nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Facebook Twitter Instagram
    ಟ್ರೆಂಡಿಂಗ್
    • ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    • ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ
    • ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ
    • ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ
    • ಸಾಲ ಮರುಪಾವತಿ ಮಾಡದ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿಹಾಕಿ ಟಾರ್ಚರ್!
    • ಕುಟುಂಬ ಗಲಾಟೆ ನಿಲ್ಲಿಸಲು ಬಂದ ಪೇದೆಯಿಂದ ಮಹಿಳೆ ಮೇಲೆ ಅತ್ಯಾಚಾರ!
    • ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    • ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಗರೀಕ ಸಮಾಜ ತಲೆ ತಗ್ಗಿಸುವ ಪರಿಸ್ಥಿತಿ ತುಮಕೂರು ಜಿಲ್ಲೆಯಲ್ಲಿ ನಿರ್ಮಾಣ: ಹಿರಿಯ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಆಕ್ರೋಶ
    ತುಮಕೂರು October 10, 2024

    ನಾಗರೀಕ ಸಮಾಜ ತಲೆ ತಗ್ಗಿಸುವ ಪರಿಸ್ಥಿತಿ ತುಮಕೂರು ಜಿಲ್ಲೆಯಲ್ಲಿ ನಿರ್ಮಾಣ: ಹಿರಿಯ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಆಕ್ರೋಶ

    By adminOctober 10, 2024No Comments3 Mins Read
    gubbi tumakuru

    ವರದಿ : ಮಂಜುಸ್ವಾಮಿ ಎಂ ಎನ್.

    ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸುಮಾರು ವರ್ಷಗಳಿಂದ ಗುಡಿಸಲಲ್ಲಿ ವಾಸವಾಗಿರುವ ನಿರಾಶ್ರಿತರ ಬದುಕನ್ನ ಘನ ಸರ್ಕಾರದ ಸಕಲ ಸೇವಾ ಸೌಲಭ್ಯ ನೀಡಿ ಉತ್ತಮ ಬದುಕನ್ನ ರೂಪಿಸಿ ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ವಿಫಲವಾಗಿದೆ ಎಂದು ಹಿರಿಯ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಗುಬ್ಬಿ ಪಟ್ಟಣದ ಪೊಲೀಸ್ ಠಾಣೆಯ ಹಿಂಭಾಗ ವಾಸವಿರುವ ಸುಮಾರು 42ಕ್ಕೂ ಹೆಚ್ಚು ನಿರ್ಗತಿಕ ಕುಟುಂಬಗಳ ಗೋಳು ಕೇಳೋರು ಯಾರು ಎಂಬುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.

    ಇಲ್ಲಿನ ಬಡವರ ಬದುಕು ನಿಜಕ್ಕೂ ರೋಚಕದ ಸಂಗತಿಯಾಗಿದೆ ಕೆಲವು ದಿನಗಳ ಹಿಂದೆಯಷ್ಟೇ ಭೀಕರವಾಗಿ ಸುರಿದ ಮಳೆಯ ನೀರಲ್ಲಿ ವಯೋವೃದ್ದೆಯೊಬ್ಬರು ಮುಳುಗಿ ಪ್ರಾಣ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ ಹಾಗೂ ಹಾವಿನ ಕಡಿತದಿಂದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಕಾಣಬಹುದಾಗಿದೆ. ಆದರೂ ಕೂಡ ತುಮಕೂರು ಜಿಲ್ಲಾ ಆಡಳಿತ ಮತ್ತು ಗುಬ್ಬಿ ತಾಲ್ಲೂಕು ಆಡಳಿತ ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಹೋರಾಟಗಾರರು ಹರಿಹಾಯ್ದರು.

