ತುಮಕೂರು : ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುದಾರಣೆ ಕಂಡು ಬಂದಿದ್ದು, ಕಳೆದ ವರ್ಷ 24ನೇ ಸ್ಥಾನದಲ್ಲಿದ್ದ ಜಿಲ್ಲಾ ಫಲಿತಾಂಶ ಈ ವರ್ಷ 18 ಸ್ಥಾನಕ್ಕೆ ಜಿಗಿದಿದ್ದು, ಫಲಿತಾಂಶ ತೃಪ್ತಿದಾಯಕವಾಗಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಾಲಗುರುಮೂರ್ತಿ ತಿಳಿಸಿದರು.
ಜಿಲ್ಲೆಯಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಶ್ರಮ ಹಾಗೂ ಇಲಾಖೆಯ ಕಾರ್ಯವೈಖರಿಯಿಂದ ಈ ವರ್ಷ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ತಿಳಿಸಿದರು. ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇಂಗ್ಲಿಷ್ ಭಾಷೆಯ ಕ್ಲಿಸ್ಟತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಸುಮಾರು 6 ಶನಿವಾರ ವಿಶೇಷ ಉಪನ್ಯಾಸಕರನ್ನು ಒಳಗೊಂಡಂತೆ ಜಿಲ್ಲೆಯಾದ್ಯಂತ ನೋಡಲ್ ಕೇಂದ್ರಗಳಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ನಡೆದವು. ಅಲ್ಲದೆ ಉನ್ನತ ಶ್ರೇಣಿಯ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಉಪನ್ಯಾಸ ಕಾರ್ಯಾಗಾರಗಳಿಂದ ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗೆ ಕಾರಣವಾಯಿತು ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟಾರೆ ಕಲಾ ವಿಭಾಗದಲ್ಲಿ 4,318 ವಿದ್ಯಾರ್ಥಿಗಳಿಗೆ 2476, ವಿಜ್ಞಾನ ವಿಭಾಗದಲ್ಲಿ 10,051 ವಿದ್ಯಾರ್ಥಿಗಳಿಗೆ 7,784 ಹಾಗೂ ವಾಣಿಜ್ಯ ವಿಭಾಗದಲ್ಲಿ 8,587 ವಿದ್ಯಾರ್ಥಿಗಳಿಗೆ 6,274 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಫಲಿತಾಂಶದಂತೆ 22,956 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಅದರಲ್ಲಿ 16,534 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರು:
ಕಲಾ ವಿಭಾಗ:
ತುಮಕೂರು ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅದಿತಿ ಎಚ್ 584 ಅಂಕಗಳು ಪ್ರಥಮ ಸ್ಥಾನ.
ತಿಪಟೂರು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಗಣೇಶ್ 580 ಅಂಕಗಳು ದ್ವಿತೀಯ ಸ್ಥಾನ.
ತಿಪಟೂರು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಚೇತನ್ ಬಿ.ಆರ್. 579
ವಾಣಿಜ್ಯ ವಿಭಾಗ:
ರಾಜ್ಯಕ್ಕೆ 4 ನೇ ಸ್ಥಾನ ಪಡೆದಿರುವ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಶ್ರೀ ಲಕ್ಷ್ಮಿ ಆರ್ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇದೇ ಕಾಲೇಜಿನ ಎಸ್ ಎನ್ ಲಕ್ಷ್ಮಿ 593 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಇದೇ ಕಾಲೇಜಿನ ಎಚ್.ಎನ್. ಭುವನ್ ಹಾಗೂ ಜಮುನಾ ಎಸ್.ಜೆ. 592 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.
ವಿಜ್ಞಾನ ವಿಭಾಗ:
ಚಿಕ್ಕನಾಯಕನಹಳ್ಳಿ ವಿದ್ಯಾ ವಾರಿಧಿ ಪದವಿ ಪೂರ್ವ ಕಾಲೇಜಿನ ಆದಿತ್ಯ ಎಚ್.ಎಸ್. 594 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದು, ಶಾರದಂಬ ಪದವಿ ಪೂರ್ವ ಕಾಲೇಜಿನ ಕೀರ್ತನಾ ಎಂ.ಎಸ್. ಹಾಗೂ ವಿಧ್ಯಾನಿಧಿ ಕಾಲೇಜಿನ ಶಿವಾನಿ ಎಸ್.ರೈ 593 ಅಂಕಗಳನ್ನು ಪಡೆದ ದ್ವಿತೀಯ ಸ್ಥಾನ ಪಡೆದಿದ್ದಾರೆ
ತಿಪಟೂರಿನ ಎಸ್.ಎಸ್.ಪದವಿ ಪೂರ್ವ ಕಾಲೇಜಿನ ಹರ್ ಪ್ರೀತ್ ಏ ಹಾಗೂ ವಿದ್ಯಾನಿಧಿ ಕಾಲೇಜಿನ ನಿತೀಶ್ ಕೆ.ಪಿ. 591 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರಲು ಜಿಲ್ಲಾ ಉಪನಿರ್ದೇಶಕರ ಶಿಸ್ತುಬದ್ಧ ಆಡಳಿತವೇ ಕಾರಣ ಎಂದು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ ತಿಳಿಸಿದರು.
ಉಪನಿರ್ದೇಶಕರ ಕಾರ್ಯಶೀಲತೆ, ದಕ್ಷ ಆಡಳಿತ, ಮತ್ತು ಶಿಸ್ತುಬದ್ಧ ಶೈಕ್ಷಣಿಕ ಚಟುವಟಿಕೆ ಹಾಗೂ ಜಿಲ್ಲೆಯ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಶ್ರಮದಿಂದ ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು.
— ಎನ್.ಮಹಾಲಿಂಗೇಶ್, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ, ತುಮಕೂರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW