ತುಮಕೂರು: ಇಕೊ–ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ಮತ್ತು ಡಬ್ಲೂ.ಎಫ್.ವಿ ಸಂಸ್ಥೆ ತುಮಕೂರು ಇವರ ಸಂಯುಕ್ತ ಆಶ್ರಯದೊಂದಿಗೆ ಪರಿಸರ ಕಾಳಜಿಯ ಭಾಗವಾಗಿ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ಮತ್ತು ನೀರಿನ ತೊಟ್ಟಿಗಳನ್ನು ವಿತರಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ (ವಾಟರ್ ಫಾರ್ ವಾಯಿಸ್ ಲೈಸ್ ಫೌಂಡೇಶನ್) ಸಂಸ್ಥಾಪಕರಾದ ಜೈನ್ ಸನ್ನಿ ಹಸ್ತಿಮಲ್ ರವರು ವಿವಿಧ ರೀತಿಯ ಮೂಕ ಪ್ರಾಣಿಗಳು ಮತ್ತು ಪಕ್ಷಿಗಳು ಕುಡಿಯುವ ನೀರಿನ ಅವಶ್ಯಕತೆ ಮತ್ತು ಅದನ್ನು ಒದಗಿಸುವ ನಮ್ಮ ಪಾತ್ರ ಕುರಿತು ವಿಡಿಯೋ ಸಂವಾದದ ಮೂಖಾಂತರ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಇದೇ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ ಸಂಸ್ಥೆಯಿಂದ ಕುಡಿಯುವ ನೀರಿನ ತೊಟ್ಟಿಗಳನ್ನು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಕಾಲೇಜಿಗೆ ನೀಡಲಾಯಿತು. ಈ ನೀರಿನ ತೊಟ್ಟಿಗಳಿಗೆ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿಗಳಿಂದ ಪರಿಸರ ಕಾಳಜಿ ಸೂಚಿಸುವ ಭಿತ್ತಿ ಚಿತ್ರಗಳನ್ನು ಬಿಡಿಸಿ ಈ ಕಾರ್ಯಕ್ರಮದ ಮಹತ್ವವನ್ನು ಸಾರಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ವಸಂತ ಟಿ.ಡಿ. ಅವರು ಮಾತನಾಡಿ “ಅವಶ್ಯಕತೆ ಇರುವ ಮೂಕ ಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಕುಡಿಯುವ ನೀರನ್ನು ಒದಗಿಸುವ ಮೂಲಕ ಪ್ರಾಣಿ–ಜೀವ ಸಂಕುಲ ಉಳಿಸಿ ಪರಿಸರ ಸಮತೋಲನವನ್ನು ಕಾಪಾಡಬೇಕೆಂದು ಕರೆ ನೀಡಿದರು ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಈ ಕಾರ್ಯಕ್ಕೆ ಸಂಬಂಧಿಸಿದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು”.
ಈ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ಸಂಯೋಜರಾದ ಡಾ. ಅನಸುಯಾ ಕೆ.ವಿ ಅವರು ಈ ಕಾರ್ಯಕ್ರಮದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಇದೇ ಸಂದರ್ಭದಲ್ಲಿ ಕಾಲೇಜು ಮತ್ತು ಇ.ಕೋ–ಕ್ಲಬ್ ವತಿಯಿಂದ ಡಬ್ಲೂ.ಎಫ್.ವಿ ಸಂಸ್ಥೆಯ ಸಂಸ್ಥಾಪಕರಾದ ಜೈನ್ ಸನ್ನಿ ಹಸ್ತಿಮಲ್ ಮತ್ತು ಕಿಮಿ. ಜೈನ್ ಇವರಿಗೆ ಅವರ ಕಾರ್ಯಕ್ಕೆ ಅಭಿನಂಧಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಡಾ.ವೆಂಕಟರವಣಪ್ಪ ಎಮ್. ಸಂಚಾಲಕರು ವಿಜ್ಞಾನ ವೇದಿಕೆ, ಡಾ. ಯೋಗೀಶ್ ಎನ್. ಮುಖ್ಯಸ್ಥರು ಗಣಿತ ಶಾಸ್ತ್ರ ವಿಭಾಗ ಹಾಗೂ ಡಾ. ಫಾತಿಮಾ–ತು–ಜೋಹರಾ–ಜಬೀನ್ ಮುಖ್ಯಸ್ಥರು ಸಸ್ಯಶಾಸ್ತ್ರ ವಿಭಾಗ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಇಕೊ–ಕ್ಲಬ್ ಸಂಚಾಲಕರಾದ ಭವಾನಿ ಪಾಟೀಲ್ ಮುಖ್ಯಸ್ಥರು ಪ್ರಾಣಿಶಾಸ್ತ್ರ ವಿಭಾಗ ಇವರು ಮತ್ತು ಇವರ ತಂಡ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಬಂದ ಅತಿಥಿಗಳಿಗೆ ಸ್ವಾಗತವನ್ನು ಕೋರಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW