nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ನಮ್ಮ ಆರೋಗ್ಯ ಕೇಂದ್ರಗಳ ಪ್ರಥಮ ವರ್ಷಾಚರಣೆ ಸಮಾರಂಭ
    ತಿಪಟೂರು February 4, 2024

    ತಿಪಟೂರು: ನಮ್ಮ ಆರೋಗ್ಯ ಕೇಂದ್ರಗಳ ಪ್ರಥಮ ವರ್ಷಾಚರಣೆ ಸಮಾರಂಭ

    By adminFebruary 4, 2024No Comments2 Mins Read
    namma arogya kendra

    Provided by
    Provided by

    ತಿಪಟೂರು: ಗ್ರಾಮೀಣ ಸಮುದಾಯದ ಮಹಿಳೆಯರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ನಿಟ್ಟಿನಲ್ಲಿ ತನ್ನದೇ ಆದ ವಿಶಿಷ್ಟತೆ ಹೊಂದಿರುವ ನಮ್ಮ ಆರೋಗ್ಯ ಕೇಂದ್ರ ಫೆಬ್ರುವರಿ 4 2024 ರಂದು ತನ್ನ ಪ್ರಥಮ ವರ್ಷಾಚರಣೆ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

    ಕೆ.ಬಿ.ಕ್ರಾಸ್ ಮತ್ತು ಹಾಲ್ಕುರಿಕೆ ಗ್ರಾಮಗಳಲ್ಲಿ ಡಾ.ಹೇಮಾ ದಿವಾಕರ್ ಹಾಗೂ ನುರಿತ ವೈದ್ಯರುಗಳ ನೇತೃತ್ವದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಡೆದ ಈ ಆರೋಗ್ಯ ಶಿಬಿರದಲ್ಲಿ ಹೆಚ್ಚಾಗಿ ಮಹಿಳೆಯರು ಅಗತ್ಯ ವೈದ್ಯಕೀಯ ಸೇವೆ ಮತ್ತು ಸಮಾಲೋಚನೆ ಪಡೆದರು.

    ನಮ್ಮ ಆರೋಗ್ಯ ಕೇಂದ್ರದ ವಾರ್ಷಿಕ ಸಂಭ್ರಮಾಚರಣೆ ಉದ್ದೇಶಿಸಿ ಮಾತನಾಡಿದ  ನಮ್ಮ ಆರೋಗ್ಯ ಕೇಂದ್ರದ ಸಂಸ್ಥಾಪಕರು ಹಾಗೂ ಕಾಂಗ್ರೆಸ್ ಮುಖಂಡರಾಗಿರುವ C B  ಶಶಿಧರ್ ರವರು ಗ್ರಾಮೀಣ ಸಮುದಾಯದ ಮೇಲೆ ಈ ಶಿಬಿರವು ಪರಿಣಾಮಕಾರಿಯಾಗಿ ಪ್ರಭಾವ ಬೀರಿದೆ, ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವುದು ನಮ್ಮ ಸಂಸ್ಥೆಯ ಸೇವಾಪರತೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ, ನಮ್ಮ ಆರೋಗ್ಯ ಕೇಂದ್ರದ ಪ್ರಥಮ ವರ್ಷಾಚರಣೆಗೆ ನನಗೆ ಬಹಳ ಹೆಮ್ಮೆಯಿದೆ ಎಂದು ನುಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ನಮ್ಮ ಆರೋಗ್ಯ ಕೇಂದ್ರದ CEO ಹಾಗೂ ವ್ಯವಸ್ಥಾಪಕರಾಗಿರುವ ಡಾ.ಹೇಮಾ ದಿವಾಕರ್ ಗ್ರಾಮೀಣ ಸಮುದಾಯಕ್ಕೆ ಆರೋಗ್ಯ ಸೇವೆಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ದೊರಕುತ್ತಿರುವುದು ನಮ್ಮ ಆರೋಗ್ಯ ಸಖಿಯರ ಸೇವಾ ಮತ್ತು ಸಮರ್ಪಣಾ ಮನೋಭಾವದಿಂದ ಮಾತ್ರ ಸಾಧ್ಯವಾಗಿದೆ ಎಂದು ನುಡಿದರು.


    Provided by
    Provided by

    ಸಹ ಸಂಸ್ಥಾಪಕರಾದ ಎಂ.ಜೆ.ಶ್ರೀಕಾಂತ್ ರವರು ಗ್ರಾಮ ಸಮುದಾಯದ ಹೆಚ್ಚಿನ ಬೆಂಬಲ ಸಿಗುತ್ತಿರವುದಕ್ಕೆ ನಾನು ಎಂದಿಗೂ ಆಭಾರಿಯಾಗಿದ್ದೇನೆ, ನಮ್ಮ ಗ್ರಾಮೀಣ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದೇ ನಮ್ಮ ಮುಂದಿನ ಗುರಿ  ಎಂದು ತಿಳಿಸಿದರು.

