ಬಿಬಿಎಂಪಿ ಹಿರಿಯ ಆರೋಗ್ಯ ಪರಿವೀಕ್ಷದ ಶಿವಲಿಂಗಯ್ಯ ಹಾಗೂ ಮಾರುತಿ ಪೀಸೆಟ್ ಅವರನ್ನು ಬೆಂಗಳೂರು ದಕ್ಷಿಣ ವಲಯದಿಂದ ರಾಜರಾಜೇಶ್ವರಿನಗರ ವಲಯಕ್ಕೆ ವರ್ಗಾಯಿಸಲಾಗಿದೆ. ಬೊಮ್ಮನಹಳ್ಳಿಯ ಯಲಚೇನಹಳ್ಳಿ ವಾರ್ಡ್ ನ ಕರೀಗೌಡ, ಪಶ್ಚಿಮ ವಲಯದ ವಿಶ್ವನಾಥ್ ಅವರುಗಳನ್ನು ರಾಜರಾಜೇಶ್ವರಿನಗರ ವಲಯಕ್ಕೆ ವರ್ಗಾವಣೆ ಮಾಡಿದ್ದಾರೆ.
ಕಂದಾಯ ಪರಿವೀಕ್ಷಕ ಹನುಮಂತರಾಯಪ್ಪ ಅವರನ್ನು ಶ್ರೀರಾಮ ಉಪವಲಯ ಕೇಂದ್ರದಿಂದ ಕೆಂಗೇರಿ ಉಪವಲಯಕ್ಕೆ, ಹಿರಿಯ ಆರೋಗ್ಯ ಪರಿವೀಕ್ಷಕ ರಮೇಶ್ ಅವರನ್ನು ಆರ್ ಆಗರದಿಂದ ಹೊರಭಾಗಕ್ಕೆ ಹಾಗೂ ಡಿ. ಎಲ್. ನಾರಾಯಣ ಅವರನ್ನು ಬೆಂಗಳೂರಿನಿಂದ ಬೇರೆಡೆಗೆ ವರ್ಗಾಯಿಸುವಂತೆ ಡಿಕೆಶಿ ಸೂಚಿಸಿದ್ದಾರೆ. ಆಆರ್ ನಗರದ ಹಿರಿಯ ಆರೋಗ್ಯ ಪರಿವೀಕ್ಷಕ ಮಂಜುನಾಥ ಅವರನ್ನು ಬೆಂಗಳೂರಿನಿಂದ ಬೇರೆ ಕಡೆಗೆ ಹಾಗೂ ಹೇರೋಹಳ್ಳಿ ಉಪವಲಯದ ಕಂದಾಯ ಪರಿವೀಕ್ಷಕ ಕುಮಾರ್ ಅವರನ್ನು ಖಾಲಿ ಇರುವ ಜಾಗಕ್ಕೆ ವರ್ಗಾವಣೆ ಮಾಡುವಂತೆ ಸೂಚನೆ ನೀಡಲಾಗಿದೆ.
ಇದರ ಜತೆಗೆ ನನ್ನ ಗಮನಕ್ಕೆ ತಾರದೆ ಯಾವುದೇ ಅಧಿಕಾರಿಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾವಣೆ ಮಾಡದಂತೆಯೂ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


