ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ದೂರಿದರು.
ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ವಿಶೇಷ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನೀಡುತ್ತಿರುವಂತ ಅಭಿವೃದ್ಧಿ ಕೆಲಸಗಳು ನನಗೆ ಶ್ರೀ ರಕ್ಷೆ ಆಗಿತ್ತು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಮುಂದಿನ ದಿನದಲ್ಲೂ ನಾವು ನೀಡುವಂತಹ ಆಶ್ವಾಸನೆಗಳನ್ನು ಇಡೇರಿಸುವ ಮೂಲಕ ಪದವಿ ಹೊಂದಿರುವ ಯುವಕರಿಗೆ ಉದ್ಯೋಗ ಸೇರಿದಂತೆ ಹಲವು ರೀತಿಯ ಉದ್ಯೋಗಕ್ಕೂ ಕೂಡ ಹೆಚ್ಚಿನ ಮುನ್ನಡೆಯನ್ನು ನೀಡಿ ಕೆಲಸ ಮಾಡಲು ಬದ್ಧವಾಗಿದ್ದೇನೆ ಎಂದರು.
ನಾವು ಹೋದ ಕಡೆಯಲ್ಲ ಉತ್ತಮ ಬೆಂಬಲ ಸಿಕ್ಕಿದ್ದು ಗುಬ್ಬಿ ತಾಲೂಕಿನಲ್ಲೂ ಕೂಡ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಈಗಾಗಲೇ ನೋಂದಾವಣೆಯನ್ನು ಮಾಡಿ ಕೊಂಡಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೊಪ್ಪ ದೇವರಾಜು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ರೇಣುಕಪ್ಪ, ಕುಮಾರ್, ಬಸಣ್ಣ, ಪ್ರಸನ್ನ ಕುಮಾರ್, ಬಿದರ ಯತೀಶ್, ಡಾಬ ಕುಮಾರ್, ವಾಸು ಗೌಡ, ಡಾಕ್ಟರ್ ಖಾನ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