     

    ಈ ಹಿಂದೆ ಇದ್ದ ಜಿಲ್ಲಾಧಿಕಾರಿಗಳಾದ ಮೋಹನ್,  ಗುಬ್ಬಿ ತಹಶೀಲ್ದಾರ್ ಆಗಿದ್ದ ಮಮತಾ ರವರು ಸಾತೇನಹಳ್ಳಿ ಗ್ರಾಮದ ಸರ್ಕಾರಿ ಸರ್ವೇ ನಂಬರ್ ಒಂದರಲ್ಲಿ ನಿರ್ಗತಿಕ ಕುಟುಂಬಗಳಿಗೆ ನಿವೇಶನ ನೀಡುವ ಉದ್ದೇಶದಿಂದ ಭೂಮಿ ಮಂಜೂರು ಮಾಡಿದ್ದರು. ಕೇವಲ 15 ಕುಟುಂಬಗಳಿಗೆ ಮಾತ್ರ ನಿವೇಶನ ಹಕ್ಕುಪತ್ರವನ್ನು ಸಹ ನೀಡಿದ್ದರು. ಆದರೆ ಸಾತೇನಹಳ್ಳಿ ಗ್ರಾಮದಲ್ಲಿ ಮಂಜೂರು ಮಾಡಲಾಗಿದ್ದ ಜಾಗಕ್ಕೆ ಯಾವುದೇ ಮೂಲಭೂತ ಸೌಕರ್ಯ ಇಲ್ಲದೇ ಇರುವುದು ಜಿಲ್ಲಾ ಆಡಳಿತದ ಗಮನಕ್ಕೆ ಇಲ್ಲವಂತೆ..?

    ವಿಜೃಂಭಣೆ ಕಾರ್ಯಕ್ರಮಗಳಿಗೆ ಮಾತ್ರ ಒತ್ತು ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್:

    ಇದೇ ಸಂದರ್ಭದಲ್ಲಿ ನಿರಾಶ್ರಿತರನ್ನು ಉದ್ದೇಶಿಸಿ ಮಾತನಾಡುವಾಗ ತುಮಕೂರಿನಲ್ಲಿ ಮೊದಲ ಬಾರಿಗೆ ದಸರಾ ಆಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ವೈಭವದಿಂದ ನಡೆಸುತ್ತಿದ್ದು, ಅದಕ್ಕೆ ತೋರುತ್ತಿರುವ ಕಾಳಜಿಯನ್ನ ನಿರಾಶ್ರಿತರ ಉದ್ದಾರಕ್ಕೆ ಯಾಕೆ ತೋರುತ್ತಿಲ್ಲ?  ಬಡವರ ಅಭಿವೃದ್ಧಿಗೆ ಏಕೆ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ ಎನ್ನುವುದು ಆಘಾತದ  ಸಂಗತಿಯಾಗಿದೆ. ಅಲ್ಲಿನ ಬಡವರ ಬದುಕು ರೂಪಿಸಲು ಜಿಲ್ಲಾಧಿಕಾರಿಗಳು ಯಾಕೆ ಸಭೆ ನಡೆಸಲಿಲ್ಲ ಎಂದು ಹಿರಿಯ ಹೋರಾಟಗಾರ ಪ್ರಶ್ನೆ ಮಾಡಿದ್ದಾರೆ.

    ಗುಬ್ಬಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧವೂ ಕಾನೂನು ಕ್ರಮದ ಎಚ್ಚರಿಕೆ:

    ನಿರ್ಗತಿಕರ ಮಕ್ಕಳು ವಿದ್ಯಾಭ್ಯಾಸವಿಲ್ಲದೆ ಅವಿದ್ಯಾವಂತರಾಗುತ್ತಿದ್ದಾರೆ ತಕ್ಷಣವೇ ಸ್ಥಳಕ್ಕೆ ಬಿಇಓ ಭೇಟಿ ನೀಡಬೇಕು ಪುಟ್ಟ ಮಕ್ಕಳ ಸರ್ವೇ ನಡೆಸಿ ಸೂಕ್ತ ಶಿಕ್ಷಣ ನೀಡಬೇಕು. ಇಲ್ಲವಾದರೆ ಕಾನೂನು ಹೋರಾಟದ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಬೇಕಾಗುತ್ತದೆ ಎಂದು ಬಿಇಓಗೆ ಎಚ್ಚರಿಕೆ ಸಂದೇಶ ನೀಡಿದರು.

    ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಬಡ ಜನರಿಗೆ ಸೂಕ್ತ ಭದ್ರತೆ ಆಶ್ರಯಕ್ಕೆ ಸುಸಜ್ಜಿತವಾದ ಜಾಗ ಮೂಲಭೂತ ಸೌಕರ್ಯ ನಿರಾಶ್ರಿತರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗುವುದೇ ಎಂದು ಕಾದು ನೋಡಬೇಕಾಗಿದೆ.

