, ನುಡಿಮುತ್ತುಗಳು ನಮ್ಮ ಬದುಕಿಗೆ ಆದರ್ಶ. ಅವರ ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ.ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ನಮ್ಮನ್ನು ಬಂದೂಕಿನ ಗುಂಡಿನ ಮೂಲಕ ಕುಗ್ಗಿಸಬಹುದು ಎಂದು ಬ್ರಿಟೀಷರು ಭಾವಿಸಿದ್ದರು. ಆದರೆ ನಮ್ಮ ನಾಯಕರುಗಳು ಆ ಗುಂಡಿಗೆ ಎದೆಕೊಟ್ಟು ಪ್ರಾಣತ್ಯಾಗ ಮಾಡಿದ ಪರಿಣಾಮ ಇಂದು ದೇಶದಲ್ಲಿ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ ಎಂದರು.

    ಈ ದೇಶದಲ್ಲಿ ಸ್ವಾತಂತ್ರ್ಯ ತಂದುಕೊಟ್ಟ ನಮ್ಮ ಪಕ್ಷ 60 ವರ್ಷಗಳ ಕಾಲ ಆಡಳಿತ ಮಾಡಿ ಸಂವಿಧಾನ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ, ಅನೇಕ ತಿದ್ದುಪಡಿಗಳು ನೂರಾರು ಕಾನೂನುಗಳನ್ನು ನೀಡಿದೆ. ಆ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ತತ್ವದ ಮೂಲಕ ಕಾರ್ಯಕ್ರಮ ರೂಪಿಸುತ್ತಿದ್ದೇವೆ.

    “ದೇವರಿಗೆ ಯಾವುದೇ ಧರ್ಮವಿಲ್ಲ, ಸಬ್ಕೋ ಸನ್ಮತಿ ದೇ ಭಗವಾನ್” ಎಂದು ಗಾಂಧೀಜಿ ಹೇಳಿದ್ದಾರೆ. ಗಾಂಧಿಜಿ ಅವರು ಮುನ್ನಡೆಸಿದ ಪಕ್ಷದಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹೆಗಲ ಮೇಲೆ ಹಾಕಿಕೊಂಡು ಕೆಲಸ ಮಾಡುತ್ತಿರುವ ನಾವು ಹೆಮ್ಮೆಪಡಬೇಕು. ಗಾಂಧಿ ಅವರು ದೇಶದ ಪ್ರಧಾನಿ ಆಗಬಹುದಿತ್ತು. ಆದರೆ ಅವರು ಮಹಾತ್ಮರಾಗಿ ಉಳಿದು, ತಮ್ಮ ದೂರದೃಷ್ಟಿಯಿಂದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಗೆ ಜವಾಬ್ದಾರಿ ನೀಡಿದರು.

     

    “ಪಾಪವನ್ನು ದ್ವೇಷಿಸಿ, ಪಾಪಿಯನ್ನು ಪ್ರೀತಿಸಿ” ಎಂಬ ಸಂದೇಶವನ್ನು ಗಾಂಧೀಜಿ ಅವರು ಕೊಟ್ಟಿದ್ದಾರೆ. ನಾನು ಅನೇಕ ಸಂದರ್ಭದಲ್ಲಿ ಗಾಂಧಿ ಅವರ ಮಾತನ್ನು ಹೇಳುತ್ತಿರುತ್ತೇನೆ. “ನಾವು ನಮ್ಮನ್ನು ನಿಯಂತ್ರಿಸಿಕೊಳ್ಳಬೇಕಾದರೆ ಬುದ್ದಿಯನ್ನು ಪ್ರಯೋಗಿಸಬೇಕು, ನಾವು ಬೇರೆಯವರನ್ನು ನಿಯಂತ್ರಿಸಬೇಕಾದರೆ ಪ್ರೀತಿಯನ್ನು ಪ್ರಯೋಗಿಸಬೇಕು” ಎಂದು ಹೇಳಿದ್ದಾರೆ.

    ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನಾವೆಲ್ಲರೂ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗಾಂಧಿಜಿ ಅವರು 18 ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. 1924ರಲ್ಲಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

    ನಂಜನಗೂಡಿನ ಬದನಾಳು ಗ್ರಾಮಕ್ಕೆ ಗಾಂಧಿ ಅವರು ಎರಡು ಬಾರಿ ಭೇಟಿ ನೀಡಿದ್ದರು. ಸುಮಾರು 30-40 ವರ್ಷಗಳಿಂದ ಇಲ್ಲಿನ ಸವರ್ಣಿಯರು ಹಾಗೂ ದಲಿತರ ನಡುವೆ ಬಿರುಕು ಮೂಡಿತ್ತು, ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಎರಡೂ ಸಮುದಾಯವನ್ನು ಒಂದುಗೂಡಿಸಿ ಎರಡೂ ಕೇರಿಗಳ ನಡುವಣ ರಸ್ತೆಯನ್ನು ಮತ್ತೆ ತೆರೆದು ಅದಕ್ಕೆ ಭಾರತ ಜೋಡೋ ರಸ್ತೆ ಎಂದು ನಾಮಕರಣ ಮಾಡಲಾಯಿತು. ಆಮೂಲಕ ಇತಿಹಾಸ ಬರೆಯಲಾಯಿತು. ಇದು ಕಾಂಗ್ರೆಸ್ ಪಕ್ಷದ ಶಕ್ತಿ ಹಾಗೂ ಇತಿಹಾಸ. ಕಾಂಗ್ರೆಸ್ ಪಕ್ಷ ಸದಾ ಹೃದಯಗಳನ್ನು ಬೆಸೆಯುವ ಕೆಲಸ ಮಾಡಿಕೊಂಡು ಬಂದಿವೆ.

    ಪ್ರತಿ ಹಳ್ಳಿಯಲ್ಲಿ ಶಾಲೆ, ಸಹಕಾರ ಸಂಸ್ಥೆ ಇರಬೇಕು ಎಂದು ವಾದ ಮಾಡುತ್ತಿದ್ದೇವೆ. ನಿಜವಾದ ಭಾರತ ಅದರ ಪ್ರಜೆಗಳಲ್ಲಿ ಅಲ್ಲ ಇಲ್ಲಿರುವ 7 ಲಕ್ಷ ಹಳ್ಳಿಗಳಲ್ಲಿ ಅಡಗಿದೆ ಎಂದು ಗಾಂಧಿ ಅವರು ಸಂದೇಶ ನೀಡಿದ್ದರು.ಇಲ್ಲಿರುವ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೀರಿ. ನಿಮ್ಮ ಮುಂದೆ ಬಹಳ ದೊಡ್ಡ ಜವಾಬ್ದಾರಿ ಇದೆ. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು, ಒಂದಾಗಿದ್ದಾರೆ. ಸರ್ಕಾರ ತೆಗೆದವರ ಜೊತೆಗೆ ಮಾತ್ರಿ ಮಾಡಿಕೊಂಡಿದ್ದಾರೆ.ಈ ಅಪವಿತ್ರ ಮೈತ್ರಿ ಸರಿಯಿಲ್ಲ ಎಂದು ಅನೇಕ ನಾಯಕರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದೆ ಬರುತ್ತಿದ್ದಾರೆ ಎಂದು ಡಿಕೆಶಿ ತಿಳಿಸಿದರು.

