ರಾಜ್ಯ ಶಿಕ್ಷಣ ನೀತಿಯಲ್ಲಿ ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ಒಂದು ವಾರಕ್ಕೆ ಮೂರು ಗಂಟೆಗಳ ಅವಧಿ ನಿಗದಿಪಡಿಸಿದ್ದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಈ ಹಿಂದೆ ಇದ್ದಂತೆ 4 ಗಂಟೆಗಳ ಸಮಯವನ್ನೇ ಮರು ನಿಗದಿಪಡಿಸಲು ಒಪ್ಪಿಕೊಂಡಿದೆ.
ರಾಜ್ಯ ಶಿಕ್ಷಣ ನೀತಿಯಲ್ಲಿ ನಾಲ್ಕು ವರ್ಷಗಳ ಪದವಿ ರದ್ದು ಮಾಡಿ ಹಿಂದೆ ಇದ್ದಂತೆ ಮೂರು ವರ್ಷದ ಪದವಿಯನ್ನು ಪುನರ್ ಜಾರಿ ಮಾಡಿದ ನಂತರ ಕನ್ನಡ ಭಾಷಾ ಬೋಧನೆಗೆ ಇದ್ದ ಅವಧಿಯನ್ನು ಮೂರು ಗಂಟೆಗೆ ಇಳಿಸಲಾಗಿತ್ತು.
ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಬೋಧನಾ ಅವಧಿ ಕಡಿತ ಮಾಡುವುದು ಕನ್ನಡ ಭಾಷೆಗೆ ಮಾಡುತ್ತಿರುವ ಅನ್ಯಾಯವಾಗಿದ್ದು, ಶೀಘ್ರವೇ ಸರಿಪಡಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ಸಚಿವರು, ಈ ಮೊದಲು ಇದ್ದಂತೆ ನಾಲ್ಕು ಗಂಟೆಗಳಿಗೆ ಮರು ನಿಗದಿ ಮಾಡುವಂತೆ ಎಲ್ಲಾ ವಿವಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬರಗೂರು ರಾಮಚಂದ್ರಪ್ಪ ಅವರ ಕಾಳಜಿ ಬಗ್ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA