nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026
    Facebook Twitter Instagram
    ಟ್ರೆಂಡಿಂಗ್
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    ತುಮಕೂರು February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    By adminFebruary 5, 2026No Comments2 Mins Read
    siddalingaiah

    ತುಮಕೂರು: ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ, ಬಡವರ ನೋವನ್ನು ತಮ್ಮ ಬರವಣಿಗೆಯ ಮೂಲಕ ಜಗತ್ತಿಗೆ ಸಾದರಪಡಿಸಿದ ಸಾಹಿತ್ಯ ಲೋಕದ ಅಪ್ರತಿಮ ದೈತ್ಯ ಪ್ರತಿಭೆ ದಲಿತ ಕವಿ ಡಾ. ಸಿದ್ದಲಿಂಗಯ್ಯನವರ ಜನ್ಮ ದಿನಾಚರಣೆಯನ್ನು ನಗರದ ಅಮಾನಿಕೆರೆ ಗಾಜಿನ ಮನೆಯ ಆವರಣದಲ್ಲಿ ಆಚರಿಸಲಾಯಿತು.

    ದಲಿತ ಕವಿ ಸಿದ್ಧಲಿಂಗಯ್ಯರವರ ಕುರಿತು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಮಾತನಾಡುತ್ತಾ, ಕಾವ್ಯವನ್ನೇ ಖಡ್ಗವಾಗಿಸಿಕೊಂಡು ದಲಿತರ ಪರವಾಗಿ ಸಾಮಾಜಿಕ ಸಮಾನತೆಗಾಗಿ ತಮ್ಮ ಬದುಕಿನದ್ದಕ್ಕೂ ಹೋರಾಟ ನಡೆಸಿದ ಕನ್ನಡದ ಹೆಮ್ಮೆಯ ಬಂಡಾಯ ಕವಿಯಾಗಿದ್ದವರು ಡಾ.ಸಿದ್ದಲಿಂಗಯ್ಯನವರು. ಅವರು ಬಡ ಕುಟುಂಬವೊಂದರಲ್ಲಿ  ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954ರ ಫೆಬ್ರವರಿ ೩ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು.

    ಪ್ರೊ. ಜಿ.ಎಸ್. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ `ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಪಿಎಚ್.ಡಿ. ಪದವಿಯನ್ನು ಗಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ಧಲಿಂಗಯ್ಯನವರು, ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಿಪಡಿಸಲು ಸಿದ್ಧಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ `ಹೊಲೆಮಾದಿಗರ ಹಾಡು’ 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ `ಸಾವಿರಾರು ನದಿಗಳು’, `ಕಪುö್ಪಕಾಡಿನ ಹಾಡು’, `ಮೆರವಣಿಗೆ’,  `ನನ್ನ ಜನಗಳು ಮತ್ತು ಇತರ ಕವಿತೆಗಳು’, `ಆಯ್ದ ಕವನಗಳು’ ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ, ಇಂತಹ ಮಹಾನ್ ಚೇತನರ ಜನ್ಮ ದಿನಾಚರಣೆಯನ್ನು ಮಾಡುತ್ತಾ ಅವರು ಸಮಾಜಕ್ಕಾಗಿ ಮಾಡಿರುವ ಸೇವಾ ಕಾರ್ಯಗಳನ್ನು ನೆನೆಯುವುದಕ್ಕೆ ಬಹಳ ಗರ್ವವೆನ್ನಿಸುತ್ತದೆ ಎಂದರು.

    ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್ ಮಾತನಾಡುತ್ತಾ ಸಿದ್ಧಲಿಂಗಯ್ಯನವರ `ಪಂಚಮ ಮತ್ತು ನೆಲಸಮ’, `ಏಕಲವ್ಯ’ ಪ್ರಮುಖ ನಾಟಕಗಳು, ಇವಲ್ಲದೆ ರಸಗಳಿಗೆಗಳು, ಎಡಬಲ, ಹಕ್ಕಿನೋಟ, ಜನಸಂಸ್ಕೃತಿ ಉರಿಕಂಡಾಯ ಮುಂತಾದ ಲೇಖನಗಳನ್ನು ಬರೆದ ಖ್ಯಾತಿ ಅವರಿಗೆದೆ ಅವರ `ಊರು ಕೇರಿ’ ಆತ್ಮಕಥೆ ಇಂಗ್ಲಿಷ್ ಹಾಗೂ ತಮಿಳಿಗೂ ಅನುವಾದಗೊಂಡಿದ್ದು ಇಂಗ್ಲಿಷ್ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡಮಿಯು ಪ್ರಕಟಿಸಿದೆ. ಅವರ ಹಲವಾರು ಕವಿತೆಗಳು ಇಂಗ್ಲಿಷ್, ಹಿಂದಿ, ತಮಿಳು, ಬಂಗಾಳಿ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ, ನಮ್ಮ ರಾಜ್ಯಕ್ಕೆ ಅತ್ಯಂತ ಕೀರ್ತಿ ತಂದುಕೊಟ್ಟ ಮಹಾನ್ ಕವಿ ಆಗಿದ್ದರು, ಅವರು ಅಪಾರ ದಲಿತ ವಿದ್ಯಾಮಣಿಗಳಿಗೆ ಕೀರ್ತಿಪ್ರದಾಯಕರೂ ಸಹ ಹೌದು ಎಂದರು.

    ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಎಸ್.ಲಕ್ಷ್ಮೀನಾರಾಯಣರವರು ಮಾತನಾಡಿ, ಸಿದ್ಧಲಿಂಗಯ್ಯನವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ.ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು ಸಂದಿದ್ದವು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ  ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ತುಮಕೂರು ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎನ್., ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ ಎಸ್., ಯುವ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಅಟ್ರಾಸಿಟಿ ಕಮಿಟಿ ಸದಸ್ಯರಾದ ಗೋವಿಂದರಾಜ್ ಕೆ., ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಟೈಲರ್ ಜಗದೀಶ್, ಯುವ ಘಟಕದ ಕಾರ್ಯಾಧ್ಯಕ್ಷರಾದ ಮಾರ್ಗೋ ವೆಂಕಟೇಶ್ ಕೊತ್ತಿಹಳ್ಳಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ತ್ಯಾಗರಾಜ್ ಕೆ., ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷರಾದ ಹನುಮನರಸಯ್ಯ, ಮುಖಂಡರುಗಳಾದ ನಟರಾಜ್ ಜಿ.ಎಲ್., ಇಲ್ಲಾಸ್ ಅಹಮದ್, ನಿರಂಜನ್, ಮಾರ್ಕೆಟ್ ಮಣ್ಣೆಪ್ಪ, ರಂಗಸ್ವಾಮಯ್ಯ ಕೊತ್ತಿಹಳ್ಳಿ, ಮಂಜುನಾಥ್, ಟಿ.ಎನ್. ನರಸಿಂಹಮೂರ್ತಿ, ಮೋಯಿನ್ ಅಹಮದ್, ಇನ್ನು ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ

    July 14, 2026

    ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    July 14, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ…

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.