    ಕಾರ್ಯಕರ್ತರ ಭಾವನೆ ಬಗ್ಗೆ ನಮಗೆ ಅರಿವಿದೆ. ನಾವು ನುಡಿದಂತೆ ನಡೆಯಲು ಕೊಟ್ಟ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆಮೂಲಕ ನೀವು ಜನರ ಬಳಿ ಹೋಗಲು, ಪಕ್ಷ ಸಂಘಟನೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.ಗ್ರಾಮ ಸ್ವರಾಜ್ಯ ಗಾಂಧೀಜಿ ಕೊಟ್ಟ ದೊಡ್ಡ ಕೊಡುಗೆ. ನಮ್ಮ ಪಕ್ಷ ರಾಜೀವ್ ಗಾಂಧಿ ಅವರ ನೇತೃತ್ವದ ಸರ್ಕಾರ ಸಂವಿಧಾನಕ್ಕೆ 73, 74ನೇ ತಿದ್ದುಪಡಿ ನೀಡಿ ಶಕ್ತಿ ನೀಡಿದೆವು. ಜೆ.ಹೆಚ್ ಪಟೇಲ್ ಅವರ ಕಾಲದಲ್ಲಿ ಪಂಚಾಯ್ತಿಗಳಿಗೆ 1 ಲಕ್ಷ ಅನುದಾನ ನೀಡಲಾಗುತ್ತಿತ್ತು. ಕೃಷ್ಣ ಅವರ ಕಾಲದಲ್ಲಿ ಪಂಚಾಯ್ತಿಗೆ 23 ಇಲಾಖೆಗಳನ್ನು ಸೇರಿಸಿ ಹೆಚ್ಚಿನ ಅನುದಾನ ನೀಡಿ ಶಕ್ತಿ ನೀಡಿದೆವು. ಪರಿಣಾಮ ಇಂದು ಪಂಚಾಯ್ತಿಗಳೇ ಸರ್ಕಾರವಾಗಿ ಆಡಳಿತ ನಡೆಸುವಂತೆ ಮಾಡಿದ್ದೇವೆ ಎಂದರು.

    ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಸ್ಥಳೀಯ ಮಟ್ಟದಲ್ಲಿ ನಾಯಕತ್ವ ಬೆಳೆಸಿಕೊಳ್ಳಲು ಸಿದ್ಧರಾಗಬೇಕು. ಶಾಸಕರಾಗುವ ಮುನ್ನ ಸ್ಥಳೀಯ ಮಟ್ಟದಲ್ಲಿ ನಾಯಕರಾಗಬೇಕು. ನಾನು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ, ಸಹಕಾರಿ ಸಂಘದ ನಿರ್ದೇಶಕನಾಗಿದ್ದೆ. ರಾಮಲಿಂಗಾ ರೆಡ್ಡಿ ಪಾಲಿಕೆ ಸದಸ್ಯರಾಗಿದ್ದರು. ನಮ್ಮ ಕಾರ್ಯಾಧ್ಯಕ್ಷರು ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದರು. ಬಿ.ಡಿ ಜತ್ತಿ ಅವರು ಕೂಡ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ನೆಹರೂ ಅವರು ಕೂಡ ಅಲಹಬಾದ್ ಮುನ್ಸಿಪಲ್ ಅದ್ಯಕ್ಷರಾಗಿದ್ದರು, ಕೆಂಗಲ್ ಹನುಮಂತಯ್ಯ ಪಾಲಿಕೆ ಅಧ್ಯಕ್ಷರಾಗಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂ ಸಿಂಗ್ ಅವರು ಕೂಡ ಕಾರ್ಪೊರೇಟರ್ ಗಳಾಗಿದ್ದರು. ನಿಮ್ಮ ದಿಕ್ಕು, ನಾಯಕತ್ವ ಬೂತ್ ಹಾಗೂ ಪಂಚಾಯ್ತಿ ಮಟ್ಟದಲ್ಲಿ ಇರಬೇಕು ಎಂದು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸಲಹೆ ನೀಡುತ್ತೇನೆ. ನಮ್ಮ ಸರ್ಕಾರ ಅಧಿಕಾರ ತಂದಿರುವ ನಿಮಗೆ ಧನ್ಯವಾದಗಳು, ಮುಂದಿನ ದಿನಗಳಲ್ಲೂ ನೀವು ಒಟ್ಟಾಗಿ ತಾಳ್ಮೆಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.