    ನಮ್ಮ ಆರೋಗ್ಯ ಕೇಂದ್ರದ ಕುರಿತು ಸಂಕ್ಷಿಪ್ತ ಮಾಹಿತಿ ಒಂದು ವರ್ಷಗಳ ಯಶಸ್ವಿ ಪಯಣ ಸಾಗಿಸುತ್ತಿರುವ ನಮ್ಮ ಆರೋಗ್ಯ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರು ಕಾಂಗ್ರೆಸ್ ಮುಖಂಡರು, ಜನಸ್ಪಂದನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾದ CB ಶಶಿಧರ್ ರವರು, ಡಾ.ಹೇಮಾ ದಿವಾಕರ್ ಸಂಸ್ಥೆಯ ವ್ಯವಸ್ಥಾಪಕರು ಹಾಗೂ ಕಾರ್ಯನಿರ್ವಹಣಾ ಅಧಿಕಾರಿ, ಸಹ-ಸಂಸ್ಥಾಪಕರು M.J.ಶ್ರೀಕಾಂತ್ (ಜನಸ್ಪಂದನ ಟ್ರಸ್ಟ್) ನಮ್ಮ ಆರೋಗ್ಯ ಕೇಂದ್ರ ಗ್ರಾಮೀಣ ಸಮುದಾಯದ ಆರೋಗ್ಯ ಸುಧಾರಣೆಗೆ ಕಂಕಣ ಬದ್ಧವಾಗಿದೆ, ಮಹಿಳೆಯರಿಗೆ ಆರೋಗ್ಯ ಸಮಾಲೋಚನೆ, ಆರೋಗ್ಯ ಸಖಿಯರು ಮಹಿಳೆಯರ ಮನೆಮನೆಗೂ ಭೇಟಿ ನೀಡಿ ಉಚಿತವಾಗಿ ಆರೋಗ್ಯ ಸಲಹೆಗಳು ಮತ್ತು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.

    ಉಚಿತವಾಗಿ ಬಿ.ಪಿ ಮತ್ತು ರಕ್ತ ತಪಾಸಣೆ ಹಾಗೂ ಇನ್ನಿತರ ವೈದ್ಯಕೀಯ ನೆರವು ಸಹ ದೊರೆಯುತ್ತಿದೆ. ವೈದ್ಯಕೀಯ ಸೌಲಭ್ಯಗಳ   ತಂತ್ರಜ್ಞಾನ, ಅನುಭವಿ ವೈದ್ಯರುಗಳಿಂದ ಆಪ್ತಸಮಾಲೋಚನೆ, ಆಧುನಿಕ ಪ್ರಾಥಮಿಕ ಚಿಕಿತ್ಸಾ ವಿಧಾನಗಳು, ಟೆಲಿಮೆಡಿಸನ್ ಜೊತೆಗೆ ಸಂಪರ್ಕ ಹೊಂದಿದ್ದು ಜನಸಮೂಹದೊಟ್ಟಿಗೆ ಸಕ್ರಿಯ ಸಹಭಾಗಿತ್ವ ಹೊಂದಿದೆ. 10 ಮಂದಿ  ಆರೋಗ್ಯ ಸಖಿಯರನ್ನು ವಿಶೇಷವಾಗಿ ನೇಮಿಸಿಕೊಳ್ಳಲಾಗಿದೆ, 1200 ಕ್ಕಿಂತ ಹೆಚ್ಚಿನ ರೋಗಿಗಳು ನಮ್ಮ ಆರೋಗ್ಯ ಕೇಂದ್ರದ ಸೇವೆಗಳ ಫಲಾನುಭವಿಗಳಾಗಿದ್ದಾರೆ. ಸಂಸ್ಥೆಯ ಎಲ್ಲಾ ಸಿಬ್ಬಂದಿ ಆರೋಗ್ಯ ಜಾಗೃತಿಗಾಗಿ ಸದಾ ಕ್ರಿಯಾಶೀಲವಾಗಿ ಶ್ರಮಿಸುತ್ತಿದ್ದಾರೆ.

    ತಿಪಟೂರು ಗ್ರಾಮೀಣ ಸಮುದಾಯದೊಟ್ಟಿಗೆ ತನ್ನದೇ ಆದ ಅಸ್ತಿತ್ವವನ್ನು ಸೃಷ್ಟಿಸಿಕೊಂಡಿದ್ದು ಖಾಸಗಿ ವಲಯದ ನಮ್ಮ ಆರೋಗ್ಯ ಕೇಂದ್ರವು ಯಶಸ್ವಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ,  ಒಂದು ವರ್ಷದ ಗುರುತರವಾದ ಹೆಜ್ಜೆಗಳನ್ನಿಡುತ್ತಾ ‘ಗುಣಮಟ್ಟದ ಆರೋಗ್ಯದ ರಕ್ಷಣೆ-ನಮ್ಮ ಹೊಣೆ’ ಎಂಬ ಧ್ಯೇಯದೊಂದಿಗೆ ತಿಪಟೂರಿನಲ್ಲಿ ತನ್ನದೇ ಆದ ಅಸ್ಮಿತೆ ಹೊಂದಿದೆ.

    ವರದಿ: ಆನಂದ ತಿಪಟೂರು

    admin
    • Website

    Related Posts

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.