nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ
    ತಿಪಟೂರು October 28, 2025

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    By adminOctober 28, 2025No Comments2 Mins Read
    tipaturu protest

    ತಿಪಟೂರು: ನಗರದಲ್ಲಿ ಯುಜಿಡಿ ಅವ್ಯವಸ್ಥೆ ಹಾಗೂ ತಿಪಟೂರು ಮತ್ತು ಈಚನೂರು ಕೆರೆಗೆ ನೀರು ತುಂಬಿಸಲು ಒತ್ತಾಯಿಸಿ ನಗರದ ಕೆಂಪಮ್ಮದೇವಿ ದೇವಸ್ಥಾನದಿಂದ ಸಿಂಗೀ ನಂಜಪ್ಪ ವೃತ್ತದವರೆಗೆ ಸೋಮವಾರ ಪಾದಯಾತ್ರೆ ನಡೆಸಿ ಪ್ರತಿಭಟಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

    ಜೆಡಿಎಸ್‌ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ತಾಲ್ಲೂಕಿನ ಜನರಿಗೆ ಕಂಟಕವಾಗಿರುವ ಯುಜಿಡಿ ಕೊಳಚೆ ನೀರಿನಿಂದ ಈಚನೂರು ಕೆರೆ ಕಲುಷಿತವಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ತಿಪಟೂರು ಅಮಾನಿಕೆರೆಗೆ ನೀರು ತುಂಬದ ಕಾರಣ ಕುಡಿಯುವ ನೀರಿಗೆ ಹೆಚ್ಚಿನ ಸಮಸ್ಯೆ ಉಂಟಾಗಿದೆ. ತಾಲ್ಲೂಕು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಯುಜಿಡಿ ಕೊಳಚೆ ನೀರಿನಿಂದ ನಗರ ರಾಜ್ಯದಾದ್ಯಂತ ಅಪಖ್ಯಾತಿ ಪಡೆಯುತ್ತಿದೆ. ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈಡೇನಹಳ್ಳಿ ವೆಟ್‌ ವೆಲ್ ಹಾಗೂ ಗೊರಗೊಂಡನಹಳ್ಳಿ ವೆಟ್‌ವೆಲ್‌ ಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಕಾರಣ ಕೋಡಿಸರ್ಕಲ್‌ ಬಳಿ ಯುಜಿಡಿ ನೀರು ಉಕ್ಕಿಹರಿಯುತ್ತಿದೆ. ಜನಸಾಮಾನ್ಯರು ಸಂಚಾರ ಕಷ್ಟಕರವಾಗಿದೆ. ಕೊಳಚೆ ನೀರು ಹಳ್ಳಗಳ ಮೂಲಕ ಹಿಂಡಿಸ್ಕೆರೆ ನಂತರ ಈಚನೂರು ಕೆರೆ ಸೇರುತ್ತದೆ. ನಗರದ ಜನ ಪುನಃ ಕೊಳಚೆ ನೀರನ್ನೇ ಕುಡಿಯುವ ದುಃಸ್ಥಿತಿಗೆ ಬರುತ್ತದೆ. ನಗರದ ಹಾಸನ ರಸ್ತೆ, ಹಾಲ್ಕುರಿಕೆ ರಸ್ತೆ, ಶೆಟ್ಟಿಕೆರೆ ರಸ್ತೆ ಸೇರಿ ಬಹುತೇಕ ರಸ್ತೆಗಳು ಗುಂಡಿಬಿದ್ದು ಯಮ ಸ್ವರೂಪಿಯಾಗಿವೆ ಎಂದರು.

    ನಗರಸಭೆ ಪೌರಾಯುಕ್ತರು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಪೌರಾಯುಕ್ತರು ವರ್ಗಾವಣೆ ಮಾಡಿಸಿ ಇಲ್ಲದೇ ಹೋದರೆ ನಗರಸಭೆ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.

    ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತಿಘಟ್ಟ ಶಿವಸ್ವಾಮಿ ಮಾತನಾಡಿ, ತಾಲ್ಲೂಕಿನ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗೆ ಹಣ ಖರ್ಚು ಮಾಡಿ, ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದೆ ಖಜಾನೆ ಖಾಲಿಯಾಗಿದೆ. ಯುಜಿಡಿ ಕೇವಲ ಹಣ ನುಂಗಲು ದಾರಿ ಮಾಡಿಕೊಂಡಿದ್ದಾರೆ. ಈಚನೂರು ಕೆರೆ ಕಲುಷಿತವಾಗಿದ್ದು ಈ ನೀರು ಕುಡಿದರೆ, ಅಪಾಯಕಾರಿ ರೋಗಗಳಿಗೆ ತುತ್ತಾಗುವ ಆತಂಕವಿದೆ. ರಸ್ತೆಗುಂಡಿ ಮುಚ್ಚಲು ಸರ್ಕಾರದಲ್ಲಿ ಹಣವಿಲ್ಲ. ಜಿಲ್ಲಾಧಿಕಾರಿ ನಗರದ ಯುಜಿಡಿ ಸಮಸ್ಯೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದರು.

    ನಗರ ಯುವ ಘಟಕದ ಅಧ್ಯಕ್ಷ ಗೊರಗೊಂಡನಹಳ್ಳಿ ಸುದರ್ಶನ್, ಷಡಕ್ಷರಿ, ರಾಜು, ಧನಂಜಯ್ ಪೆದ್ದಿಹಳ್ಳಿ, ನಟರಾಜ್ ಷಡಕ್ಷರಿ, ರಾಜಶೇಖರ್, ಸತೀಶ್ ಮಾರನಗೆರೆ, ಜಕ್ಕನಹಳ್ಳಿ ಮೋಹನ್‌, ಕವಿತಾ ಮಹೇಶ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.