nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026
    Facebook Twitter Instagram
    ಟ್ರೆಂಡಿಂಗ್
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    • ಗುಬ್ಬಿ:  ಹೈಟೆನ್ಷನ್ ವಿದ್ಯುತ್ ತಂತಿ:  ನ್ಯಾಯಯುತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ರೈತರಿಂದ ಸಿದ್ಧತೆ!
    • ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ
    • ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    ತುಮಕೂರು December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    By adminDecember 31, 2025No Comments3 Mins Read
    vikala chetana

    ತುಮಕೂರು: ರಾಜ್ಯದಲ್ಲಿ 21 ರೀತಿಯ ನ್ಯೂನತೆಯುಳ್ಳ 11,45,208 ಜನ ವಿಕಲಚೇತನರಿದ್ದರೆ, ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ. ಎಲ್ಲವೂ ಸರಿಯಾಗಿರುವ ನಾವು ವಿಕಲಚೇತನರನ್ನು ಅವರ ದೃಷ್ಟಿಕೋನದಲ್ಲಿ ನೋಡಬೇಕಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ. ಸಿದ್ಧರಾಮಣ್ಣ ಕೆ. ತಿಳಿಸಿದರು.

    ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಮೊಬಿಲಿಟಿ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಕಾಯ್ದೆ ಅರಿವು ಮತ್ತು ಸೌಲಭ್ಯ ಕುರಿತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಎಲ್ಲವೂ ಕಾನೂನಿನಿಂದಲೇ ಪರಿಹಾರವಾಗುವುದಿಲ್ಲ. ಮಹಿಳೆಯರು, ಮಕ್ಕಳು, ವಿಕಲಚೇತನರು ಇವರೆಲ್ಲರಿಗೂ ವಿಶೇಷ ಕಾನೂನುಗಳಿವೆ. ಆದರೆ ಅದರ ಅನುಷ್ಠಾನ ಮುಖ್ಯವಾಗಿದೆ ಎಂದರು.


    Provided by
    Provided by

    ಶೇ. 90 ಕ್ಕಿಂತಲೂ ಹೆಚ್ಚು ಅಂಗವೈಕಲ್ಯ ಹೊಂದಿರುವ ಪೋಷಕರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ವಿಕಲಚೇತನರ ಪುನರ್ವಸತಿಗಾಗಿ 222 ಜನ ವಿಆರ್‌ಡಬ್ಲ್ಯೂ, 8 ಜನ ಎಂ.ಆರ್.ಡಬ್ಲ್ಯೂ, 18 ಜನ ಯುಆರ್‌ಡಬ್ಲ್ಯೂಗಳು, 7 ವಿವಿಧ ಸಂಘ ಸಂಸ್ಥೆಗಳು ಸರ್ಕಾರದ ಅನುದಾನ ಪಡೆದು ಕೆಲಸ ಮಾಡುತ್ತಿದ್ದಾರೆ. ಎಂ.ಎಸ್.ಡಬ್ಲ್ಯೂ ಕಲಿಯುತ್ತಿರುವ ವಿದ್ಯಾರ್ಥಿಗಳು ಇಂತಹ ವಿಭಾಗಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗಿದೆ. ಸಾಮಾಜಿಕ ಪಿಡುಗುಗಳ ನಿವಾರಣೆಯತ್ತ ವಿಶೇಷ ಗಮನಹರಿಸಬೇಕಾಗಿದೆ. ಮುಟ್ಟು ಮತ್ತು ಹೆರಿಗೆ ಸಂದರ್ಭದಲ್ಲಿ ಪಾಲಿಸುವ ಹಳೆಯ ಸಂಪ್ರದಾಯವನ್ನು ತೊಲಗಿಸಲು ಹೋರಾಡ ಬೇಕಿದೆ. ವಿಶೇಷ ಶಿಬಿರಗಳ ಮೂಲಕ ಆ ಜನರಿಗೆ ತಿಳಿವಳಿಕೆ ಮೂಡಿಸಲು ಪ್ರಯತ್ನಿಸಬೇಕೆಂದರು.

