ತುಮಕೂರು: ಗ್ರಾಮೀಣ ಪ್ರದೇಶ ಹಾಗೂ ಬಡ ವಿದ್ಯಾರ್ಥಿಗಳನ್ನು ದೂರದೃಷ್ಟಿ ಇಟ್ಟುಕೊಂಡು ತಿಪಟೂರು ಬಸವೇಶ್ವರ ವಿದ್ಯಾ ಸಂಸ್ಥೆಯ ಇಂಜಿನಿಯರ್ ಕಾಲೇಜಿಗೆ ಪ್ರವೇಶ ಸಿಇಟಿಗಿಂತಲೂ ಕಡಿಮೆ ಶುಲ್ಕ ನಿಗದಿಪಡಿಸಿದ್ದೇವೆ ಎಂದು ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಹಾಲಪ್ಪನವರು ತಿಳಿಸಿದರು
ಎಂಜಿನಿಯರಿಂಗ್ ಕಾಲೇಜಿಗೆ ಸಿಇಟಿ ಮೂಲಕ ಪ್ರವೇಶ ಪಡೆಯಲು ಸರ್ಕಾರ ನಿಗದಿಪಡಿಸಿರುವ ಶುಲ್ಕ ಪಾವತಿ ಮಾಡಲಾಗದೆ ಅನೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಡವರು ಎಂಜಿನಿಯರಿಂಗ್ ಮಾಡುವ ಆಸೆ ಇದ್ದರೂ ಬಿ.ಎ., ಬಿಕಾಂ, ಬಿಎಸ್ ಸಿ ಇತರೆ ಪದವಿ ಕೋರ್ಸ್ ಗಳಿಗೆ ಸೇರುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ವಂಚಿತರಾಗುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಸಿಇಟಿ ಪ್ರವೇಶಕ್ಕೆ ಪಾವತಿಸ ಬೇಕಾದ ಶುಲ್ಕಕ್ಕಿಂತಲೂ ಕಡಿಮೆ ಶುಲ್ಕ ಪಡೆದು ಶಿಕ್ಷಣ ನೀಡುತ್ತಿದ್ದೇವೆ ಎಂದರು.
ಪ್ರಾಂಶುಪಾಲ, ಡಾ.ರಾಜಕುಮಾರ್ ಮಾತನಾಡಿ, ನಮ್ಮ ಕಾಲೇಜು ಪ್ರತಿಷ್ಠಿತ ವಿಟಿಯು ಯುನಿವರ್ಸಿಟಿಯಿಂದ ನೋಂದಾಯಿತವಾಗಿದ್ದು, ಇಲ್ಲಿ ವಿಟಿಯು ಸಿಲಬಸ್ ಹೇಳಿಕೊಡುತ್ತೇವೆ, ಎಲ್ಲಾ ಶೈಕ್ಷಣಿಕ ವೇಳಾಪಟ್ಟಿ ಹಾಗೂ ಪರೀಕ್ಷೆಗಳು ವಿಟಿಯು ನಿರ್ದೇಶನದಂತೆ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಡಾ.ಶಿವಾನಂದಯ್ಯ, ಉಪನ್ಯಾಸಕರಾದ ಪವನ್ ಕುಮಾರ್ , ರೋಹಿತ್, ಗಗನ್, ಹರ್ಷಿತ, ಚೇತನ್ ಇತರರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW