nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    • ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ
    ಕೊರಟಗೆರೆ May 11, 2025

    ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ

    By adminMay 11, 2025No Comments3 Mins Read
    trust koratagere

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಶ್ರೀ ವೀರನಾಗಮ್ಮ ದೇವಾಲಯ ಟ್ರಸ್ಟ್ ಸದಸ್ಯರು ಬಂಗಾರ, ಬೆಳ್ಳಿ, ಅಕ್ಕಿ ಮತ್ತು ಹಣದ ವಹಿವಾಟಿನಲ್ಲಿ ಭಾರೀ ಗೋಲ್‌ ಮಾಲ್ ನಡೆಸಿರುವ ಆರೋಪ ಕೇಳಿ ಬಂದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಪ್ರಶ್ನೆಗಳಿಗೆ ಟ್ರಸ್ಟಿಗಳ ಮೌನವೇ ಉತ್ತರವಾಯಿತು.


    Provided by
    Provided by

    ಬೆಳ್ಳಿ, ಬಂಗಾರ, ಬ್ಯಾಂಕ್ ಪುಸ್ತಕ ಮತ್ತು ದಾಖಲೆಗಳೆಲ್ಲ ಸೀಜ್ ಮಾಡಲಾಗಿದ್ದು, ಟ್ರಸ್ಟ್ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಖಡಕ್ ಆದೇಶ ಮಾಡಿದ್ದಾರೆ.

    ಕೊರಟಗೆರೆ ತಾಲೂಕು ಕಸಬಾ ಹೋಬಳಿ ವಡ್ಡಗೆರೆಯ ಇತಿಹಾಸ ಪ್ರಸಿದ್ಧ ಶ್ರೀವೀರನಾಗಮ್ಮ ದೇವಾಲಯದ ಕಥೆ ಇದು. ಮುಜರಾಯಿ ಇಲಾಖೆ ಆದೇಶದಂತೆ 2006 ರಲ್ಲಿ ಆರಂಭ ಶ್ರೀ ವೀರನಾಗಮ್ಮ ದೇವಾಲಯ ಸಮಿತಿ ಕಾಲಕ್ರಮೇಣ ಟ್ರಸ್ಟ್ ಆಗಿ ಬದಲಾಗಿದೆ. 19 ವರ್ಷಗಳ ದಾಖಲೆಗಳೇ ಮಾಯವಾಗಿವೆ. ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಕೇಳುವ 20ಕ್ಕೂ ಅಧಿಕ ಪ್ರಶ್ನೆಗಳಿಗೆ ಮೌನವೇ ಉತ್ತರವಾಗಿ ಅಕ್ರಮ ನಡೆದಿರೋದು ಸಾಬೀತಾಗಿದೆ.

    ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಮಾಹಿತಿ ಮುಜರಾಯಿ ಇಲಾಖೆಗೆ ನೀಡಿದ್ದೀರಾ? ಟ್ರಸ್ಟ್ ರಚನೆಗೆ ಎಲ್ಲಾ ವರ್ಗದ ಜನತೆ ಇರಬೇಕಾದ ಕಾನೂನು ಗೊತ್ತಿಲ್ಲವೇ? ಭಕ್ತರಿಂದ ಕಾಣಕೆ ರೂಪದಲ್ಲಿ ಪಡೆಯುವ ಹಣ, ಅಕ್ಕಿ, ಬಂಗಾರ, ಬೆಳ್ಳಿ, ವಸ್ತುಗಳಿಗೆ ಪ್ರತ್ಯೇಕ ರಸೀದಿ ಪುಸ್ತಕ ಏಕಿಲ್ಲ? ಬಂಗಾರ, ಬೆಳ್ಳಿ ಮತ್ತು ನಗದು ಹಣದ ಮಾಹಿತಿ ಮುಜರಾಯಿಗೆ ಏಕೆ ನೀಡಿಲ್ಲ? ಎಂಬ 20ಕ್ಕೂ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರವೇ ನೀಡದೇ ಟ್ರಸ್ಟಿಗಳು ಮೌನಕ್ಕೆ ಶರಣಾಗಿದ್ದರು.

    ಧಾರ್ಮಿಕ ದತ್ತಿ ಇಲಾಖೆಯ ಕೆ.ಪದ್ಮಾ ನೇತೃತ್ವದಲ್ಲಿ ಕೊರಟಗೆರೆ ತಹಶೀಲ್ದಾರ್ ಮಂಜುನಾಥ, ಪಿಎಸೈ ತಿರ್ಥೇಶ್ ತಂಡ ಪರಿಶೀಲನೆ ನಡೆಸಿದ ನಂತರ ಟ್ರಸ್ಟಿಗಳ ಬಳಿಯಿದ್ದ ಚಿನ್ನಾಭರಣ, ಬೆಳ್ಳಿ, ಟ್ರಸ್ಟ್ ಮತ್ತು ದೇವಾಲಯದ ದಾಖಲೆ, ಬ್ಯಾಂಕು ಪುಸ್ತಕ ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದು ಟ್ರಸ್ಟ್ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ ಗೆ ಸೂಚಿಸಿದರು.

    8 ಬ್ಯಾಂಕಿನಲ್ಲಿ ಟ್ರಸ್ಟ್ ನ ಚಾಲ್ತಿ ಖಾತೆ..

    ಬೆಂಗಳೂರಿನ ಶ್ರೀಗಂಧ, ರಾಜಾಜಿನಗರದ ಜನಹಿತ ಬ್ಯಾಂಕು, ತುಮಕೂರು ಕೆಂಪೇಗೌಡ ಪತ್ತಿನ ಸಹಕಾರ ಬ್ಯಾಂಕು, ಕೊರಟಗೆರೆಯ ಕೆನರಾ, ಕುಂಚಶ್ರೀ, ಕರ್ನಾಟಕ, ಎಸ್‌ ಬಿಎಂ ಬ್ಯಾಂಕು, ವಡ್ಡಗೆರೆಯ ವಿಎಸ್‌ ಎಸ್‌ ಎಲ್ ಬ್ಯಾಂಕು ಸೇರಿದಂತೆ 8 ಬ್ಯಾಂಕಿನಲ್ಲಿ ವಡ್ಡಗೆರೆ ಶ್ರೀವೀರನಾಗಮ್ಮ ದೇವಾಲಯ ಟ್ರಸ್ಟ್ ನಲ್ಲಿ ಚಾಲ್ತಿ ಖಾತೆಗಳಿದ್ದು, ಮುಜರಾಯಿ ಇಲಾಖೆಗೆ ಗೊತ್ತಿಲ್ಲದೇ ಅನಧಿಕೃತವಾಗಿ ಕೋಟ್ಯಾಂತರ ರೂ ವಹಿವಾಟು ನಡೆದಿದೆ.

    ಧಾರ್ಮಿಕ ದತ್ತಿ ಇಲಾಖೆಗೆ ದೂರು :

    ಮುಜರಾಯಿ ಇಲಾಖೆಗೆ ಮಾಹಿತಿಯೇ ನೀಡದೇ ಟ್ರಸ್ಟ್ ಮಾಡಿರುವುದೇ ಅಕ್ರಮ. ಟ್ರಸ್ಟ್ ನಲ್ಲಿ ಒಂದೇ ಸಮುದಾಯದ 14 ಜನ ಟ್ರಸ್ಟಿ ಇರುವುದೇ ಕಾನೂನು ಬಾಹಿರ. ಭಕ್ತರ ನೀಡಿರುವ ಬೆಳ್ಳಿ ಬಂಗಾರ ಟ್ರಸ್ಟಿಗಳ ಮನೆಯಲ್ಲಿದೆ. ಭಕ್ತರು ನೀಡುವ ಕಾಣಿಕೆಯ ಹಣ ಟ್ರಸ್ಟಿಗಳ ಪೋನ್‌ ಪೇ, ಗೋಗಲ್‌ ಪೇಗೆ ಹಾಕಿಸಿಕೊಳ್ತಾರೇ. ಬಂಗಾರ–ಬೆಳ್ಳಿ ಕಳ್ಳತನದ ದೂರೇ ದಾಖಲಾಗಿಲ್ಲ. ಕಾಮಗಾರಿಯ ಬೀಲ್‌ ಗೆ 70 ಲಕ್ಷ ಬಿಲ್ ಮಾಡಿದ್ದಾರೆ. ಪ್ರತಿವರ್ಷ ಆಡಿಲ್ ಮತ್ತು ಸಭಾ ನಡವಳಿಕೆಯೇ ಮಾಡಿಸಿಲ್ಲ ಎಂಬ 15ಕ್ಕೂ ಅಧಿಕ ಅಕ್ರಮದ ಬಗ್ಗೆ ದಾಖಲೆ ಸಮೇತ ಬೆಂಗಳೂರು ಧಾರ್ಮಿಕ ದತ್ತಿ ಇಲಾಖೆಗೆ ನೌಕರರ ಸಂಘದ ಮಾಜಿ ಅಧ್ಯಕ್ಷ ವಿ.ಕೆ.ವೀರಕ್ಯಾತರಾಯ ದೂರು ಸಲ್ಲಿಸಿದ್ದಾರೆ.

