nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ನಮ್ಮ ಆರೋಗ್ಯ ಕೇಂದ್ರಗಳ ಪ್ರಥಮ ವರ್ಷಾಚರಣೆ ಸಮಾರಂಭ
    ತಿಪಟೂರು February 4, 2024

    ತಿಪಟೂರು: ನಮ್ಮ ಆರೋಗ್ಯ ಕೇಂದ್ರಗಳ ಪ್ರಥಮ ವರ್ಷಾಚರಣೆ ಸಮಾರಂಭ

    By adminFebruary 4, 2024No Comments2 Mins Read
    namma arogya kendra

    ತಿಪಟೂರು: ಗ್ರಾಮೀಣ ಸಮುದಾಯದ ಮಹಿಳೆಯರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ನಿಟ್ಟಿನಲ್ಲಿ ತನ್ನದೇ ಆದ ವಿಶಿಷ್ಟತೆ ಹೊಂದಿರುವ ನಮ್ಮ ಆರೋಗ್ಯ ಕೇಂದ್ರ ಫೆಬ್ರುವರಿ 4 2024 ರಂದು ತನ್ನ ಪ್ರಥಮ ವರ್ಷಾಚರಣೆ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

    ಕೆ.ಬಿ.ಕ್ರಾಸ್ ಮತ್ತು ಹಾಲ್ಕುರಿಕೆ ಗ್ರಾಮಗಳಲ್ಲಿ ಡಾ.ಹೇಮಾ ದಿವಾಕರ್ ಹಾಗೂ ನುರಿತ ವೈದ್ಯರುಗಳ ನೇತೃತ್ವದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಡೆದ ಈ ಆರೋಗ್ಯ ಶಿಬಿರದಲ್ಲಿ ಹೆಚ್ಚಾಗಿ ಮಹಿಳೆಯರು ಅಗತ್ಯ ವೈದ್ಯಕೀಯ ಸೇವೆ ಮತ್ತು ಸಮಾಲೋಚನೆ ಪಡೆದರು.

    ನಮ್ಮ ಆರೋಗ್ಯ ಕೇಂದ್ರದ ವಾರ್ಷಿಕ ಸಂಭ್ರಮಾಚರಣೆ ಉದ್ದೇಶಿಸಿ ಮಾತನಾಡಿದ  ನಮ್ಮ ಆರೋಗ್ಯ ಕೇಂದ್ರದ ಸಂಸ್ಥಾಪಕರು ಹಾಗೂ ಕಾಂಗ್ರೆಸ್ ಮುಖಂಡರಾಗಿರುವ C B  ಶಶಿಧರ್ ರವರು ಗ್ರಾಮೀಣ ಸಮುದಾಯದ ಮೇಲೆ ಈ ಶಿಬಿರವು ಪರಿಣಾಮಕಾರಿಯಾಗಿ ಪ್ರಭಾವ ಬೀರಿದೆ, ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವುದು ನಮ್ಮ ಸಂಸ್ಥೆಯ ಸೇವಾಪರತೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ, ನಮ್ಮ ಆರೋಗ್ಯ ಕೇಂದ್ರದ ಪ್ರಥಮ ವರ್ಷಾಚರಣೆಗೆ ನನಗೆ ಬಹಳ ಹೆಮ್ಮೆಯಿದೆ ಎಂದು ನುಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ನಮ್ಮ ಆರೋಗ್ಯ ಕೇಂದ್ರದ CEO ಹಾಗೂ ವ್ಯವಸ್ಥಾಪಕರಾಗಿರುವ ಡಾ.ಹೇಮಾ ದಿವಾಕರ್ ಗ್ರಾಮೀಣ ಸಮುದಾಯಕ್ಕೆ ಆರೋಗ್ಯ ಸೇವೆಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ದೊರಕುತ್ತಿರುವುದು ನಮ್ಮ ಆರೋಗ್ಯ ಸಖಿಯರ ಸೇವಾ ಮತ್ತು ಸಮರ್ಪಣಾ ಮನೋಭಾವದಿಂದ ಮಾತ್ರ ಸಾಧ್ಯವಾಗಿದೆ ಎಂದು ನುಡಿದರು.

    ಸಹ ಸಂಸ್ಥಾಪಕರಾದ ಎಂ.ಜೆ.ಶ್ರೀಕಾಂತ್ ರವರು ಗ್ರಾಮ ಸಮುದಾಯದ ಹೆಚ್ಚಿನ ಬೆಂಬಲ ಸಿಗುತ್ತಿರವುದಕ್ಕೆ ನಾನು ಎಂದಿಗೂ ಆಭಾರಿಯಾಗಿದ್ದೇನೆ, ನಮ್ಮ ಗ್ರಾಮೀಣ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದೇ ನಮ್ಮ ಮುಂದಿನ ಗುರಿ  ಎಂದು ತಿಳಿಸಿದರು.

    ನಮ್ಮ ಆರೋಗ್ಯ ಕೇಂದ್ರದ ಕುರಿತು ಸಂಕ್ಷಿಪ್ತ ಮಾಹಿತಿ ಒಂದು ವರ್ಷಗಳ ಯಶಸ್ವಿ ಪಯಣ ಸಾಗಿಸುತ್ತಿರುವ ನಮ್ಮ ಆರೋಗ್ಯ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರು ಕಾಂಗ್ರೆಸ್ ಮುಖಂಡರು, ಜನಸ್ಪಂದನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾದ CB ಶಶಿಧರ್ ರವರು, ಡಾ.ಹೇಮಾ ದಿವಾಕರ್ ಸಂಸ್ಥೆಯ ವ್ಯವಸ್ಥಾಪಕರು ಹಾಗೂ ಕಾರ್ಯನಿರ್ವಹಣಾ ಅಧಿಕಾರಿ, ಸಹ-ಸಂಸ್ಥಾಪಕರು M.J.ಶ್ರೀಕಾಂತ್ (ಜನಸ್ಪಂದನ ಟ್ರಸ್ಟ್) ನಮ್ಮ ಆರೋಗ್ಯ ಕೇಂದ್ರ ಗ್ರಾಮೀಣ ಸಮುದಾಯದ ಆರೋಗ್ಯ ಸುಧಾರಣೆಗೆ ಕಂಕಣ ಬದ್ಧವಾಗಿದೆ, ಮಹಿಳೆಯರಿಗೆ ಆರೋಗ್ಯ ಸಮಾಲೋಚನೆ, ಆರೋಗ್ಯ ಸಖಿಯರು ಮಹಿಳೆಯರ ಮನೆಮನೆಗೂ ಭೇಟಿ ನೀಡಿ ಉಚಿತವಾಗಿ ಆರೋಗ್ಯ ಸಲಹೆಗಳು ಮತ್ತು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.

    ಉಚಿತವಾಗಿ ಬಿ.ಪಿ ಮತ್ತು ರಕ್ತ ತಪಾಸಣೆ ಹಾಗೂ ಇನ್ನಿತರ ವೈದ್ಯಕೀಯ ನೆರವು ಸಹ ದೊರೆಯುತ್ತಿದೆ. ವೈದ್ಯಕೀಯ ಸೌಲಭ್ಯಗಳ   ತಂತ್ರಜ್ಞಾನ, ಅನುಭವಿ ವೈದ್ಯರುಗಳಿಂದ ಆಪ್ತಸಮಾಲೋಚನೆ, ಆಧುನಿಕ ಪ್ರಾಥಮಿಕ ಚಿಕಿತ್ಸಾ ವಿಧಾನಗಳು, ಟೆಲಿಮೆಡಿಸನ್ ಜೊತೆಗೆ ಸಂಪರ್ಕ ಹೊಂದಿದ್ದು ಜನಸಮೂಹದೊಟ್ಟಿಗೆ ಸಕ್ರಿಯ ಸಹಭಾಗಿತ್ವ ಹೊಂದಿದೆ. 10 ಮಂದಿ  ಆರೋಗ್ಯ ಸಖಿಯರನ್ನು ವಿಶೇಷವಾಗಿ ನೇಮಿಸಿಕೊಳ್ಳಲಾಗಿದೆ, 1200 ಕ್ಕಿಂತ ಹೆಚ್ಚಿನ ರೋಗಿಗಳು ನಮ್ಮ ಆರೋಗ್ಯ ಕೇಂದ್ರದ ಸೇವೆಗಳ ಫಲಾನುಭವಿಗಳಾಗಿದ್ದಾರೆ. ಸಂಸ್ಥೆಯ ಎಲ್ಲಾ ಸಿಬ್ಬಂದಿ ಆರೋಗ್ಯ ಜಾಗೃತಿಗಾಗಿ ಸದಾ ಕ್ರಿಯಾಶೀಲವಾಗಿ ಶ್ರಮಿಸುತ್ತಿದ್ದಾರೆ.

    ತಿಪಟೂರು ಗ್ರಾಮೀಣ ಸಮುದಾಯದೊಟ್ಟಿಗೆ ತನ್ನದೇ ಆದ ಅಸ್ತಿತ್ವವನ್ನು ಸೃಷ್ಟಿಸಿಕೊಂಡಿದ್ದು ಖಾಸಗಿ ವಲಯದ ನಮ್ಮ ಆರೋಗ್ಯ ಕೇಂದ್ರವು ಯಶಸ್ವಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ,  ಒಂದು ವರ್ಷದ ಗುರುತರವಾದ ಹೆಜ್ಜೆಗಳನ್ನಿಡುತ್ತಾ ‘ಗುಣಮಟ್ಟದ ಆರೋಗ್ಯದ ರಕ್ಷಣೆ-ನಮ್ಮ ಹೊಣೆ’ ಎಂಬ ಧ್ಯೇಯದೊಂದಿಗೆ ತಿಪಟೂರಿನಲ್ಲಿ ತನ್ನದೇ ಆದ ಅಸ್ಮಿತೆ ಹೊಂದಿದೆ.

    ವರದಿ: ಆನಂದ ತಿಪಟೂರು


    Provided by
    Provided by
    admin
    • Website

    Related Posts

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶುಂಠಿಯು ಪ್ರತಿಯೊಬ್ಬರ ಅಡುಗೆಮನೆಯಲ್ಲಿಯೂ ಅತ್ಯಗತ್ಯವಾಗಿ ಬಳಸುವ ಒಂದು ಪ್ರಮುಖ ಪದಾರ್ಥ. ಚಹಾ, ಸಾರು, ಕರ್ರಿ ಅಥವಾ ವಿವಿಧ ಖಾದ್ಯಗಳಿಗೆ ಶುಂಠಿ…

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.