    ಮೊಬಿಲಿಟಿ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯಕಾರಿ ನಿರ್ದೇಶಕರಾದ ಅಲ್ಬಿನಾ ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಕಲಚೇತನರ ಬಗ್ಗೆ ಅನುಕಂಪಕ್ಕಿಂತ, ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕುಟುಂಬ, ಸಮಾಜ ಹಾಗೂ ಪ್ರಭುತ್ವದ ಜವಾಬ್ದಾರಿ ಹೆಚ್ಚಿದೆ ಎಂದು ತಿಳಿಸಿದರು.

    ಮೊಬಿಲಿಟಿ ಇಂಡಿಯಾ ಕಳೆದ 31 ವರ್ಷಗಳಿಂದ ವಿಕಲಚೇತನರಿಗಾಗಿ ದುಡಿಯುತ್ತಾ ಬಂದಿದೆ. ಈಶಾನ್ಯ ರಾಜ್ಯಗಳಲ್ಲದೆ ಕರ್ನಾಟಕದ ಚಾಮರಾಜನಗರ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿಯೂ ಮೊಬಿಲಿಟಿ ಇಂಡಿಯಾ ಕೆಲಸ ಮಾಡುತ್ತಿದೆ ಎಂದರು.

    ಅಂಗವಿಕಲತೆ ಶಾಪ, ವರ ಎನ್ನುವವರ ನಡುವೆಯೂ ಸಾಧನೆ ಮಾಡಿದ ಅನೇಕ ವಿಕಲಚೇತನರು ನಮ್ಮ ನಡುವೆ ಸಾಕಷ್ಟು ಜನರಿದ್ದಾರೆ. ಅವರಿಗೆ ಕರುಣೆಗಿಂತ ಅವಕಾಶಗಳನ್ನು ಒದಗಿಸುವ ಕೆಲಸವನ್ನು ಮಾಡಿದಾಗ, ಅವರು ಸಹ ನಮ್ಮ ನಿಮ್ಮಂತೆಯೇ ಸಮಾಜದಲ್ಲಿ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

    ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಚಿದಾನಂದಮೂರ್ತಿ ಮಾತನಾಡಿ, ವಿಕಲಚೇತನರ ಬಗ್ಗೆ ಮೊದಲು ಕುಟುಂಬದ ಸದಸ್ಯರು ಒಪ್ಪಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅದನ್ನು ಗುರುತಿಸಿ, ಸೂಕ್ತ ಪರಿಹಾರಕ್ಕೆ ಮುಂದಾದರೆ ಅದನ್ನು ಮೆಟ್ಟಿ ನಿಲ್ಲಲು ಸಾಧ್ಯ. ನಮ್ಮ ಮನೆಗಳು ಮೊದಲು ವಿಕಲಚೇತನ ಸ್ನೇಹಿಯಾಗಬೇಕು. ವಯಸ್ಸಾದ ತಂದೆ, ತಾಯಿ, ಹಿರಿಯರು ಯಾವ ಅಡೆತಡೆಯಿಲ್ಲದೆ ಮನೆಯಲ್ಲಿ ಓಡಾಡುವಂತಹ ವಾತಾವರಣ ಸೃಷ್ಟಿಸಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿವಿ ಸ್ವಾನೊಬಿಲಿಟಿ ಇಂಡಿಯಾದ ತುಮಕೂರು ಜಿಲ್ಲಾ ಯೋಜನಾ ವ್ಯವಸ್ಥಾಪಕ ಆನಂದ್ ಎಸ್.ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ವಿಕಲಚೇತನರಿಗೆ ಇಲಾಖೆ ಯ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಹಾಗೂ ಸಂಸ್ಥೆಯು ಭಾರತದ ಹಲವು ಕಡೆ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ವಿವರಿಸಿದರು.