     ಶ್ರೀ ವೀರನಾಗಮ್ಮ ಟ್ರಸ್ಟ್ ಅಧ್ಯಕ್ಷ ರಾಜೀನಾಮೆ:

    ವಡ್ಡಗೆರೆಯ ಶ್ರೀ ವೀರನಾಗಮ್ಮ ದೇವಾಲಯ ಟ್ರಸ್ಟ್ ಸೇರಿದ ಸದಸ್ಯರಾದ ವಿ.ನಾಗೇಶ್, ಶಿವಕುಮಾರ್ ಮತ್ತು ಮಾರುತೀಶ್ ಸೇರಿಕೊಂಡು ಲಕ್ಷಾಂತರ ರೂ ದುರುಪಯೋಗ ಮಾಡಿದ್ದಾರೆ. ಸಮಿತಿಯ ಲೆಕ್ಕಕ್ಕೆ ನೀಡದೇ ವಂಚನೆ ಮಾಡಿರುವ ಪರಿಣಾಮ ಮನನೊಂದು ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು 2025 ರ ಏ. 25 ರಂದು ಮುಜರಾಯಿ ಇಲಾಖೆಗೆ ನೀಡಿರುವ ಪತ್ರ ದೊರೆತಿದೆ.

    ಅಭಿವೃದ್ದಿಯ ಜವಾಬ್ದಾರಿ ನಮ್ಮದೇ ಆಗಿದೆ. ಅಭಿವೃದ್ದಿಯ ಹಿತದೃಷ್ಟಿಯಿಂದ ಅಭಿವೃದ್ದಿ ಸಮಿತಿಯನ್ನೇ ಟ್ರಸ್ಟ್ ಮಾಡಿಕೊಂಡ ಹಿರಿಯರ ಆದೇಶದಂತೆ ನಾವು ಕೆಲಸ ಮಾಡಿದ್ದೀವಿ. ಮುಜರಾಯಿ ದೇವಾಲಯ ಎಂಬ ವಿಚಾರ ನಮಗೆ  ಗೊತ್ತು. ಟ್ರಸ್ಟ್ ನ ದಾಖಲೆ, ಬಂಗಾರ ಮತ್ತು ಬೆಳ್ಳಿ ಇಲಾಖೆಗೆ ಒಪ್ಪಿಸಿದ್ದೇವೆ. ನಮ್ಮ ದೃಷ್ಟಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ತನಿಖೆ ಆಗಲಿ ನಮ್ಮದೇನು ತಕರಾರು ಇಲ್ಲ.

    — ಶಿವಕುಮಾರ್, ಟ್ರಸ್ಟಿ. ಶ್ರೀ ವೀರನಾಗಮ್ಮ ಟ್ರಸ್ಟ್. ವಡ್ಡಗೆರೆ


    ಶ್ರೀ ವೀರನಾಗಮ್ಮ ದೇವಾಲಯ ಟ್ರಸ್ಟ್ ಕಾನೂನು ಪ್ರಕಾರ ಯಾವ ಕೆಲಸವನ್ನು ಮಾಡಿಲ್ಲ. ಕಾಣಿಕೆಯ ಹಣದಲ್ಲಿ ಅವ್ಯವಹಾರ ಆಗಿರೋದು ಸಾಬೀತಾಗಿದೆ. ಶ್ರೀ ವೀರನಾಗಮ್ಮ ಟ್ರಸ್ಟ್ ಕಚೇರಿ ಸೀಜ್ ಮಾಡಿ ಬಂಗಾರ, ಬೆಳ್ಳಿ ಮತ್ತು ದಾಖಲೆ ವಶಕ್ಕೆ ಪಡೆಯಲಾಗಿದೆ. ಟ್ರಸ್ಟ್ ಗೆ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚಿಸಲಾಗಿದೆ. ದೇವಾಲಯದ ದೈನಂದಿನ ಪೂಜಾ ಕಾರ್ಯಕ್ರಮದ ಜವಾಬ್ದಾರಿ ತಹಶೀಲ್ದಾರ್‌ ಗೆ ವಹಿಸಲಾಗಿದೆ.

    — ಕೆ.ಪದ್ಮಾ. ಕೇಂದ್ರ ಸ್ಥಾನಿಕ ಸಹಾಯಕಿ. ಧಾರ್ಮಿಕ ದತ್ತಿ ಇಲಾಖೆ. ಬೆಂಗಳೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ತುಮಕೂರು: ಗುಬ್ಬಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ತಾಲ್ಲೂಕು ಯೋಜನಾ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ…

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.