nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

    March 2, 2026

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026
    Facebook Twitter Instagram
    ಟ್ರೆಂಡಿಂಗ್
    • ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 23ರಿಂದ 25ರವರೆಗೆ ವಾಣಿಜ್ಯ ಮೇಳ ಸಾವಯವ –ಸಿರಿಧಾನ್ಯ 2025: ಸಚಿವ ಎನ್. ಚೆಲುವರಾಯಸ್ವಾಮಿ
    ರಾಜ್ಯ ಸುದ್ದಿ January 21, 2025

    ಜನವರಿ 23ರಿಂದ 25ರವರೆಗೆ ವಾಣಿಜ್ಯ ಮೇಳ ಸಾವಯವ –ಸಿರಿಧಾನ್ಯ 2025: ಸಚಿವ ಎನ್. ಚೆಲುವರಾಯಸ್ವಾಮಿ

    By adminJanuary 21, 2025No Comments2 Mins Read

    ಬೆಂಗಳೂರು:  ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.

    ಖಾಸಗಿ ಹೋಟೆಲ್‌ ನಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ–2025ರ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜನವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳದ ಉದ್ಘಾಟನೆ ನೆರವೇರಿಸುವರು ಎಂದರು.


    Provided by
    Provided by

    ಸರ್ಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ.  2017ರಲ್ಲಿ ಆಯೋಜಿಸಿದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.

    2025ರ ಈ ಮೇಳವು ರೈತರು, ರೈತ ಗುಂಪುಗಳು, ದೇಶಿಯ ಮತ್ತು ಅಂತರರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಅನ್ವೇಷಿಸುವ ಮತ್ತು ಪರಿಣಾಮಕಾರಿಯಾಗಿ ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ವೇದಿಕೆಯಾಗಿದೆ.

    ಸಾವಯವ ಮತ್ತು ಸಿರಿಧಾನ್ಯಗಳನ್ನು ಭವಿಷ್ಯದ ಪೀಳಿಗೆಯನ್ನು ಪೋಷಿಸುವ ಸಾಂಪ್ರದಾಯಿಕ ಪ್ರಜ್ಞಾವಂತ ಆಹಾರ ಎಂದು ಜನಪ್ರಿಯಗೊಳಿಸುವುದು ಮತ್ತು ಭವಿಷ್ಯಕ್ಕಾಗಿ ಪಾರಂಪರಿಕ ದೇಸಿ ತಳಿಗಳನ್ನು ಬೆಳೆಸಿ ಸಂರಕ್ಷಿಸುವುದು ಸರ್ಕಾರದ ಧ್ಯೇಯವಾಗಿದೆ.

    ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ಬೆಂಗಳೂರಿನ ಹೆಬ್ಬಾಳದಲ್ಲಿ ” ಸಾವಯ ಮತ್ತು ಸಿರಿಧಾನ್ಯ ಹಬ್” ನ್ನು ರೂ. 20 ಕೋಟಿ ವೆಚ್ಚದಲ್ಲಿ ನಿರ್ಮಿಸಲು  ಉದ್ದೇಶಿಸಿದ್ದು,ಮುಖ್ಯ ಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುವರು ಎಂದರು.

    ರೈತ ಸಿರಿ:

    ರಾಜ್ಯದಲ್ಲಿ ರೈತ ಸಿರಿ ಯೋಜನೆಯಲ್ಲಿ ಒಟ್ಟು ರೂ.106 ಕೋಟಿ ಸಹಾಯಧನ ನೀಡಲಾಗಿದೆ. ಮೂರು ದಿನದ ಅಂತರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು ಹಾಗೂ 30 ಕ್ಕಿಂತ ಹೆಚ್ಚು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ ಎಂದರು

    ಪತ್ರಿಕಾಗೋಷ್ಠಿಯಲ್ಲಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್, ಕೃಷಿ ಆಯುಕ್ತ ವೈ.ಎಸ್.ಪಾಟೀಲ, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    ತುಮಕೂರು: ಯಾವುದೇ ಸಭೆ ಸಮಾರಂಭಗಳಲ್ಲಿ ಮೇಲ್ವರ್ಗದವರು, ಕೆಳವರ್ಗದವರು ಎಂಬ ಪದ ಬಳಕೆ ಮಾಡಬಾರದು. ಬದಲಾಗಿ ಮುಂದುವರಿದವರು ಮತ್ತು ಹಿಂದುಳಿದವರು ಎಂಬ…

    ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

    March 2, 2026

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.