nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026
    Facebook Twitter Instagram
    ಟ್ರೆಂಡಿಂಗ್
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    • ಗುಬ್ಬಿ:  ಹೈಟೆನ್ಷನ್ ವಿದ್ಯುತ್ ತಂತಿ:  ನ್ಯಾಯಯುತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ರೈತರಿಂದ ಸಿದ್ಧತೆ!
    • ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ
    • ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    ತುಮಕೂರು January 2, 2026

    ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ

    By adminJanuary 2, 2026No Comments2 Mins Read
    koregaon tumakur

    ತುಮಕೂರು: ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಇಂದು ಅಂಬೇಡ್ಕರ್ ಯುವ ಸೇನೆ ವತಿಯಿಂದ 208ನೇ ಭೀಮ–ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಲಾಯಿತು.

    ತಮ್ಮನ್ನು ಅವಮಾನ ಮಾಡಿ, ಸಮಾನತೆಯನ್ನು ನಿರಾಕರಿಸಿದ ಮರಾಠರ ಎರಡನೇ ಬಾಜೀರಾಯನ 28 ಸಾವಿರ ಮರಾಠ ಸೈನಿಕರ ವಿರುದ್ಧ ಐದು ನೂರು ಜನ ಮಹರ್ ಸೈನಿಕರು, ಸ್ವಾಭಿಮಾನಕ್ಕಾಗಿ ಭೀಮಾ ನದಿ ತೀರದ ಕೋರೆಗಾಂವ್ ಬಳಿ ನಡೆಸಿದ ಯುದ್ಧದ 208ನೇ ವಿಜಯೋತ್ಸವದ ಅಂಗವಾಗಿ ಭೀಮಕೋರೆಗಾಂವ್ ಯುದ್ಧಸ್ಮಾರಕದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಸೂಚಿಸುವ ಮೂಲಕ ಯುದ್ಧದಲ್ಲಿ ಮಡಿದ ಮಹರ್ ಸೈನ್ಯದ 22 ಜನರನ್ನು ಸ್ಮರಿಸಲಾಯಿತು.


    Provided by
    Provided by

    ಈ ವೇಳೆ ಮಾತನಾಡಿದ ಅಂಬೇಡ್ಕರ್ ಯುವ ಸೇನೆಯ ಜಿಲ್ಲಾಧ್ಯಕ್ಷ ಗಣೇಶ್.ಜಿ., ಭೀಮ ಕೋರೆಗಾಂವ್ ವಿಜಯೋತ್ಸವ ದೇಶದ ದಲಿತರಿಗೆ ಸ್ವಾಭಿಮಾನದ ಸಂಕೇತವಾಗಿದೆ. ದಲಿತರ ಸ್ವಾಭಿಮಾನಕ್ಕೆ, ಆತ್ಮ ಗೌರವಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ ಎಂಬುದಕ್ಕೆ ಈ ಯುದ್ಧ ಸಾಕ್ಷಿಯಾಗಿದೆ. ಲಂಡನ್‌ನ ಕೊಲಂಬಿಯಾ ವಿವಿಯಲ್ಲಿ ಅಂಬೇಡ್ಕರ್ ಕಲಿಯುವ ವೇಳೆ ಅಲ್ಲಿನ ಲೈಬ್ರರಿಯಲ್ಲಿ ದೊರೆತ ಪುಸ್ತಕದಿಂದ ಎರಡನೇ ಬಾಜೀರಾಯನ ಸೈನ್ಯದ ವಿರುದ್ಧ ದಲಿತರು ನಡೆಸಿದ ಸ್ವಾಭಿಮಾನಿ ಯುದ್ಧವನ್ನು ಅರಿತು, ಯುದ್ಧದಲ್ಲಿ ಮಡಿದ ಮಹರ್ ಸೈನಿಕರಿಗಾಗಿ ಬ್ರಿಟಿಷ್ ಅಧಿಕಾರಿಗಳು ನಿರ್ಮಿಸಿದ ಸ್ಮಾರಕವನ್ನು ಪತ್ತೆ ಹಚ್ಚುವ ಮೂಲಕ ಇತಿಹಾಸದಲ್ಲಿ ಮುಚ್ಚಿ ಹೋಗಿದ್ದ ಮಹಾನ್ ಘಟನೆಯನ್ನು ಜಗತ್ತಿಗೆ ಪರಿಚಯಿಸಿದರು. ಬಾಬಾ ಸಾಹೇಬರು ತಾವು ಬದುಕಿದ್ದಷ್ಟು ವರ್ಷ ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಜನವರಿ 01 ರಂದು ಭೀಮ-ಕೋರೆಗಾಂವ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಮಡಿದ ಯೋಧರಿಗೆ ನಮನ ಸಲ್ಲಿಸುವ ಕೆಲಸ ಮಾಡುತ್ತಿದ್ದರು. ಅದೇ ರೀತಿಯಲ್ಲಿ ನಾವುಗಳ ಸಹ ಪ್ರತಿವರ್ಷ ಜನವರಿ 01 ರಂದು ಮಡಿದ ಯೋಧರನ್ನು ಸ್ಮರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

