ಸರಗೂರು: ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂಥ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಜಿ.ರವಿ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಅಮರ ಶಿಲ್ಪಿಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಜಗತ್ತಿನಲ್ಲೆ ಪ್ರಸಿದ್ಧಿ ಪಡೆದ ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವದೇ ಒಂದು ಸೌಭಾಗ್ಯ. ಮಾಡುವ ಕೆಲಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಗಳಿಸಲಿದೆ” ಎಂದು ಅವರು ಹೇಳಿದರು.
“ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸಲು ಸಾಧ್ಯ. ಸಾಧರ್ನು ಸ್ಮರಣೆ ಮಾಡಿದರಷ್ಟೆ ಸಾಲದು. ಅವರ ಗುಣ ಮತ್ತು ಬೆಳೆದು ಬಂದ ಪ್ರರಿಶ್ರಮ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದು ನೆನೆಯುವುದರೊಂದಿಗೆ ಅವರ ಉತ್ತಮ ಜ್ಞಾನ, ಕಲಾತ್ಮಕ ಪ್ರವೃತ್ತಿ ರೂಢಿಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ಸಮಾಜ ನಮ್ಮನ್ನು ಸ್ಮರಿಸಲಿದೆ” ಎಂದು ಅವರು ತಿಳಿಸಿದರು.
ಯುವ ಬ್ರೀಗೇಡ್ನ ತಾಲ್ಲೂಕು ಅಧ್ಯಕ್ಷ ಬಿ.ಡಿ.ದಾಸಚಾರಿ ಮಾತನಾಡಿ, “ಮಕ್ಕಳು ಶಿಕ್ಷಣ ಪಡೆಯುವುದರೊಂದಿಗೆ ನಾನಾ ಕೌಶಲ್ಯಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಬೇಕು. ವೃತ್ತಿಧರ್ಮವನ್ನೂ ಮರೆಯಬಾರದು” ಎಂದು ಸಲಹೆ ನೀಡಿದರು.
ತಹಶೀಲ್ದಾರ್ ಮೋಹನ್ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯತಿ ಅಧ್ಯಕ್ಷೆ ಚೈತ್ರಾಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್, ವಿಶ್ವಕರ್ಮ ಸಮಾಜದ ಅಧ್ಯಕ್ಷ ನಟರಾಜು, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಸಂತೋಷ್ಕುಮಾರ್, ಮುಖಂಡರಾದ ಲಿಂಗಾಚಾರ್, ರಾಜೇಶ್, ಪುಟ್ಟಸ್ವಾಮಿಆಚಾರ್, ಶ್ರೀನಿವಾಸ್, ಬೀರ್ವಾಳ್ ಸೋಮಚಾರ್, ಲೋಕೇಶ್, ಶ್ರೀನಿವಾಸಚಾರ್, ಬಸವರಾಜು, ಕಾಳಸ್ವಾಮಿ ಆಚಾರ್, ಚೇತನ್, ಸುರೇಶ್, ನರಸಿಂಹಾಚಾರ್, ಪ್ರಕಾಶ್ ಆಚಾರ್, ಸತೀಶ್ಕದಂಬ, ಮಹೇಶ್, ವೇಣುಗೋಪಾಲ್, ಗ್ರೇಟ್-೨ ತಹಸೀಲ್ದಾರ್ ಪರಶಿವಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಶಿಲ್ಪಿಗಳಾದ ಅನಿಲ್ಕುಮಾರ್, ನಾಗೇಶ್ಆಚಾರ್, ಶಿವಮಲ್ಲು, ಕರಾಟೆ ಶಿಕ್ಷಕ ಗೋವಿಂದರಾಜು, ಹಲಸೂರು ನಿಂಗಾಚಾರ್, ಜಿ.ರವಿ ಅವರನ್ನು ಅಭಿನಂದಿಸಲಾಯಿತು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


