ಬೆಂಗಳೂರು: ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ, ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರು ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಡವರಿಗೆ ಹಣ ಕೊಡುವುದು ಬಿಜೆಪಿಯವರಿಗೆ ಮನಸ್ಸಿಲ್ಲ ಎಂದರೆ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ ಎಂದು ಅವರು ಹೇಳಿದರು.
ಬಿಜೆಪಿಯವರು ಬಡವರ ಪರ ಇಲ್ಲ. ಪ್ರತಿಭಟನೆ ಮೂಲಕ ಸಾರ್ವಜನಿಕವಾಗಿ ಅದನ್ನು ಹೇಳಲು ಹೊರಟಿದ್ದಾರೆ. ಇದೆಲ್ಲವನ್ನು ಜನ ಗಮನಿಸುತ್ತಾರೆ ಎಂದು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4