nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
    ತುಮಕೂರು December 28, 2025

    ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?

    By adminDecember 28, 2025No Comments2 Mins Read
    shubha kalyan

    ತುಮಕೂರು: ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.29 ಮತ್ತು 30 ರಂದು ಇಲ್ಲಿನ ಗಾಜಿನ ಮನೆಯಲ್ಲಿ ಎರಡು ದಿನಗಳ ಕಾಲ ನಡೆಯಲಿದೆ. ಡಾ. ಕರೀಗೌಡ ಬೀಚನಹಳ್ಳಿ ಇವರು ಸಮ್ಮೇಳನದ ಅಧ್ಯಕ್ಷರಾಗಿದ್ದು, ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿವೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಮ್ಮೇಳನದಲ್ಲಿ ಮಕ್ಕಳ ಗೋಷ್ಠಿಗೂ ಅವಕಾಶ ನೀಡಲಾಗಿದೆ. ಕವಿ, ಸಾಹಿತಿಗಳು ಮತ್ತು ಓದುಗರನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು. ಸಮ್ಮೇಳನಕ್ಕೆ ಅಂದಾಜು 3 ರಿಂದ 4 ಸಾವಿರ ಜನ ಸಾಹಿತ್ಯಾಸಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಶಾಲಾ ಮಕ್ಕಳು, ಶಿಕ್ಷಕರೂ ಸಹ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ತಿಳಿಸಲಾಗಿದೆ ಎಂದರು.


    Provided by
    Provided by

    ಸಮ್ಮೇಳನದ ಅಂಗವಾಗಿ ಡಿಸೆಂಬರ್ 29ರ ಬೆಳಗ್ಗೆ 7.30 ಗಂಟೆಗೆ ಗಾಜಿನ ಮನೆ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ 8 ಗಂಟೆಗೆ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆ ಪ್ರಾರಂಭವಾಗಿ ಎಂ.ಜಿ.ರಸ್ತೆ, ಗುಬ್ಬಿ ಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

    ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಗೆ ಗಾಜಿನ ಮನೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರು ಸಮ್ಮೇಳನದ ನೆನಪಿನ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಲೇಖಕರು, ಕಲಾವಿದರು, ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಾರ್ವಜನಿಕರು ಸೇರಿದಂತೆ 4,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

    ಡಿಸೆಂಬರ್ 29ರಂದು ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಹಿರಿಯ ಲೇಖಕರಾದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕುವೆಂಪು ಅವರ ಜೀವನ ಮತ್ತು ಸಾಹಿತ್ಯ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

    ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ದಲಿತ ಸಾಹಿತ್ಯ ಕವಿಗೋಷ್ಠಿ ಹಾಗೂ ಮಕ್ಕಳ ಗೋಷ್ಠಿ ಸೇರಿದಂತೆ ಆರು ವಿಚಾರ ಗೋಷ್ಠಿಗಳು ಇರಲಿವೆ. ಮಕ್ಕಳ ಕವಿಗೋಷ್ಠಿ ಇದೇ ಮೊದಲ ಬಾರಿಗೆ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು. ಅಲ್ಲದೆ ಸುಗಮ ಸಂಗೀತ, ನೃತ್ಯ ಕಾರ್ಯಕ್ರಮ, ರಂಗಗೀತೆಗಳ ಗಾಯನ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥೆ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.

    ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರು, ಸರ್ಕಾರಿ ನೌಕರರಿಗೆ 2 ದಿನಗಳು ಒ.ಒ.ಡಿ. (OOD) ಸೌಲಭ್ಯ ನೀಡಲಾಗುವುದು. ಸಮ್ಮೇಳನಕ್ಕೆ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ-ಸಿಬ್ಬಂದಿ, ಸಾಹಿತಿಗಳು, ಕಲಾವಿದರು, ಲೇಖಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

    ಪತ್ರಿಕಾ ಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಹಾಗೂ ಇತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.