    ಎಂ.ಆರ್.ಡಬ್ಲ್ಯೂ ಮತ್ತು ವಿಆರ್‌ಡಬ್ಲ್ಯೂ ಸಂಘಟನೆಯ ಜಿಲ್ಲಾಧ್ಯಕ್ಷ ಚಿತ್ತಯ್ಯ ಅವರು ವಿಕಲಚೇತನರಿಗಾಗಿ ಇರುವ ಯೋಜನೆಗಳ ಬಗ್ಗೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಾ.ಬಿ.ರಾಜಕುಮಾರ್ ಅವರು 1995ರ ಅಂಗವಿಕಲರ ಕಾಯ್ದೆ, 2006ರ ವಿಶ್ವಸಂಸ್ಥೆಯ ಜಾಗತಿಕ ಸಮಾವೇಶ ಮತ್ತು ಒಡಂಬಡಿಕೆ 2016ರ ವಿಕಲಚೇತನರ ಕಾಯ್ದೆ ಕುರಿತು ಮಾತನಾಡಿದರು. ತುಮಕೂರು ವಿವಿ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರಾದ ಪ್ರೊ.ಪರಶುರಾಮ ಕೆ.ಜಿ., ಉಪನ್ಯಾಸಕರುಗಳು, ಮೊಬಿಲಿಟಿ ಇಂಡಿಯಾದ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಸ್ನಾತಕೋತ್ತರ ವಿದ್ಯಾರ್ಥಿ ಪೂಜಾರಿ ಮಂಜುನಾಥ ಸಿ. ಕೆಂಗಲ್ ಹಟ್ಟಿ ಅವರು ಬರೆದಿರುವ ‘ಬವಣೆ’ ಎಂಬ ಕವನ ಸಂಕಲನವನ್ನು ಬಿಡುಗಡೆ ಗೊಳಿಸಲಾಯಿತು.

    ವಿಕಲಚೇತನರನ್ನು ನೋಡಿಕೊಳ್ಳಲು ನುರಿತ ಸಮಾಜ ವಿಜ್ಞಾನಿಗಳ ಅಗತ್ಯವಿದೆ. ಇಂದು ಎಂ.ಎಸ್. ಡಬ್ಲ್ಯೂ ಕಲಿಯುತ್ತಿರುವ ವಿದ್ಯಾರ್ಥಿಗಳಲ್ಲಿ ಕೆಲವುರಾದರೂ ಜಿಲ್ಲೆಯ 46 ಸಾವಿರ ಕುಟುಂಬಗಳನ್ನು ಸೇರುವ ಪ್ರಯತ್ನ ನಡೆಸಿದರೆ ನೀವು ಕಲಿತದ್ದು ಸಾರ್ಥಕ. ವಿಕಲಚೇತನರನ್ನು ಒಪ್ಪಿಕೊಂಡು, ಅವರ ಸಬಲೀಕರಣ ವಾಗುವವರೆಗೂ ನಿರಂತರವಾಗಿ ತೊಡಗಿಕೊಳ್ಳುವುದು ಸವಾಲಿನ ಕೆಲಸ. ಸಮಸ್ಯೆಯನ್ನು ಗುರುತಿಸುವ ಕೆಲಸವಾಗುತ್ತದೆ. ಆದರೆ ಪರಿಹಾರ ಅದೇ ವೇಗದಲ್ಲಿ ನಡೆಯುತ್ತಿಲ್ಲ. ವಿಕಲಚೇತನರು ಮತ್ತು ಅವರ ಪೋಷಕರಿಗೆ ನಮ್ಮ ಸಹಾಯಕ್ಕೆ ನಿಲ್ಲುವವರು ಯಾರು ಎಂಬ ಪ್ರಶ್ನೆ ಹುಟ್ಟು ಹಾಕದಂತೆ ಕೆಲಸ ಮಾಡಬೇಕಾಗಿದೆ.

    — ಪ್ರೊ. ಕೆ.ಜಿ. ಪರಶುರಾಮ, ಹಿರಿಯ ಪ್ರಾಧ್ಯಾಪಕರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.…

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ

    January 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.