nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊನೆಗೂ ಸೆರೆಯಾದ ಹುಲಿರಾಯ: ನಿಟ್ಟುಸಿರು ಬಿಟ್ಟ ಅಧಿಕಾರಿಗಳು, ಗ್ರಾಮಸ್ಥರು!
    ಜಿಲ್ಲಾ ಸುದ್ದಿ October 12, 2025

    ಕೊನೆಗೂ ಸೆರೆಯಾದ ಹುಲಿರಾಯ: ನಿಟ್ಟುಸಿರು ಬಿಟ್ಟ ಅಧಿಕಾರಿಗಳು, ಗ್ರಾಮಸ್ಥರು!

    By adminOctober 12, 2025No Comments2 Mins Read
    sargur

    ಸರಗೂರು:  ಜಯಲಕ್ಷೀಪುರ ಹಾಗೂ ಶಿವಪುರ ಕೆಲ ದಿನಗಳ ಹಿಂದೆ ಜಾನುವಾರು ಮತ್ತು ಮೇಕೆ ಗಳನ್ನು ಬಲಿ ಪಡೆದುಕೊಂಡು ಜಮೀನು ಅಕ್ಕಪಕ್ಕದ ಗ್ರಾಮಗಳ ರೈತರು ಹಾಗೂ ಜನರನ್ನು ಭಯಭೀತರಾಗಿ ಮಾಡಿ, ಶಿವಪುರ ನಾಗರಾಜ ಬೋವಿರವರ ಜಮೀನಿನಲ್ಲಿ ಅವಿತು ಕುಳಿತಿದ್ದ ನರಭಕ್ಷಕ ಹುಲಿ ಮತ್ತೆ ಕಾಣಿಸಿಕೊಂಡಿತ್ತು ಇದೀಗ ಹುಲಿಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ತಿಳಿಸಿದರು.

    11 ರಿಂದ 12 ವರ್ಷದ ಹುಲಿಯನ್ನು ಸೆರೆ ಹಿಡಿಯಲಾಗಿದೆ.  ಬಂಡೀಪುರ ರಾಷ್ಟ್ರೀಯ ಹೆಡಿಯಾಲ ವಲಯ ವ್ಯಾಪ್ತಿಯ ಜಯಲಕ್ಷೀಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಸೆ.29 ರಂದು ಹುಲಿ ಮೇಕೆ ಹಸುಯನ್ನು ಕೊಂದು ತಿಂದಿತ್ತು. ವಿಷಯ ಮುಟ್ಟಿಸಿದ್ದ ಹಿನ್ನೆಲೆಯಲ್ಲಿ ಬಂದಿದ್ದ ಅರಣ್ಯ ಇಲಾಖೆಯವರು ಹುಲಿ ಸೆರೆಗೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತರು ದಿಗ್ಬಂಧನ ವಿಧಿಸಿದ್ದರು.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ–ವಿಭಾಗದ ವ್ಯಾಪ್ತಿಯ ಹೆಡಿಯಾಲ ವಲಯದ ಚಿಕ್ಕಬರಗಿ ಶಾಖೆಯ ಅಳಲಹಳ್ಳಿ ಗಸ್ತಿನ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಹುಲಿಯು ಅರಣ್ಯ ಪ್ರದೇಶದಿಂದ ಹೊರಬಂದು ಜನವಸತಿ ಪ್ರದೇಶಗಳಲ್ಲಿ ಮಂಗಳವಾರರಿಂದ ಬೀಡುಬಿಟ್ಟಿದ್ದು, ಜಾನುವಾರು ಹತ್ಯೆಗಳನ್ನು ನಿರತಂರವಾಗಿ ಮಾಡುತ್ತಲೇ ಇರುತ್ತದೆ, ಈ ಸಂಬಂಧ ಸಿಬ್ಬಂದಿಗಳ ತಂಡವನ್ನು ರಚಿಸಿ ನಿರತಂತವಾಗಿ ಕೂಂಬಿಂಗ್ ಕಾರ್ಯ ನಡೆಸಿದ್ದು 03 ಕಡೆ ಬೋನುಗಳನ್ನು ಇರಿಸಲಾಗಿತ್ತು. ಇದರ ಫಲವಾಗಿ ಭಾನುವಾರರಂದು ಬೆಳಿಗೆ, 8 ಗಂಟೆಯಲ್ಲಿ ಶಿವಪುರ ಮುಂಟಿಯ ಬಳಿ ಅಳವಡಿಸಲಾಗಿದ್ದ ಬೋನಿನಲ್ಲಿ ಹುಲಿಯು ಸೆರೆಯಾಗಿದ್ದು, ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಂಡೀಪುರ ರವರ ಮಾರ್ಗದರ್ಶನದಲ್ಲಿ ಇಲಾಖಾ ಪಶುವೈಧ್ಯಾಧಿಕಾರಿ ವಸಿಂ ಮಿರ್ಜಾ ರವರ ನೇತೃತ್ವದಲ್ಲಿ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಹುಲಿಯನ್ನು ಸುರಕ್ಷಿತವಾಗಿ ಹಿಡಿಯಲಾಗಿದ್ದು, ಹುಲಿಯು ಹೆಣ್ಣಾಗಿದ್ದು, ಅಂದಾಜು 11 ರಿಂದ 12 ವಯಸ್ಸು ಆಗಿರಬಹುದೆಂದು ಅಂದಾಜಿಸಲಾಗಿರುತ್ತದೆ. ಹುಲಿಯ ಕಾಲು ಹಾಗೂ ಭುಜಗಳು ಗಾಯಗೊಂಡಿದ್ದು, ಹಲ್ಲು ಹಾಗೂ ದವಡೆಗಳು ಶಕ್ತಿಹೀನವಾಗಿರುವ ಬಗ್ಗೆ, ವೈಧ್ಯಾಧಿಕಾರಿಗಳು ತಿಳಿಸಿದ್ದು, ಚಿಕಿತ್ಸೆ ಹಾಗೂ ಶುಶ್ರೂಷೆಗಾಗಿ ಬನ್ನೇರುಘಟ್ಟ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲು ಕ್ರಮವಹಿಸಲಾಗಿರುತ್ತದೆ.

