nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ
    ಕೊರಟಗೆರೆ October 16, 2025

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    By adminOctober 16, 2025No Comments2 Mins Read
    thovinakere

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮದ ವಾಸಿಯಾದ ಟಿ.ಕೆ.ಮೊಹಮ್ಮದ್ ಅದೇ ಗ್ರಾಮದ ಮಂಜಮ್ಮ ಎಂಬುವವರ ಹೆಸರಿನಲ್ಲಿದ್ದ ಮನೆ ಮತ್ತು ಖಾಲಿ ನಿವೇಶನವನ್ನು ಕ್ರಯಕ್ಕೆ ಖರೀದಿ ಮಾಡಿದ್ದು. ಕೊರಟಗೆರೆ ಸಬ್‌ ರಿಜಿಸ್ಟ್ರಾರ್ ಕಛೇರಿಯಲ್ಲಿ ದಿನಾಂಕ:01/08/2025 ರಂದು ನೋಂದಣಿಯಾಗಿರುತ್ತದೆ. ಕ್ರಯ ಪತ್ರದಂತೆ ಸದರಿ ಮನೆ ಮತ್ತು ಖಾಲಿ ನಿವೇಶನದ ಖಾತೆಯನ್ನು ಮಂಜಮ್ಮ ರವರ ಹೆಸರಿನಿಂದ ತನ್ನ ಹೆಸರಿಗೆ ಬದಲಾವಣೆ ಮಾಡಿಕೊಡುವಂತೆ ತೋವಿನಕೆರೆ ಗ್ರಾಮ ಪಂಚಾಯಿತಿಗೆ ದಿನಾಂಕ:12/08/2025 ರಂದು ಟಿ.ಕೆ.ಮೊಹಮ್ಮದ್ ರವರು ಅರ್ಜಿ ಸಲ್ಲಿಸಿರುತ್ತಾರೆ.

    ಅರ್ಜಿ ಸಲ್ಲಿಸಿ ಸುಮಾರು ಎರಡು ತಿಂಗಳು ಕಳೆಯುತ್ತಾ ಬಂದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಖಾತೆ ಬದಲಾವಣೆ ಮಾಡಿಕೊಡದ ಕಾರಣ ದೂರುದಾರ ಟಿ.ಕೆ. ಮೊಹಮ್ಮದ್ ರವರು ದಿನಾಂಕ: 09/10/2025 ರಂದು ತೋವಿನಕರೆ ಗ್ರಾಮ ಪಂಚಾಯಿತಿ ಕಛೇರಿಗೆ ಭೇಟಿ ನೀಡಿ, ಬಿಲ್‌ ಕಲೆಕ್ಟ‌ರ್ ಮಾರುತಿ ರವರನ್ನ ಸಂಪರ್ಕಿಸಿದಾಗ, ಮಾರುತಿರವರು ಖಾತೆ ಬದಲಾವಣೆ ಮಾಡಿಕೊಡಲು 10,800 ರೂ. ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.


    Provided by
    Provided by

    ತದನಂತರ ದಿನಾಂಕ:14/10/2025 ರಂದು ದೂರುದಾರ ಟಿ.ಕೆ.ಮೊಹಮ್ಮದ್ ಮತ್ತೊಮ್ಮೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಹಣ ಕಡಿಮೆ ಮಾಡಿಕೊಳ್ಳುವಂತೆ ಕೇಳಿದಾಗ ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾರವರು 8,000 ರೂ. ನೀಡುವಂತೆ ಬೇಡಿಕೆ ಇಟ್ಟಿರುತ್ತಾರೆ.

    ದೂರುದಾರ ಟಿ.ಕೆ.ಮೊಹಮ್ಮದ್ ರವರಿಗೆ ಲಂಚ ನೀಡಲು ಇಷ್ಟವಿಲ್ಲದೇ, ದಿನಾಂಕ: 15/10/2025 ರಂದು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿರುತ್ತಾರೆ.

    ಪೊಲೀಸ್ ನಿರೀಕ್ಷಕರಾದ ರಾಜು ಟಿ.ರವರು ಮೊ.ನಂ:08/2025 ಕಲಂ–7(a) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ-1988 (ತಿದ್ದುಪಡಿ–2018) ರಂತೆ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.

    ದಿನಾಂಕ:16/10/2025 ರಂದು ಟ್ರ್ಯಾಪ್ ಕಾರ್ಯಾಚರಣೆ ವೇಳೆ ತೋವಿನಕೆರೆ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಬೆಳ್ಳಿಗ್ಗೆ 10.45 ಗಂಟೆಗೆ 8,000 ರೂ. ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮ ರವರನ್ನು ತನಿಖಾಧಿಕಾರಿ  ರಾಜು.ಟಿ, ಪೊಲೀಸ್ ನಿರೀಕ್ಷಕರು ರವರ ನೇತೃತ್ವದ ತಂಡ ವಶಕ್ಕೆ ಪಡೆದು, ಮುಂದಿನ ತನಿಖೆ ಕೈಗೊಂಡಿರುತ್ತಾರೆ.

    ತುಮಕೂರು ಲೋಕಾಯುಕ್ತ ಘಟಕದ ಪೊಲೀಸ್ ಅಧೀಕ್ಷಕರಾದ ಲಕ್ಷ್ಮೀನಾರಾಯಣ.ಎ.ವಿ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕರಾದ ಡಾ.ಸಂತೋಷ್ ಕೆ.ಎಂ.ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರುಗಳಾದ ರಾಜು.ಟಿ, ಬಿ.ಮೊಮ್ಮದ್ ಸಲೀಂ, ಕೆ.ಸುರೇಶ ಮತ್ತು ಶಿವರುದ್ರಪ್ಪ ಮೇಟಿ ಮತ್ತು ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು, ಲಂಚ ಸ್ವೀಕರಿಸಿದ್ದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತದೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ

    May 9, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.