nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತ್ಯಾಜ್ಯ ಸಂಗ್ರಹ ಘಟಕವಾಗಿ ಬದಲಾಗುತ್ತಿರುವ ಕೆರೆ: ಕುಡುಕರ ಸ್ವರ್ಗ, ಅನೈತಿಕ ಚಟುವಟಿಕೆಯ ತಾಣ!
    ಸ್ಪೆಷಲ್ ನ್ಯೂಸ್ December 13, 2021

    ತ್ಯಾಜ್ಯ ಸಂಗ್ರಹ ಘಟಕವಾಗಿ ಬದಲಾಗುತ್ತಿರುವ ಕೆರೆ: ಕುಡುಕರ ಸ್ವರ್ಗ, ಅನೈತಿಕ ಚಟುವಟಿಕೆಯ ತಾಣ!

    By adminDecember 13, 2021No Comments2 Mins Read
    antharasante

    ಅಂತರಸಂತೆ: ವಿಶಾಲವಾದ ಸ್ಥಳಾವಕಾಶವಿದ್ದರೂ ಸರಿಯಾದ ನಿರ್ವಹಣೆಯ ಕೊರತೆಯಿಂದಾಗಿ ಇದೀಗ ಕೆರೆಯೊಂದು ನೀರಿನ ಬದಲು ತ್ಯಾಜ್ಯಗಳಿಂದಲೇ ತುಂಬುವ ಹಂತವನ್ನು ತಲುಪಿದ್ದು, ಗ್ರಾಮದ ಕೆರೆಯನ್ನು ರಕ್ಷಣೆ ಮಾಡಬೇಕು ಎಂಬ ಕೂಗು ಅಂತರಸಂತೆ ಗ್ರಾಮಸ್ಥರಿಂದ ಕೇಳಿಬಂದಿದೆ.

    ಹೌದು, ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿನ ಮುಖ್ಯ ಕೆರೆ ಇದೀಗ ನಿರ್ವಹಣೆಯ ಸಮಸ್ಯೆಯಿಂದಾಗಿ ಪ್ಲಾಸ್ಟಿಕ್ ಮಯವಾಗುವ ಜೊತೆಗೆ ಅನೈತಿಕ ಚಟುವಟಿಕೆಯ ತಾಣವಾಗಿ ಬದಲಾಗುತ್ತಿದ್ದು, ಕೆರೆಯ ಸುತ್ತಲು ತ್ಯಾಜ್ಯ ಸಂಗ್ರಹವಾಗುತ್ತಿದೆ. ಮೈಸೂರು ಮಾನಂದವಾಡಿ ಮುಖ್ಯರಸ್ತೆಯ ಬದಿಯಲ್ಲಿ ಈ ಕೆರೆಯಿದ್ದು, ಅಂತರಸಂತೆ ಸೇರಿದಂತೆ ನೂರಲಕುಪ್ಪೆ, ನೂರಲಕುಪ್ಪೆ ಬಿ. ಗ್ರಾಮಗಳ ಕೃಷಿ ಮತ್ತು ದನಕರುಗಳಿಗೆ ನೀರಿನ ಮೂಲವಾಗಿದೆ. ಸಧ್ಯ ಈ ಕೆರೆಯನ್ನು ಸ್ವಚ್ಛಗೊಳಿಸಿ ಸ್ಥಳೀಯ ಜಾನುವಾರುಗಳಿಗೆ ನೀರಿಗೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.


