ತುಮಕೂರು: ಬುಧವಾರ ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ಮೆಂಟ್ (IIIDEM)ನಲ್ಲಿ ಚುನಾವಣಾ ಆಯೋಗದ ಚುನಾವಣಾ ಆಯುಕ್ತ ಡಾ. ವಿವೇಕ್ ಜೋಶಿ ಅವರೊಂದಿಗೆ ಹಮ್ಮಿಕೊಂಡಿದ್ದ ಮತಗಟ್ಟೆ ಮಟ್ಟದ ಅಧಿಕಾರಿ(BLO)ಗಳ ಮೊದಲ ತರಬೇತಿಯನ್ನು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಉದ್ಘಾಟಿಸಿದರು.
ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಕೆಲವು ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬಿಎಲ್ಒಗಳಿಗೆ ಇಂತಹ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಪಡೆದ ಬಿಎಲ್ಒಗಳು ದೇಶಾದ್ಯಂತ ವಿಧಾನಸಭಾ ಕ್ಷೇತ್ರ ಮಟ್ಟದ ಮಾಸ್ಟರ್ ತರಬೇತುದಾರರ (ALMTಗಳು) ಒಂದು ಗುಂಪನ್ನು ರಚಿಸುತ್ತಾರೆ. ಇವರು 100 ಕೋಟಿ ಮತದಾರರು ಹಾಗೂ ಆಯೋಗದ ನಡುವಿನ ಮೊದಲ ಮತ್ತು ಪ್ರಮುಖ ಸಂಪರ್ಕ ಸಾಧನವಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ವಿಶಿಷ್ಟ ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮವು ಹಂತ ಹಂತವಾಗಿ ಮುಂದುವರಿಯಲಿದ್ದು, ಈ ತರಬೇತಿ ಕಾರ್ಯಕ್ರಮದಲ್ಲಿ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನ 109 ಬಿಎಲ್ ಓ, 24 ಚುನಾವಣಾ ನೋಂದಣಿ ಅಧಿಕಾರಿ(ಇಆರ್ ಓ)ಗಳು ಹಾಗೂ 13 ಜಿಲ್ಲಾ ಚುನಾವಣಾಧಿಕಾರಿ(ಡಿಇಒ)ಗಳು ಭಾಗವಹಿಸಿ ಪ್ರಯೋಜನ ಪಡೆಯಲಿದ್ದಾರೆ.
ಬಿಎಲ್ಒಗಳು ರಾಜ್ಯ ಸರ್ಕಾರಿ ಅಧಿಕಾರಿಗಳಾಗಿದ್ದು, ಇವರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ವಹಿಸಬೇಕಾದ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಆಯೋಜಿಸಲಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿ(ಡಿಇಒ)ಗಳ ಅನುಮೋದನೆಯ ನಂತರ ಚುನಾವಣಾ ನೋಂದಣಿ ಅಧಿಕಾರಿ(ಇಆರ್ಓ)ಗಳು ಬಿಎಲ್ ಒಗಳನ್ನು ನೇಮಕ ಮಾಡುತ್ತಾರೆ. ಮತದಾರರ ಪಟ್ಟಿಯ ದೋಷ–ಮುಕ್ತ ನವೀಕರಣದಲ್ಲಿ ಇಆರ್ ಒ ಮತ್ತು ಬಿಎಲ್ಒಗಳ ನಿರ್ಣಾಯಕ ಪಾತ್ರವನ್ನು ಒಪ್ಪಿಕೊಂಡ ಜ್ಞಾನೇಶ್ ಕುಮಾರ್ ಅವರು ರಾಜ್ಯ ಸರ್ಕಾರಗಳು ಎಸ್ಡಿಎಂ ಮಟ್ಟದ ಅಥವಾ ಸಮಾನ ಅಧಿಕಾರಿಗಳನ್ನು ಇಆರ್ ಒಗಳನ್ನಾಗಿ ನಾಮನಿರ್ದೇಶನ ಮಾಡಬೇಕು. ಜೇಷ್ಠತೆಯನ್ನು ಪರಿಗಣಿಸಿ ಬಿಎಲ್ಒಗಳನ್ನು ನೇಮಿಸಬೇಕು ಎಂದು ತಿಳಿಸಿದರು.
ಸಂವಿಧಾನದ 326ನೇ ವಿಧಿ ಮತ್ತು ಆರ್ಪಿ ಕಾಯ್ದೆ 1950ರ ಸೆಕ್ಷನ್ 20ರ ಪ್ರಕಾರ, 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಕ್ಷೇತ್ರದಲ್ಲಿ ಸಾಮಾನ್ಯವಾಗಿ ವಾಸಿಸುವ ಭಾರತದ ನಾಗರಿಕರನ್ನು ಮಾತ್ರ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು.
ಎಲ್ಲಾ ಸಿಇಒಗಳು, ಡಿಇಒಗಳು, ಇಆರ್ ಒಗಳು ತಮ್ಮ ಮಟ್ಟದಲ್ಲಿ ಸರ್ವಪಕ್ಷ ಸಭೆಗಳನ್ನು ನಡೆಸಬೇಕು. ಮತದಾರರ ಪಟ್ಟಿಯ ಸರಿಯಾದ ನವೀಕರಣ ಸೇರಿದಂತೆ ಅವರ ಅಧಿಕಾರ ವ್ಯಾಪ್ತಿಗೆ ಸಂಬAಧಿಸಿದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ನಿರ್ದೇಶಿಸಿದರು.
ಇಆರ್ಒ ಅಥವಾ ಬಿಎಲ್ ಒ ವಿರುದ್ಧ ಯಾವುದೇ ದೂರುಗಳು ಬಂದಲ್ಲಿ ಗಂಭೀರವಾಗಿ ಪರಿಗಣಿಸಿ ಸಂಬAಧಿಸಿದವರ ಮೇಲೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಮತದಾರರ ಪಟ್ಟಿಯ ನವೀಕರಣಕ್ಕಾಗಿ ಮನೆ-ಮನೆ ಪರಿಶೀಲನೆಯ ಸಮಯದಲ್ಲಿ ಎಲ್ಲಾ ಬಿಎಲ್ಒಗಳು ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4