nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಲ್ಲಿ ರಸ್ತೆ ಗುಂಡಿಗಳೇ ಇಲ್ಲವಂತೆ..! ಹೈಕೋರ್ಟ್‌ಗೆ ಮಹಾನಗರ ಪಾಲಿಕೆ ವರದಿ ಸಲ್ಲಿಕೆ
    ತುಮಕೂರು August 9, 2022

    ತುಮಕೂರಲ್ಲಿ ರಸ್ತೆ ಗುಂಡಿಗಳೇ ಇಲ್ಲವಂತೆ..! ಹೈಕೋರ್ಟ್‌ಗೆ ಮಹಾನಗರ ಪಾಲಿಕೆ ವರದಿ ಸಲ್ಲಿಕೆ

    By adminAugust 9, 2022No Comments2 Mins Read
    thumakur

    ತುಮಕೂರು: ಸ್ಮಾರ್ಟ್‌ಸಿಟಿ ತುಮಕೂರಲ್ಲಿ ರಸ್ತೆಗುಂಡಿಗಳೇ ಇಲ್ಲ! ಗುಂಡಿ ಮುಕ್ತ ಮಹಾನಗರ! ಹೀಗಂತ ಸ್ವತಃ ಮಹಾನಗರ ಪಾಲಿಕೆ ಘೋಷಿಸಿದೆ. ಇದು ಬರೀ ಘೋಷಣೆಯಲ್ಲ ಹೈಕೋರ್ಟ್‌ಗೆ ಸಲ್ಲಿಸಿರುವ ವರದಿ! ಆದರೆ, ಮಹಾನಗರ ಪಾಲಿಕೆ ಒಮ್ಮೆ ಬಿಡುವು ಮಾಡಿಕೊಂಡು ನಗರ ಪರ್ಯಟನೆ ಮಾಡಿದರೆ ಗುಂಡಿಗಳ ದಿಗ್ದರ್ಶನವಾಗುತ್ತದೆ. ಆದರೂ ಯಾವ ಮಾನದಂಡದಡಿ ಬಣ್ಣ-ಬಣ್ಣ ಛಾಯಾಚಿತ್ರಗಳ ಸಹಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತು ಎಂಬುದು ಪ್ರಶ್ನೆ.

    ಮಹಾನಗರ ಪಾಲಿಕೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಯಾವುದೇ ಗುಂಡಿಗಳು ಕಂಡುಬಂದರೆ ಸಾರ್ವಜನಿಕರು ಗಮನಕ್ಕೆ ತಂದರೆ ಕೂಡಲೇ ಬಗೆಹರಿಸುವುದಾಗಿ ಪಾಲಿಕೆ ಹೇಳಿದೆ. ನಗರದ ಕುಣಿಗಲ್‌ ರಸ್ತೆ ಸೇರಿದಂತೆ ನಾನಾ ಮುಖ್ಯ ರಸ್ತೆಗಳು, ರಸ್ತೆಗಳು ಗುಂಡಿಮಯವಾಗಿವೆ. ಇದು ಪಾಲಿಕೆ ಕಣ್ಣಿಗೆ ಕಾಣದಿರುವುದು ಆಶ್ಚರ್ಯ.


    Provided by
    Provided by

    ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸುವ ಸಂಬಂಧ ಕದರನಹಳ್ಳಿ ತಾಂಡ್ಯದ ವಕೀಲ, ಜನಪರ ಹೋರಾಟಗಾರ ರಮೇಶ್‌ನಾಯಕ್‌. ಎಲ್‌. 2021 ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಮಹಾನಗರ ಪಾಲಿಕೆಗೆ ನೋಟಿಸ್‌ ನೀಡಿತ್ತು.ಮಹಾನಗರ ಪಾಲಿಕೆ ಪ್ರಮುಖ ರಸ್ತೆಗಳ ಫೋಟೋ ಸಹಿತ ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

    ಕರೆ ಮಾಡಿದರೆ ಕ್ರಮ: ತುಮಕೂರು ನಾಗರಿಕರು ರಸ್ತೆ ಗುಂಡಿಗಳ ಬಗ್ಗೆ ದೂರುಗಳಿದ್ದರೆ 0816-2272200ಗೆ ಕರೆ ಮಾಡಬಹುದು ಅಥವಾ ಮೊಬೈಲ್‌ 9449872599 ಸಂಪರ್ಕಿಸಬಹುದು. ಈ ಸಂಖ್ಯೆಗಳನ್ನು ನಗರದ ಎಲ್‌ಇಡಿ ಫಲಕದಲ್ಲೂ ಪ್ರಸಾರ ಮಾಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ವರದಿಯಲ್ಲಿ ತಿಳಿಸಿದೆ. ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಪಾಲಿಕೆಯ ಕಣ್ತೆರೆಸಬೇಕಿದೆ.

    ಆಕ್ಷೇಪಣೆಗೆ ಸಲ್ಲಿಕೆಗೆ ನಿರ್ಧಾರ: ಹೊಸ ರಸ್ತೆಗಳ ಬಣ್ಣ-ಬಣ್ಣದ ಫೋಟೋಗಳ ಸಹಿತ ಮಹಾನಗರ ಪಾಲಿಕೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ. ನಾನಾ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ ನಿಜ. ಆದರೆ, ನಗರ ಇನ್ನೂ ‘ರಸ್ತೆ ಗುಂಡಿ ಮುಕ್ತ’ವಾಗಿಲ್ಲ. ಹೀಗಾಗಿ ರಿಯಾಲಿಟಿ ಚೆಕ್‌ ನಡೆಸಿದ್ದೇನೆ. ಈ ಬಗ್ಗೆ ಆಧಾರಸಹಿತ ಆಕ್ಷೇಪಣೆ ಸಲ್ಲಿಸುವುದಾಗಿ ವಕೀಲ ರಮೇಶ್‌ನಾಯಕ್‌.ಎಲ್‌. ತಿಳಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ಮಹಾನಗರ ಪಾಲಿಕೆ ಗಮನಕ್ಕೆ ರಸ್ತೆ ಗುಂಡಿಗಳ ಬಗ್ಗೆ ತಿಳಿಸಿ ಗುಂಡಿ ಮುಕ್ತ ನಗರವನ್ನಾಗಿಸುವ ಹೋರಾಟಕ್ಕೆ ಸಹಕರಿಸಿ ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.
    ರಸ್ತೆ ಗುಂಡಿಗಳಿಗೇನು ಬರವಿಲ್ಲ!

    ಮಹಾನಗರ ಪಾಲಿಕೆ ಯಾವ ಲೆಕ್ಕಾಚಾರದಲ್ಲಿ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ವರದಿ ಸಲ್ಲಿಸಿದೆಯೋ ಗೊತ್ತಿಲ್ಲ. ಆದರೆ, ನಗರದ ಪ್ರಮುಖ ರಸ್ತೆಗಳಲ್ಲೇ ಸಾಕಷ್ಟು ಗುಂಡಿಗಳಿವೆ. ವಾಹನಗಳು ಓಡಾಡದ ದುಸ್ಥಿತಿಯೂ ಇದೆ.
    ಮುಖ್ಯಾಂಶಗಳು

    – ರಸ್ತೆ ಗುಂಡಿಗಳ ಬಗ್ಗೆ ಹೈಕೋರ್ಟ್‌ಗೆ ಮಹಾನಗರ ಪಾಲಿಕೆ ವರದಿ ಸಲ್ಲಿಕೆ
    – ಗುಂಡಿಗಳಿಗೆ ಮುಕ್ತಿ ಹಾಡಿರುವುದಾಗಿ ಚಿತ್ರಸಹಿತ ವರದಿ
    – ರಸ್ತೆ ಗುಂಡಿಗಳಿದ್ದರೆ 0816-2272200 ಅಥವಾ 9449872599 ಸಂಪರ್ಕಿಸುವಂತೆ ತಿಳಿಸಿರುವ ಮಹಾನಗರ ಪಾಲಿಕೆ
    – ಆಕ್ಷೇಪಣೆ ಸಲ್ಲಿಕೆಗೆ ವಕೀಲ ರಮೇಶ್‌ನಾಯಕ್‌.ಎಲ್‌. ನಿರ್ಧಾರ
    ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಈ ಬಗ್ಗೆ ಕೈಗೊಂಡಿರುವ ಕ್ರಮದ ಬಗ್ಗೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದೇವೆ. ಇನ್ನೂ ಎಲ್ಲಾದರೂ ರಸ್ತೆ ಗುಂಡಿಗಳು ಕಂಡು ಬಂದರೆ ಸಾರ್ವಜನಿಕರು ಗಮನಕ್ಕೆ ತಂದರೆ ಕೂಡಲೇ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸುತ್ತೇವೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ರು.
    ಇನ್ನು ರಸ್ತೆಗುಂಡಿಗಳನ್ನು ಮುಚ್ಚಿದ್ದೇವೆಂದು ಹೈಕೋರ್ಟ್‌ಗೆ ಮಹಾನಗರ ಪಾಲಿಕೆ ವರದಿ ನೀಡಿದೆ. ಆದರೆ, ನಗರದಾದ್ಯಂತ ಇನ್ನೂ ಮರಣ ಗುಂಡಿಗಳಾಗಿರುವ ರಸ್ತೆ ಗುಂಡಿಗಳಿವೆ. ಹೀಗಾಗಿ ಆಕ್ಷೇಪಣೆ ಸಲ್ಲಿಸುತ್ತಿದ್ದೇನೆ ಎಂದು ಹೈಕೋರ್ಟ್‌ ವಕೀಲ ರಮೇಶ್‌ನಾಯಕ್‌.ಎಲ್‌. ಹೇಳಿದ್ರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಸರಗೂರು:  ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ…

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.