ಬೀದರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ಜುಲೈ 6ರ ಸೋಮವಾರದಂದು ಬೀದರ್ ಜಿಲ್ಲೆಗೆ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಕರ್ತವ್ಯಾಧಿಕಾರಿ ಹಾಗೂ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಎಸ್.ಶ್ರೀಧರ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಸಿಎಂ ಅವರ ವಿವರವಾದ ಪ್ರವಾಸದ ವೇಳಾಪಟ್ಟಿ ಇಂತಿದೆ:
ಸಿಎಂ ಪ್ರವಾಸದ ವೇಳಾಪಟ್ಟಿ:
ಮಧ್ಯಾಹ್ನ 1:30: ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಆರಂಭ.
ಮಧ್ಯಾಹ್ನ 2:30: ಬೀದರ್ ವಿಮಾನ ನಿಲ್ದಾಣಕ್ಕೆ (ಏರ್ ಬೇಸ್) ಆಗಮನ.
ಮಧ್ಯಾಹ್ನ 3:40: ಬೀದರ್ನಿಂದ ರಸ್ತೆ ಮಾರ್ಗದ ಮೂಲಕ ಬಸವಕಲ್ಯಾಣಕ್ಕೆ ತಲುಪಲಿರುವ ಸಿಎಂ, ಅಲ್ಲಿ ನಿರ್ಮಾಣವಾಗುತ್ತಿರುವ ನೂತನ ‘ಅನುಭವ ಮಂಟಪ’ಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಸಂಜೆ 6:00: ಬಸವಕಲ್ಯಾಣದಿಂದ ಹೊರಟು ರಸ್ತೆ ಮಾರ್ಗವಾಗಿ ಮತ್ತೆ ಬೀದರ್ ನಗರಕ್ಕೆ ವಾಪಸ್.
ಸಂಜೆ 7:00: ಬೀದರ್ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.
ರಾತ್ರಿ 8:00: ಬೀದರ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


