ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13 ರಂದು ನೆರವೇರಲಿದೆ.
ಆ.12 ರಂದು ಬೆಳಿಗ್ಗೆ 6ಕ್ಕೆ ಅಮ್ಮನವರಿಗೆ ಅಭಿಷೇಕ, 7ಕ್ಕೆ 8 ವರ್ಷದ ಹೆಣ್ಣು ಮಗುವಿನ ಮೇಲೆ ಅಮ್ಮನವರ ಕಳಸವನ್ನು ತರುವುದು, 7.30ಕ್ಕೆ ನವಗ್ರಹ ಸ್ಥಾಪನೆ, ನಂದಾದೀಪ ಸೇವೆ, 8ಕ್ಕೆ ಶ್ರೀ ರುದ್ರಂಭಾವಸ್ವಾಮಿಯವರನೇತೃತ್ವದಲ್ಲಿ ಅಖಂಡ ಭಜನೆ, 8.30ಕ್ಕೆ ಅಮ್ಮನವರಿಗೆ ಚಿನ್ನ ಲೇಪಿತ ವಜ್ರಾಂಗಿ ಅಲಂಕಾರ, ಮಧ್ಯಾಹ್ನ 12ಕ್ಕೆ ಹೂವಿನ ಅಲಂಕಾರ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಅಮ್ಮನವರಿಗೆ ಬೆಣ್ಣೆ ಅಲಂಕಾರ, ರಾತ್ರಿ 8 ಗಂಟೆಗೆ ಆರ್ಕೆಸ್ಟ್ರಾ, 8.30ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.
ಆ.13 ರಂದು ಬೆಳಿಗ್ಗೆ 7ಕ್ಕೆ ಅಮ್ಮನವರಿಗೆ ಅಭಿಷೇಕ, 8 ಗಂಟೆಗೆ ಅಖಂಡ ಭಜನೆ ಮುಕ್ತಾಯ, 8.30ಕ್ಕೆ ಶ್ರೀ ಬನಶಂಕರಿ ಅಮ್ಮನವರಿಗೆ ವಜ್ರಾಂಗಿ ಅಲಂಕಾರ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಶ್ರೀ ಬನಶಂಕರಿ ಅಮ್ಮನವರ ಹಾಗೂ ಶ್ರೀ ಕೊಲ್ಲಾಪುರದಮ್ಮನವರ ಉತ್ಸವ, ಆರತಿ ಸೇವೆ, ರಾತ್ರಿ 10.30ಕ್ಕೆ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಿದೆ. ಭಕ್ತಾದಿಗಳು ಎರಡು ದಿನಗಳಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
