ಚಿಕ್ಕೋಡಿ: ಮದುವೆಗೆ ವಿಳಂಬ ಆಗಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಶಾಂತಿನಾಥ ಸುರೇಶ ಕೇಸ್ತಿ(27) ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ.
ಹುಕ್ಕೇರಿ ಪಟ್ಟಣದಲ್ಲಿ ಸ್ವಂತ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಶಾಂತಿನಾಥ ಸುರೇಶ್ ಕೇಸ್ತಿ, ಸಾಲದ ಸುಳಿಗೆ ಸಿಲುಕಿದ್ದ. ಜತೆಗೆ ಮದುವೆಗೆ ಹೆಣ್ಣು ಸಿಗದ ಕಾರಣಕ್ಕೆ ಸುರೇಶ್ ಮನನೊಂದಿದ್ದ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಗ್ಯಾರೇಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296