    ಹುಲಿ ಸೆರೆ ಅನಿವಾರ್ಯ:

    ಜಯಲಕ್ಷೀಪುರ, ಶಿವಪುರ, ಮೂಗತನಮೂಳೆ, ಕಾನಕನಹಳ್ಳಿ  ಗ್ರಾಮಗಳ ಸುತ್ತಮುತ್ತಲೂ ಕಳೆದ ಒಂದು ವಾರದಿಂದ ಆಗಾಗ್ಗೆ ಹುಲಿ ಕಾಣಿಸಿಕೊಳ್ಳುತ್ತಿದೆ. ಇದರಿಂದ ಜಾನುವಾರು ಹಾಗೂ ಮೇಕೆ ಬಲಿ ತೆಗೆದುಕೊಳ್ಳುತ್ತಿತ್ತು. ರಾತ್ರಿ ವೇಳೆ ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ. ಆದ್ದರಿಂದ ಹುಲಿ ಸೆರೆ ಅನಿವಾರ್ಯವಾಗಿದ್ದು, ಸೆರೆ ಸಿಕ್ಕುವ ತನಕ ಕೂಂಬಿಂಗ್‌ ಕಾರ್ಯಾಚರಣೆ ನಡೆಸಬೇಕು ಎಂದು ಗ್ರಾಮದ ರೈತ ಮುಖಂಡರು ಒತ್ತಾಯಿಸಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಒತ್ತಾಯದ ಮೇರೆಗೆ ಬೋನನ್ನು ಇಟ್ಟು ಹುಲಿಯನ್ನು ಹಿಡಿಯುವ ತನಕ ಅಕ್ಕಪಕ್ಕದ ಗ್ರಾಮಸ್ಥರು ಜಾಗವನ್ನು ಬಿಟ್ಟು ಕದಲಲಿಲ್ಲ.

    ಸುತ್ತಮುತ್ತಲ ಪ್ರದೇಶದಲ್ಲಿ ಹುಲಿ ತಿರುಗಾಡುತ್ತಿರುವುದು ರೈತರಿಗೆ ತಿಳಿದಿತ್ತು. ಶನಿವಾರರಂದು  ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಶಿವಪುರ ಗ್ರಾಮಕ್ಕೆ ಸೇರಿದ ನಾಗರಾಜಬೊವಿ ಜಮೀನಿನಲ್ಲಿ ಹುಲಿ ಅಲ್ಲೇ ಇದೆ ಎಂದು ಬೋನು ಇಟ್ಟು ಬೋನಿನ ಒಳಗಡೆಗೆ ಮೇಕೆ ಮರಿಯನ್ನು ತಿಂದು. ಈ ದೃಶ್ಯವನ್ನು ರೈತರು ದೂರದಿಂದಲೇ ಸೆರೆ ಹಿಡಿದಿದ್ದರು. ಈ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಭಾನುವಾರ  ಹುಲಿ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆಗೆ ಎಸಿಎಫ್‌ ಸತೀಶ್ ಚಾಲನೆ ನೀಡುವ ಜತೆಗೆ ಪಾಲ್ಗೊಳ್ಳುವ ಮೂಲಕ ಆರಂಭಗೊಂಡ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ನೌಕರರು ಪ್ರಮುಖ ಸ್ಥಳಗಳಲ್ಲಿ ಶೋಧ ನಡೆಸಿದರು.

    ಈ ಸಂದರ್ಭಲ್ಲಿ ಬಂಡಿಪುರ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರು, ಪ್ರಭಾರಕರನ್ ಎಸ್., ಹೆಡಿಯಾಲ ಉಪ–ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎ.ವಿ ಹೆಡಿಯಾಲ ವಲಯದ ಅರಣ್ಯಾಧಿಕಾರಿ ಮುನಿರಾಜು ವಿ., ಉಪ ವಲಯ ಅರಣ್ಯಾಧಿಕಾರಿ ರಘುನಾಥ್ ದೇಗೌಡ, ಕಾರ್ತಿಕ್ ಎನ್. ನಾಯ್, ಸೋಮ ಕೆ., ಇಲಾಖಾ ಪಶುವೈದ್ಯಾಧಿಕಾರಿ ವಸಿಂ ಮಿರ್ಜಾ ಹಾಗೂ ಹೆಡಿಯಾಲ ವಲಯದ ಸಿಬ್ಬಂದಿಗಳು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಹೊಳೆನರಸೀಪುರ: ತಾಲ್ಲೂಕಿನ ತಾತನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯಾಧಿಕಾರಿಗಳಿಲ್ಲದೆ ರೋಗಿಗಳು ದಿನನಿತ್ಯ ಪರದಾಡುವಂತಾಗಿದ್ದು, ಗ್ರಾಮೀಣ ಭಾಗದ…

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.