ಗದಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ತೇಲಿ (26) ಸಾವಕ್ಕ ತೇಲಿ (40) ರೇಣವ್ವ (39) ಆತ್ಮಹತ್ಯೆಗೆ ಶರಣಾದವರು.
ಟ್ರ್ಯಾಕ್ಟರ್ ಖರೀದಿಗೆ ಮಾಡಿದ ಸಾಲ ತೀರಿಸಲಾಗದೇ ಮನನೊಂದ ತಾಯಿ ಮಗ ರೈಲಿಗೆ ತಲೆಕೊಟ್ಟಿದ್ದಾರೆ. ಈ ವಿಷಯ ತಿಳಿದ ಕುಟುಂಬದ ಮತ್ತೊರ್ವ ಮಹಿಳೆ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಂಜುನಾಥ್ ಟ್ರ್ಯಾಕ್ಟರ್ ಖರೀದಿಗೆ ಸಾಲ ಮಾಡಿಕೊಂಡಿದ್ದು, ಸಾಲ ಮರುಪಾವತಿಸಲು ಸಾಧ್ಯವಾಗದೇ ಮನನೊಂದಿದ್ದ, ಮಗನ ಜೊತೆ ತಾಯಿ ರೇಣವ್ವ ಕೂಡ ಯಲವಿಗೆ ರೈಲು ನಿಲ್ದಾಣದ ಬಳಿ ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಗೋನಾಳ ಗ್ರಾಮದ ಮನೆಯಲ್ಲಿ ಸಾವಕ್ಕ ಕೂಡ ನೇಣಿಗೆ ಶರಣಾಗಿದ್ದಾರೆ.
ಒಂದೇ ಕುಟುಂಬದ ಮೂವರು ಸಾಲಕ್ಕೆ ಬಲಿಯಾಗಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