    ಹಂದಿಜೋಗಿ ಮತ್ತು ಬುಡುಗ ಜನಾಂಗದ 42 ಕುಟುಂಬಗಳ ಸಂಕಷ್ಟ:

    ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ಹಿಂಭಾಗದಲ್ಲಿರುವ ಹಂದಿಜೋಗಿ ಮತ್ತು ಬುಡುಗ ಜನಾಂಗದ 42 ಕುಟುಂಬಗಳು ಪ್ರತಿದಿನಾ ಮಾನವೀಯ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯಲ್ಲಿ ಬಡತನದ ಜೀವನ ನಡೆಸುತ್ತಿವೆ. ಈ ಜನಾಂಗದವರು ಯಾವುದೇ ಪಕ್ಕಾ ಮನೆ, ವಿದ್ಯುತ್, ಕುಡಿಯುವ ನೀರು, ಶೌಚಾಲಯ, ಆರೋಗ್ಯ ಸೇವೆ, ಮತ್ತು ಶಿಕ್ಷಣದ ಸೌಲಭ್ಯಗಳಿಲ್ಲದೇ ತಮ್ಮ ದಿನನಿತ್ಯದ ಅಗತ್ಯಗಳನ್ನು ಪೂರೈಸಲು ಹೋರಾಟ ಮಾಡುತ್ತಿದ್ದಾರೆ.

    ಈ ಸಮಸ್ಯೆಯನ್ನು ಬಗೆಹರಿಸಲು, ನೈಜ ಹೋರಾಟಗಾರರ ವೇದಿಕೆ ಮತ್ತು ಕಾಳಜಿ ಫೌಂಡೇಶನ್ ತಂಡವು ಸ್ಥಳೀಯ ಅಧಿಕಾರಿಗಳ ಗಮನ ಸೆಳೆಯಲು ಹೋರಾಟ ಕೈಗೊಂಡಿದೆ. ಈ ಕುಟುಂಬಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದೆ.

    ಸಾತೇನಹಳ್ಳಿಯಲ್ಲಿರುವ ಈ ಕುಟುಂಬಗಳಿಗೆ ಮಂಜೂರಾದ ಎರಡು ಎಕರೆ ಜಮೀನಿನಲ್ಲೂ ಸರ್ಕಾರ ಯಾವುದೇ ಮೂಲಭೂತ ಸೌಲಭ್ಯ ಒದಗಿಸಲು ವಿಫಲವಾಗಿದೆ. ಹೀಗಾಗಿ ಕಾಳಜಿ ಫೌಂಡೇಶನ್ ಹಾಗೂ ನೈಜ ಹೋರಾಟಗಾರರ ವೇದಿಕೆ ಈ ಪ್ರತಿಭಟನೆ ಕೈಗೊಂಡಿತ್ತು.

    ಈ ಹೋರಾಟ ದಲ್ಲಿ ಪ್ರಮುಖರಾದ ಹೆಚ್.ಎಂ. ವೆಂಕಟೇಶ್, ಮಲ್ಲಿಕಾರ್ಜುನ್ ಎಲ್.ಎಸ್., ತಿಪ್ಪೇಸ್ವಾಮಿ ಸಿ.ಪಿ., ಮುದ್ದು ರಂಗಪ್ಪ, ನರಸಿಂಹಮೂರ್ತಿ ಜಿ.ಎನ್., ಹನುಮಂತ ರಾಯಪ್ಪ, ಮತ್ತು ಕಾಳಜಿ ಫೌಂಡೇಶನ್‌ (ರಿ) ತುಮಕೂರು,ನಟರಾಜ್ ಜಿ ಎಲ್,  ರಫೀಕ್, ಶಿವಕುಮಾರ ಮೇಷ್ಟ್ರು ಮನೆ ,ಪದ್ಮನಾಭ, ಗಣೇಶ್ ಮಾರನಹಳ್ಳಿ ,ಸತೀಶ್ ಮುಂತಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ

    July 17, 2025

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    July 11, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ…

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025

    ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ

    July 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.