ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಮುಂಭಾಗದ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ ಸ್ಥಳದಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಗಾಳಿ ಹಾಗೂ ಮಳೆ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದ ಬಳಿಯೇ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಆದರೆ, ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಪರಿಣಾಮ ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಗಳಿಂದ ತಿಳಿದಬಂದಿದೆ.
ಘಟನೆ ಹಿನ್ನೆಲೆಯಲ್ಲಿ ಶಿವಾನಂದ ಸರ್ಕಲ್ ಬಳಿ ಪೊಲೀಸರು ರಸ್ತೆ ಬಂದ್ ಮಾಡಿದ್ದು, ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW