nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025
    Facebook Twitter Instagram
    ಟ್ರೆಂಡಿಂಗ್
    • ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ
    • 80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ
    • ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ
    • ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ
    • ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ
    • ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!
    • ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಹಗರಣಗಳ ಸರಮಾಲೆ, ಆಡಳಿತ ಸತ್ತುಹೋಗಿದೆ: ಸರ್ಕಾರದ ವಿರುದ್ಧ ಬಿ.ಸಿ. ಪಾಟೀಲ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    ತುಮಕೂರು September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    By adminSeptember 29, 2025No Comments1 Min Read
    tumakuru dasara

    ತುಮಕೂರು: ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ತುಮಕೂರು ದಸರಾ ಪ್ರಯುಕ್ತ ಆಯೋಜಿಸಿದ್ದ ‘ಪಂಜಿನ ಕವಾಯತು’ ದಸರಾದ ವೈಭವ ಹೆಚ್ಚಿಸಿತು. ಎನ್‌ಸಿಸಿ, ಎನ್‌ಎಸ್‌ಎಸ್, ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಾಹಸಕ್ಕೆ ಸಾವಿರಾರು ಜನ ಸಾಕ್ಷಿಯಾದರು. ನೂರಾರು ವಿದ್ಯಾರ್ಥಿಗಳು ಸಾಲಾಗಿ ನಿಂತು ಬೆಂಕಿಯ ಜತೆಗೆ ಆಟವಾಡುತ್ತಿದ್ದಂತೆ ಭಾಸವಾಯಿತು.

    ನೂರಾರು ಬೆಂಕಿ ಪಂಜುಗಳನ್ನು ಬಳಸಿ ‘ತುಮಕೂರು’, ‘ದಸರಾ-2025’, ‘ಥ್ಯಾಂಕ್ಯೂ’, ‘ವೆಲ್‌ ಕಮ್ ಟು ಆಲ್’ ಎಂಬ ಇಂಗ್ಲಿಷ್ ಪದದ ಕಲಾಕೃತಿ ಅರಳಿಸಿದರು. ಬೆಂಕಿ ಹಿಡಿದು ಧೈರ್ಯದಿಂದ ಹೆಜ್ಜೆ ಹಾಕುತ್ತಿದ್ದ ವಿದ್ಯಾರ್ಥಿಗಳು ವೀಕ್ಷಕರಲ್ಲಿ ಬೆರಗು ಮೂಡಿಸಿದರು. ಜಿಲ್ಲೆಯ ಜನತೆಯ ಎದುರಿಗೆ ವಿಸ್ಮಯ ಲೋಕ ತೆರೆದಿಟ್ಟರು. ಇಡೀ ದಸರಾಗೆ ಮೆರುಗು ತಂದರು.


    Provided by
    Provided by

    ಸಂಜೆ 7 ಗಂಟೆಗೆ ಸರಿಯಾಗಿ ಶುರುವಾದ ಕವಾಯತು ಸುಮಾರು 25 ನಿಮಿಷಗಳ ಕಾಲ ನಡೆಯಿತು. 256 ಜನರಲ್ಲಿ 160 ಮಂದಿ ವಿದ್ಯಾರ್ಥಿನಿಯರೇ ಇದ್ದರು. ಯಾವುದೇ ಅಳುಕಿಲ್ಲದೆ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಸಾಹಸ ದೃಶ್ಯಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಎರಡು ತಿಂಗಳ ನಿರಂತರ ತಯಾರಿ ಫಲ ನೀಡಿತು. ವೀಕ್ಷಕರಿಂದ ಪಂಜಿನ ಕವಾಯತಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

    ಕವಾಯತು ವೀಕ್ಷಣೆಗೆ ಆಗಮಿಸಲು ಸಾರ್ವಜನಿಕರಿಗೆ ಉಚಿತವಾಗಿ ಪಾಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ನಿರೀಕ್ಷೆಗೂ ಮೀರಿ ಸಾವಿರಾರು ಜನ ಕ್ರೀಡಾಂಗಣದ ಕಡೆಗೆ ಹೆಜ್ಜೆ ಹಾಕಿದರು. ಇಡೀ ಕ್ರೀಡಾಂಗಣ ಜನರಿಂದ ತುಂಬಿತ್ತು. ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರು ಕವಾಯತು ವೀಕ್ಷಿಸಿದರು. ಸ್ಥಳದ ಅಭಾವದಿಂದ ಹತ್ತಾರು ಜನ ಹೊರಗೆ ಉಳಿದಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

    ಕಳೆದ ವರ್ಷದಿಂದ ಜಿಲ್ಲಾ ಆಡಳಿತದಿಂದ ದಸರಾ ಆಚರಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಮೈಸೂರು ಮಾದರಿಯಲ್ಲಿ ಕವಾಯತು ನಡೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿತ್ತು. ಕವಾಯತು ನಂತರ ಹಸಿರು ಸಿಡಿಮದ್ದು ಪ್ರದರ್ಶನ ನಡೆಯಿತು. ಗಾಯಕ ಕಂಬದ ರಂಗಯ್ಯ ಅವರಿಂದ ಗಾಯನ ಕಾರ್ಯಕ್ರಮ ನೆರವೇರಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?

    December 17, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿಯಲ್ಲಿನ ವಿಳಂಬ ಹಾಗೂ ಸಚಿವರ ತಪ್ಪು ಮಾಹಿತಿಯ ವಿಚಾರ ಇಂದು…

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ

    December 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.