ತುರುವೇಕೆರೆ: ತುಮಕೂರು ಜಿಲ್ಲೆಗೆ ಹೇಮಾವತಿ ನೀರಿನ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯ ವ್ಯಕ್ತಪಡಿಸಿದರು.
ತುರುವೇಕೆರೆ ಪಟ್ಟಣದ ಸಮೀಪ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೇಮಾವತಿ ನೀರನ್ನು ಕುಣಿಗಲ್ ಮೂಲಕ ರಾಮನಗರ, ಚನ್ನಪಟ್ಟಣಕ್ಕೆ ತೆಗೆದುಕೊಂಡು ಹೋಗುವುದನ್ನು ವಿರೋಧ ವ್ಯಕ್ತಪಡಿಸಿ, ಜಿಲ್ಲೆಯ ಕೆಲವು ನಾಯಕರನ್ನು ಹೊರತುಪಡಿಸಿ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಸರ್ಕಾರವು ಕದ್ದು ಮುಚ್ಚಿ ಕಾಮಗಾರಿಯನ್ನು ನಡೆಸುತ್ತಿದ್ದು, ಹೇಮಾವತಿ ಇಲಾಖೆಯಿಂದ ಗೃಹ ಇಲಾಖೆಗೆ ಪತ್ರ ಬಂದಿದ್ದು, ಕಾಮಗಾರಿ ಸುಗಮವಾಗಿ ನಡೆಯಲು ಅನುವು ಮಾಡಿಕೊಡಿ ಎಂದು ಪತ್ರ ಬರೆದಿದ್ದಾರೆ ಎಂದರು.
ಜಿಲ್ಲೆಯಲ್ಲಿ ಈ ಹೋರಾಟಕ್ಕೆ ಭಾಗಿಯಾದ ನಾಯಕರನ್ನು ಹೊಂದಿಸಿ ಎಂದು ಸರ್ಕಾರ ತಿಳಿಸಿದ್ದು ಇದು ನಾಚಿಕೆಗೇಡಿನ ಸಂಗತಿ ಆಗಿದೆ. ನೀರು ಕೊಡಲು ನಮ್ಮ ಯಾವುದೇ ಅಭ್ಯಂತರ ಇಲ್ಲ, ಆದರೆ ನಮ್ಮ ಪಾಲಿನ ನೀರನ್ನು ತೆಗೆದುಕೊಂಡು ಹೋಗಲು ನಮ್ಮ ವಿರೋಧವಿದೆ, ಇದರ ಬಗ್ಗೆ ಗೃಹ ಸಚಿವರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾಮಗಾರಿಯನ್ನು ನಿಲ್ಲಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ವಿಬಿ ಸುರೇಶ್, ಕಾಳಂಜಿ ಹಳ್ಳಿ ಸೋಮಶೇಖರ್, ಕುರುಬರಹಳ್ಳಿ ವೆಂಕಟರಾಮಯ್ಯ, ಉಮೇಶ್, ಸಂದೀಪ್, ರಂಗೇಗೌಡ ಅಯರಹಳ್ಳಿ ಪಾಂಡುರಂಗಯ್ಯ, ಆಪ್ತ ಸಹಾಯಕ ಸುರೇಶ್ ಸೇರಿದಂತೆ ಹಲವರು ಇದ್ದರು.
ವರದಿ : ಸುರೇಶ್ ಬಾಬು ಎಂ., ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA