ಕೊರಟಗೆರೆ: ಪ್ರಾಣತ್ಯಾಗ ಮಾಡಿದ ಮಹನೀಯರ ಇತ್ತೀನ ಯುವಕರು ಹಾಗೂ ನಾಡಿನ ಜನತೆ ಎಂದಿಗೂ ಮರೆಯಬಾರದು. ಸ್ವಾತಂತ್ರ್ಯದ ಮೌಲ್ಯಗಳು, ಸಂವಿಧಾನದ ಆದರ್ಶಗಳು ಮತ್ತು ದೇಶಭಕ್ತಿಯನ್ನು ಪ್ರತಿಯೊಬ್ಬ ನಾಗರಿಕನೂ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮಂಜುನಾಥ್ ಕೆ. ತಿಳಿಸಿದರು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ತಂತ್ರಜ್ಞಾನ ಬೆಳದಂತೆ ಇಂದಿನ ಚರಿತ್ರೆಯನ್ನ ಮರೆಯುತ್ತಿದ್ದು, ಮುಂದಿನ ಯುವ ಪೀಳಿಗೆಗೆ ಸ್ವಾತಂತ್ರ್ಯ ಬಂದಿದ್ದು ಹಾಗೂ ಅದರ ಮೌಲ್ಯಗಳನ್ನು ತಲುಪಿಸುವುದು ನಮ್ಮೆಲ್ಲರ ಕರ್ತವ್ಯ. ತಾಲೂಕಿನ ಅಭಿವೃದ್ಧಿ, ಶಿಕ್ಷಣ ಮತ್ತು ಸಾರ್ವಜನಿಕರ ಕಲ್ಯಾಣಕ್ಕೆ ತಾಲೂಕು ಆಡಳಿತ ಬದ್ಧವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ದೇಶದ ಪ್ರಗತಿಗೆ ಶ್ರಮಿಸೋಣ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ಜಾಮೀಯ ಮಸೀದಿ ಮುಸ್ಲಿಂ ಬಾಂಧವರಿಂದ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ವಾಸವಿ ಯುವಜನ ಸಂಘದಿಂದ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಿದ್ಧರಬೆಟ್ಟ ರೋಟರಿ ಸಂಸ್ಥೆಗಳು ಮಕ್ಕಳಿಗೆ ನೋಟ್ ಬುಕ್, ಪೆನ್ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾ.ಪಂ ಇಓ ಅಪೂರ್ವ, ಸಿಪಿಐ ಪುರುಷೋತ್ತಮ್, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಆಶ್ವಥ್ ನಾರಾಯಣ್, ಅರಕೆರೆ ಶಂಕರ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ, ಗುರುಮೂರ್ತಿ, ಬಸವರಾಜು, ಮಧುಸೂದನ್ ಮುಖಂಡ ನಯಾಜ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