    Provided by
    Provided by

    ಸಮರ್ಪಕ ದಾರಿ ಇಲ್ಲ: ಇನ್ನೂ ಕೆರೆಯ ಸುತ್ತಲು ಸಂಪೂರ್ಣ ಲಾಂಟನಾದಂತಹ ಕಳೆ ಸಸ್ಯಗಳು ಹೆಚ್ಚಾಗಿ ಬೆಳೆದುಕೊಂಡಿವೆ. ಇದರಿಂದಾಗಿ ಕೆರೆಯ ಅಂಗಳದಲ್ಲಿ ದನಕರುಗಳಿಗೆ ಸರಿಯಾದ ಮೇವು ಸಹ ಸಿಗದಂತಾಗಿದೆ. ಅಲ್ಲದೇ ಕೆರೆಗೆ ಹೋಗಲು ಇದ್ದ ಮಾರ್ಗಗಳ ಪೈಕಿ ಸಾಕಷ್ಟು ಮಾರ್ಗಗಳು ಈಗಾಗಲೇ ಗಿಡಗಂಟೆಗಳಿಂದ ಮುಚ್ಚಿ ಹೋಗಿದ್ದು, ಕಾಲುದಾರಿಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ. ಗ್ರಾಮದ ಮುಖ್ಯದ್ವಾರದ ಮತ್ತು ಗ್ರಾಮ ಪಂಚಾಯಿತಿಯ ಎದುರು ಭಾಗದಲ್ಲಿ ಕೆರೆಗೆ ಮುಖ್ಯ ಮಾರ್ಗವಿದ್ದು, ಅದು ಸಂಪೂರ್ಣ ಮುಚ್ಚಿ ಹೋಗಿ ಸಾಕಷ್ಟು ತಿಂಗಳುಗಳೇ ಕಳೆದರು ತೆರವು ಮಾಡಿ ಸಮರ್ಪಕ ರಸ್ತೆ ನಿರ್ಮಾಣ ಮಾಡದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

    ಮದ್ಯವ್ಯಸನಿಗಳ ತಾಣವಾಗಿರುವ ಕೆರೆ: ಇದರೊಂದಿಗೆ ಕೆರೆಯ ಆವರಣದಲ್ಲಿ ಮದ್ಯವ್ಯಸನಿಗಳ ಆವಳಿ ಹೆಚ್ಚಾಗ ತೊಡಗಿದ್ದು, ಕೆರೆಯ ಅಂಗದಲ್ಲಿ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಬಾಟಲಿಗಳು, ಕವರ್ ಗಳು ಸೇರುವಂತಾಗಿದೆ. ಅಲ್ಲದೇ ಅಲ್ಲಲ್ಲಿ ಇಸ್ಪಿಟ್ ಕಾರ್ಡ್‍ಗಳು ಸಹ ಕೆರೆಯ ಅಂಗಳದಲ್ಲಿ ಹರಡಿದ್ದು, ಸಮೀಪದಲ್ಲಿ ಜೂಜು ಅಡ್ಡೆಗಳು ಹೆಚ್ಚಾಗಿರುವ ಅನುಮಾನಗಳು ಉಂಟಾಗುವಂತೆ ಮಾಡಿದೆ.

    ಸ್ವಚ್ಛತೆಯಿಂದ ದೂರ ಉಳಿದಿರುವ ಕೆರೆ: ಇನ್ನೂ ಕೆರೆಯನ್ನು ಜನರು ಮೈಸೂರು ಮಾನಂದವಾಡಿ ಮಾರ್ಗವಾಗಿ ಓಡಾಡುವ ಪ್ರಯಾಣಿಕರು ಮಲ ಮೂರ್ತ ವಿಸರ್ಜನೆ ಮಾಡವ ಸ್ಥಳವನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದ ಕೆರೆ ಸಂಪೂರ್ಣ ಮಾಲಿನ್ಯವಾಗಿದ್ದು, ಇದಕ್ಕೆ ಕಡಿವಾಣ ಹಾಕಿ ಕೆರೆಯೂ ಸ್ವಚ್ಛತೆಯಿಂದಿರುವಂತೆ ನೋಡಿಕೊಳ್ಳಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

    ಈ ಬಾರಿ ಉತ್ತಮ ಮಳೆಯಾಗಿದ್ದು, ಕೆರೆ ಸಂಪೂರ್ಣ ತುಂಬವ ಅವಕಾಶವಿತ್ತು. ಆದರೆ ಕೆರೆಯಲ್ಲಿ ಗಿಡಗಂಟಿಗಳು ಹೆಚ್ಚಾಗಿರುವ ಕಾರಣ ಕೆರೆ ತುಂಬಲು ಸಾಧ್ಯವಾಗಿಲ್ಲ. ಇದರೊಂದಿಗೆ ಕೆರೆಯೂ ಒತ್ತುವರಿಯಾಗಿದೆ ಎಂಬ ಆರೋಪವು ಸಹ ಹೆಚ್ಚಾಗಿ ಕೇಳಿ ಬಂದಿದ್ದು, ಸಂಬಂಧಪಟ್ಟವರು ಅದನ್ನು ತೆರವು ಮಾಡಿ ಕೆರೆಯನ್ನು ಸ್ವಚ್ಛಗೊಳಿಸಿ ಉತ್ತಮ ವಾಯುವಿಹಾರದ ತಾಣವಾಗಿ ಮಾಡಬೇಕು ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ.