    ಮುಖಂಡರಾದ ಸೌಭಾಗ್ಯಮ್ಮ ಮಾತನಾಡಿ, ಇತಿಹಾಸದ ಪುಟಗಳಲ್ಲಿ ಮುಚ್ಚಿ ಹೋಗಿದ್ದ ಭೀಮ-ಕೋರೆಗಾಂವ್ ಹೋರಾಟವನ್ನು ತಮ್ಮ ಅಧ್ಯಯನ ಮೂಲಕ ಹೊರತಂದು ದಲಿತರು ಸಹ ವೀರರೇ, ಅವರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ ಎಂಬುದಕ್ಕೆ 500 ಜನ ಮಹರ್ ಸೈನಿಕರು 28 ಸಾವಿರ ಮರಾಠರ ಪೇಶ್ವೆ ಸೈನಿಕರನ್ನು ಸದೆಬಡಿದ ಈ ಯುದ್ಧವೇ ಸಾಕ್ಷಿ. ಇದು ನಮ್ಮೆಲ್ಲರ ಸ್ವಾಭಿಮಾನವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.

    ಡಿಎಸ್‌ಎಸ್ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ, ಭೀಮ–ಕೋರೆಗಾಂವ್ ಯುದ್ಧ ದಲಿತರ ಸ್ವಾಭಿಮಾನದ ಸಂಕೇತ. ಇದನ್ನು ಜಗತ್ತಿನ ಮುಂದೆ ಸಾಕ್ಷ್ಯಾಧಾರಗಳ ಮೂಲಕ ತೆರೆದಿಡುವ ಮೂಲಕ ಬಾಬಾ ಸಾಹೇಬರು, ದಲಿತರಿಗೆ ಒಂದು ಎದೆಗಾರಿಕೆಯನ್ನು ಮೂಡಿಸಿದ್ದಾರೆ ಎಂದರು.

    ದಲಿತ ಮುಖಂಡರಾದ ದಾಸಪ್ಪ ಮಾತನಾಡಿದರು. ಈ ವೇಳೆ ಮುಖಂಡರಾದ ಆಟೋ ಶಿವರಾಜು, ಡಿ. ಕೆ.ಇಂದ್ರಕುಮಾರ್, ಪಾಲಿಕೆ ಮಾಜಿ ಸದಸ್ಯ ನಯಾಜ್, ನರಸಿಂಹಮೂರ್ತಿ, ದೊಡ್ಡಯ್ಯ, ದಾಸಪ್ಪ, ಲಕ್ಷ್ಮಿಕಾಂತ್, ಮಾರುತಿ, ಪಾಲಿಕೆ ನೌಕರರ ಸಂಘದ ಗೌರವಾಧ್ಯಕ್ಷ ಅಂಜನಪ್ಪ, ಸೌಭಾಗ್ಯ, ಕಿರಣ್, ಲೋಕೇಶ್, ಶೆಟ್ಟಾಳಯ್ಯ, ಮಂಜುನಾಥ್, ಹಾಲೇಶ್ ಮತ್ತಿತರರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.…

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ

    January 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.