nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇದು ಮನೆಯಲ್ಲಿ ಹೆಣ್ಣು ಜನಿಸಿದರೆ ಸಂಭ್ರಮಿಸುವ ಕಾಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ November 27, 2024

    ಇದು ಮನೆಯಲ್ಲಿ ಹೆಣ್ಣು ಜನಿಸಿದರೆ ಸಂಭ್ರಮಿಸುವ ಕಾಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    By adminNovember 27, 2024No Comments2 Mins Read
    lakshmi hebbalkar

    ವಿಜಯಪುರ: ಪ್ರತಿಯೊಬ್ಬ ವಿದ್ಯಾರ್ಥಿಗಳು ತಂದೆ-ತಾಯಿಯ ಕನಸನ್ನು ನನಸು ಮಾಡಬೇಕು. ಇದಕ್ಕೆ ಕಠಿಣ ಶ್ರಮದ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

    ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವತಿಯಿಂದ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಕನ್ನಡದ ಪ್ರಪ್ರಥಮ ಮಹಿಳಾ ಕವಿಯತ್ರಿಯಾದ ಅಕ್ಕಮಹಾದೇವಿ ಅವರು ನಮ್ಮೆಲ್ಲರ ಆದರ್ಶವಾಗಿದ್ದಾರೆ ಎಂದರು.


    Provided by
    Provided by

    ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ. ಪುರುಷರಿಗೆ 100 ಮೀಟರ್ ಓಡಿದರೂ ಗೋಲ್ಡ್ ಮೆಡಲ್ ಸಿಗುತ್ತದೆ. ಆದರೆ, ಸಾವಿರ ಮೀಟರ್ ಓಡಿದರೂ ಮಹಿಳೆಯರಿಗೆ ಮೆಡಲ್ ಕೊಡಲು ಹಿಂದೆ ಮುಂದೆ ನೋಡಲಾಗುತ್ತದೆ ಎಂದು ಸಚಿವರು ಹೇಳಿದರು.

    ಹೆಣ್ಣು ಮಕ್ಕಳಲ್ಲಿ ಪರಸ್ಪರ ಸಹಕಾರ ಇರಬೇಕು. ಇಂದು ಹೆಣ್ಣು ಮಕ್ಕಳು ತೊಟ್ಟಿಲಿಗೆ ಸೀಮಿತವಿಲ್ಲ. ಇಂದು ಹೆಣ್ಣು ಹುಟ್ಟಿದರೂ ಸಂಭ್ರಮ ಪಡುವ ಸಂದರ್ಭದಲ್ಲಿ ನಾವಿದ್ದೇವೆ. ಸುಂದರ ಸಮಾಜ, ಸಂಸ್ಕೃತಿ ದೇಶದಲ್ಲಿ ನಾವಿದ್ದೇವೆ ಎಂದು ಸಚಿವರು ಹೇಳಿದರು.

    ಕಷ್ಟ ಎಲ್ಲರಿಗೂ ಇರುತ್ತದೆ. ಆದರೆ ಗುರಿ ತಲುಪುವುದು ಮುಖ್ಯ, ಗುರಿ ಇಲ್ಲದ ಜೀವನ ಬೋರಗಲ್ಲ ಮೇಲೆ ಮಳೆ ಸುರಿದಂತೆ. ಪ್ರಾಮಾಣಿಕವಾದ ಗುರಿ ಇರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    ಪ್ರತಿಯೊಬ್ಬರು ತಂದೆ ತಾಯಿ ಕನಸುಗಳನ್ನು ಈಡೇರಿಸಬೇಕು. ನಾನೂ ಕೂಡ ಹಿಂದುಳಿದ ಪ್ರದೇಶದಿಂದ ಬಂದಿದ್ದೇನೆ. ಕೆಂಪು ಬಸ್ಸಿನಲ್ಲಿ ಓಡಾಡಿದ್ದೇನೆ‌. ಇಂದಿಗೂ ಅದೇ ಛಲ ನನ್ನಲ್ಲಿದೆ ಎಂದರು‌.

    ಇರುವೆಗಳಿಗೂ ಸ್ವಾಭಿಮಾನ ಇರುತ್ತದೆ. ಮುಂದಾಲೋಚನೆ ಇರುತ್ತದೆ. ಮನುಷ್ಯರಾದ ನಮಗೆ ಮುಂದಿನ 80 ವರ್ಷಕ್ಕೆ ಜೀವನ ರೂಪಿಸುವ ಪರಿಕಲ್ಪನೆ ಬೇಕಲ್ಲವೇ. ವಿದ್ಯಾರ್ಥಿ ಜೀವನ ಗೋಲ್ಡನ್ ಟೈಮ್ ಇದ್ದಂತೆ. ಜೀವನ ವಿಕಸನ ಮಾಡಿಕೊಳ್ಳಲು ಇದು ಪ್ರಮುಖ ಘಟ್ಟ. ದೇಶ ಎತ್ತರಕ್ಕೆ ಬೆಳೆಯುತ್ತಿದೆ, ಇಂದಿನ  ಸ್ಪರ್ಧಾತ್ಮಕ ಯುಗಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಕರೆ ನೀಡಿದರು.

    ಮುಂದೆ ಹುಟ್ಟುವ ನಿಮ್ಮ ಮಕ್ಕಳಿಗೆ ನೀವೇ ಆದರ್ಶವಾಗಿರಿ, ಅರುಣಿಮಾ ಸಿನ್ಹಾ, ಸುಪ್ರಿಯಾ ರಾಯ್ ಅವರಂಥ ಮಹಿಳೆಯರು ಜೀವನದ ಪ್ರತಿಯೊಂದು ಹಂತದಲ್ಲೂ ಸ್ಫೂರ್ತಿಯಾಗಲಿ ಎಂದರು‌.

    ಮಹಿಳೆ ಎಂದರೆ ಸಾಧನೆ, ಜೀವನದಲ್ಲಿ ಸಾಧನೆ ಬಹಳ ಮುಖ್ಯ. ಮಹಿಳೆ ಇಲ್ಲದೆ ಮನೆ ಉಳಿಸಿಕೊಳ್ಳಲು ಸಾಧ್ಯವಿಲ್ಲ. ರಾಜಕೀಯದ ಕೂಡ. ಮಹಿಳಾ ಮೀಸಲಾತಿಯನ್ನು ನಾವೇ ಮಾಡಿದ್ದು, ಆಗ ಬಹುಮತ ಕೊರತೆಯಿಂದ ಲೋಕಸಭೆಯಲ್ಲಿ ಪಾಸ್ ಆಗಲಿಲ್ಲ. ಈಗ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಕೆ.ತುಳಸಿಮಾಲ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.