    “ಸುತ್ತಲಿನ ಗ್ರಾಮಗಳ ನೀರಿನ ಮೂಲ ನಮ್ಮ ಅಂತರಸಂತೆಯ ಕೆರೆಯಾಗಿದೆ. ಸದ್ಯ ಈ ಕೆರೆ ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದಿಂದಾಗಿ ಅನೈರ್ಮಲ್ಯವಾಗುವ ಜೊತೆಗೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಕೆರೆಯನ್ನು ಕಾಪಾಡುವಲ್ಲಿ ಗಮನ ನೀಡಬೇಕು.”

          -ಮಹೇಶ್, ಅಂತರಸಂತೆ, ಗ್ರಾಮಸ್ಥ

     

    “ಕೆರೆಯೂ ಒತ್ತುವರಿಯಾಗಿದೆ ಎಂದು ದೂರು ನೀಡಿದಂತ ಸಂದರ್ಭದಲ್ಲಿ ಅಳತೆ ಮಾಡಲು ಬಂದಿದ್ದರು. ಆದರೆ ಸಂಪೂರ್ಣ ಅಳತೆ ಮಾಡಲಿಲ್ಲ. ಈ ಬಗ್ಗೆ ನಾವು ಸಾಕಷ್ಟು ದೂರು ನೀಡಿದ್ದೇವೆ. ಸಂಪೂರ್ಣ ಅಳತೆ ಮಾಡಿ ಕೆರೆಗೆ ಸೂಕ್ತ ದಾರಿಗಳನ್ನು ಮಾಡಿ ವಾಯುವಿಹಾರಕ್ಕೆ ಅವಕಾಶ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು.”

       -ಬುದ್ಧ ಪ್ರಕಾಶ್, ಭೀಮ್ ಆರ್ಮಿ ಸಂಘಟನೆಯ ಅಧ್ಯಕ್ಷ, ಅಂತರಸಂತೆ

     

    “ಜನವರಿ ಕಳೆದ ನಂತರ ಕೆರೆಯ ಸ್ವಚ್ಛತೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಘ ಮತ್ತು ಗ್ರಾಮದ ಮುಖಂಡರನ್ನು ಒಳಗೊಂಡಂತೆ ಸಮಿತಿ ರಚಿಸಿ ಕೆರೆಯನ್ನು ಸ್ವಚ್ಛಗೊಳಿಸಲಾಗುವುದು. ಇನ್ನೂ ಕೆರೆಯಲ್ಲಿ ಮಧ್ಯವ್ಯಸನಿಗಳು ಮತ್ತು ಜೂಜುಕಾರರ ಹಾವಳಿ ತಪ್ಪಿಸಲು ಪೊಲೀಸ್ ಇಲಾಖೆಯ ನೆರವು ಪಡೆಯಲಾಗುವುದು.”

          -ಆರ್.ಕೆ.ಚಿದಾನಂದಸ್ವಾಮಿ, ಪಿಡಿಒ, ಅಂತರಸಂತೆ

    ಜನವರಿ ಕಳೆದ ನಂತರ ಸ್ವಚ್ಛತೆಗೆ ಸಿದ್ಧವಾಗಿದೆ. ಮೊದಲು ಕೆರೆಯ ಸಚ್ಛತೆಯ ಕಡೆ ಹೆಚ್ಚಿನ ಗಮನ ನೀಡಲಾಗುವುದು. ಆನಂತರ ಕೆರೆಯ ಉಳಿದ ವಿಚಾರಗಳನ್ನು ಬಗೆಹರಿಸಿ ಅಭಿವೃದ್ಧಿ ಮಾಡಲಾಗುವುದು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ಅಭಿವೃದ್ಧಿ ಕೆಲಸ ಆರಂಭಗೊಳ್ಳಲಿದೆ.

         -ಕಲೀಂಪಾಷ, ಅಧ್ಯಕ್ಷರು, ಅಂತರಸಂತೆ ಗ್ರಾಪಂ

    admin
    • Website

    Related Posts

    “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!

    April 14, 2026

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.