nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್

    October 3, 2025

    “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”

    October 2, 2025

    ಈ ದಿನದ ಶೀರ್ಷಿಕೆ: ಹಿರಿಯರ ಶಾಪ

    October 2, 2025
    Facebook Twitter Instagram
    ಟ್ರೆಂಡಿಂಗ್
    • ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್
    • “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”
    • ಈ ದಿನದ ಶೀರ್ಷಿಕೆ: ಹಿರಿಯರ ಶಾಪ
    • ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
    • ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ
    • ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು
    • ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್
    • ಬಟ್ಟೆ ಖರೀದಿ ನೆಪದಲ್ಲಿ ಚಿನ್ನ ಕಳವು: ಒಂದು ವರ್ಷದ ಬಳಿಕ ಮಹಿಳೆಯರ ಗ್ಯಾಂಗ್ ಅರೆಸ್ಟ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಇಂದಿನಿಂದ 2 ದಿನಗಳ ಕಾಲ ದಸರಾ ಸಾಂಸ್ಕೃತಿಕ ಮೆರಗು
    ತುಮಕೂರು October 11, 2024

    ತುಮಕೂರು: ಇಂದಿನಿಂದ 2 ದಿನಗಳ ಕಾಲ ದಸರಾ ಸಾಂಸ್ಕೃತಿಕ ಮೆರಗು

    By adminOctober 11, 2024No Comments2 Mins Read
    tumakuru dasara

    ತುಮಕೂರು:  ತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12ರಂದು ಪ್ರತಿ ದಿನ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾ ಉತ್ಸವದ ಮೆರುಗನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಗೃಹ ಸಚಿವರಿಂದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ :


    Provided by
    Provided by
    Provided by

    ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಡಾ.ಶಿವಕುಮಾರ ಸ್ವಾಮೀಜಿ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಮಹಾಗೌರಿ(ಮಹಾಕಾಳಿ) ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ತುಮಕೂರು ದಸರಾ ಪ್ರಯುಕ್ತ ಅಕ್ಟೋಬರ್ 11ರ ಆಯುಧ ಪೂಜೆ ದಿನದಂದು ಏರ್ಪಡಿಸಿರುವ ಮ್ಯಾರಾಥಾನ್, ನಾಡಕುಸ್ತಿ, ಆಹಾರ ಮೇಳ, ವಸ್ತುಪ್ರದರ್ಶನ, ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

    ಕ್ರೀಡಾ ದಸರಾ ಉತ್ಸವದಲ್ಲಿ ಅಕ್ಟೋಬರ್ 11ರ ಬೆಳಿಗ್ಗೆ 7 ಗಂಟೆಗೆ ಮಹಾತ್ಮಗಾಂಧಿ ಕ್ರೀಡಾಂಗಣದಿಂದ ಮ್ಯಾರಾಥಾನ್ ಓಟ ಏರ್ಪಡಿಸಲಾಗಿದ್ದು, ಕ್ರೀಡಾಪಟುಗಳು, ಅಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

    ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ನಾಡಕುಸ್ತಿ; ಆಹಾರ ಮೇಳ; ಪ್ರತಿಷ್ಠಿತ ಹೆಚ್.ಎ.ಎಲ್. ಸಂಸ್ಥೆಯಿಂದ ಹೆಲಿಕಾಪ್ಟರ್ ಶೋ; ಇಸ್ರೋ ಸಂಸ್ಥೆಯಿಂದ ಬಾಹ್ಯಾಕಾಶ ಕುರಿತು ವಿಜ್ಞಾನಿ ರಾಜಾ ರಾಮಣ್ಣ ವಸ್ತುಪ್ರದರ್ಶನ; ಕೃಷಿ, ತೋಟಗಾರಿಕೆ, ಅರಣ್ಯ, ಮೀನುಗಾರಿಕೆ, ಮತ್ತಿತರ ಇಲಾಖೆಗಳಿಂದ ಅತ್ಯಾಕರ್ಷಕ ವಸ್ತುಪ್ರದರ್ಶನ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

    ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಅಮರ ಶಿಲ್ಪಿ ಜಕಣಾಚಾರಿ ವೇದಿಕೆಯಲ್ಲಿ ಸಂಜೆ 7:15 ಗಂಟೆಗೆ ಆಕರ್ಷಕ ಲೇಸರ್ ಶೋ; 7:30 ಗಂಟೆಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ಗುರುಕಿರಣ್ ಹಾಗೂ ಕಂಬದ ರಂಗಯ್ಯ ಮತ್ತು ತಂಡದವರು ಕನ್ನಡ ಗೀತೆಗಳ ಮೂಲಕ ಜನರನ್ನು ರಂಜಿಸಲಿದ್ದಾರೆ ಎಂದು ತಿಳಿಸಿದರು.

    ಅ.12ರ ವಿಜಯದಶಮಿ ಕಾರ್ಯಕ್ರಮಗಳು:

    ಮರುದಿನ ಅಕ್ಟೋಬರ್ 12ರ ವಿಜಯದಶಮಿ ದಿನದಂದು ಮಧ್ಯಾಹ್ನ 1 ಗಂಟೆಗೆ ನಗರದ ಟೌನ್‌ ಹಾಲ್ ವೃತ್ತದಿಂದ ಮೆರವಣಿಗೆ ನಡೆಯಲಿದ್ದು, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 5 ಗಂಟೆಯಿಂದ ವಿಜಯದಶಮಿ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶಮೀ ಪೂಜೆ; ಬೆಳಿಗ್ಗೆ 10 ರಿಂದ 1 ಗಂಟೆಯವರಗೆ ನಗರದ ಕನ್ನಡ ಭವನದಲ್ಲಿ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ.

    ನಂತರ ಸಂಜೆ 5:30 ರಿಂದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತುಮಕೂರಿನ ಶ್ರೀ ಸಾಯಿರಾಮನ್ ನೃತ್ಯ ಕೇಂದ್ರದಿಂದ ನವದುರ್ಗೆಯರ ಇತಿಹಾಸ ಕುರಿತ ನೃತ್ಯ ರೂಪಕ; 6:30 ಗಂಟೆಯಿಂದ ಖ್ಯಾತ ಗಾಯಕ ವಿಜಯ್‌ ಪ್ರಕಾಶ್ ಮತ್ತು ತಂಡದವರಿಂದ ಸಂಗೀತ ರಸಸಂಜೆ ಹಾಗೂ ಡ್ರೋಣ್ ಶೋ; ರಾತ್ರಿ 9:30 ಗಂಟೆಗೆ ಸಮಾರೋಪ ಸಮಾರಂಭ; 10:15 ಗಂಟೆಗೆ ಹಸಿರು ಸಿಡಿಮದ್ದುಗಳಿಂದ ಬಾಣ–ಬಿರುಸು ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

    ಸಾಂಸ್ಕೃತಿಕ ರಸದೌತಣವನ್ನು ಸವಿಯಲು ಬನ್ನಿ:

    ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 11 ಹಾಗೂ 12ರಂದು ಏರ್ಪಡಿಸಿರುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಾಡ ದೇವಿ ಚಾಮುಂಡೇಶ್ವರಿಯ ಕೃಪಾಶೀರ್ವಾದಕ್ಕೆ ಪಾತ್ರರಾಗುವುದರೊಂದಿಗೆ ಸಂಜೆಯ ವೈವಿಧ್ಯಮಯ ಸಾಂಸ್ಕೃತಿಕ ಕಾಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಂಸ್ಕೃತಿಕ ರಸದೌತಣವನ್ನು ಸವಿಯಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್

    October 3, 2025

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ

    October 1, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್

    October 3, 2025

    ತುಮಕೂರು: ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಗುರುವಾರ…

    “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”

    October 2, 2025

    ಈ ದಿನದ ಶೀರ್ಷಿಕೆ: ಹಿರಿಯರ ಶಾಪ

    October 2, 2025

    ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

    October 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.