nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಧಟತನ ಕಲಿಸಿದ ಪಾಠ

    January 7, 2026

    ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

    January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    January 7, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಧಟತನ ಕಲಿಸಿದ ಪಾಠ
    • ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
    • ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 
    • ತುರುವೇಕೆರೆ: ಕುರಿ ಮೇಕೆ ಸಾಕಾಣಿಕೆ ತರಬೇತಿ
    • ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್
    • ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ: ಪ್ರೊ.ಕೆ.ಚಂದ್ರಣ್ಣ
    • ಹೆದ್ದಾರಿಯಲ್ಲಿನ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ
    ಗುಬ್ಬಿ January 6, 2026

    ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ

    By adminJanuary 6, 2026No Comments2 Mins Read
    gollarahatti

    ತುಮಕೂರು: ಗೊಲ್ಲರ ಹಟ್ಟಿಗಳಲ್ಲಿ ಇನ್ನೂ ಜೀವಂತವಿರುವ ಕೆಲವು ಹಿಂದಿನ ಆಚರಣೆಗಳು ಹಾಗೂ ಈಗಿನ ಸನ್ನಿವೇಶಕ್ಕೆ ಅವುಗಳ ಅಪ್ರಸ್ತುತತೆ ಬಗ್ಗೆ ಬೆಳಕು ಚೆಲ್ಲಲು ಗುಬ್ಬಿ ತಾಲ್ಲೂಕು ಸಮುದಾಯದ ಕೆಲವು ಮುಖಂಡರು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

    ತಾಲ್ಲೂಕಿನ ಶ್ರೀ ಯಾದವ ಸಂಸ್ಥಾನ ಮಠದ ಭಕ್ತ ವೃಂದವು ಈ ಅಭಿಯಾನ ಆರಂಭಿಸುತ್ತಿದ್ದು ಜನವರಿ 8 ರಿಂದ 14 ರ ವರೆಗೆ ಗುಬ್ಬಿ ತಾಲ್ಲೂಕಿನ ವಿವಿಧ ಗೊಲ್ಲರಹಟ್ಟಿಗಳಲ್ಲಿ ಈ ಕಾರ್ಯಕ್ರಮ ನಡೆಸಲು ಇತ್ತೀಚೆಗೆ ಸೇರಿದ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದರ ಜೊತೆಗೆ ಚಿತ್ರದುರ್ಗದಲ್ಲಿರುವ ಶ್ರೀ ಮಠಕ್ಕೆ ಸಹಾಯ ಹಸ್ತ ಚಾಚುವ ಉದ್ದೇಶದಿಂದ ಶ್ರೀ ಕೃಷ್ಣಯಾದವಾನಂದ ಸ್ವಾಮಿಗಳನ್ನು ಬರಮಾಡಿಕೊಂಡು ಅವರಿಗೆ ದವಸ ಧಾನ್ಯ ನೀಡುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ.


    Provided by
    Provided by

    ಶ್ರೀ ಮಠದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಅವರಿಗೆ ಪ್ರೋತ್ಸಾಹ ನೀಡಬೇಕಿದೆ. ಅಲ್ಲಿ ಗೋ ಶಾಲೆ ತೆರೆದಿದ್ದು ಅವುಗಳ ಬಗ್ಗೆ ನಿಗಾ ವಹಿಸಬೇಕಾಗಿದೆ. ನಿತ್ಯ ಹಲವಾರು ಭಕ್ತರು ಮಠಕ್ಕೆ ಬರುತ್ತಿದ್ದು ಅವರಿಗೆಲ್ಲ ಪ್ರಸಾದ ವ್ಯವಸ್ಥೆ ಮಾಡಬೇಕಿದೆ. ಇದೇ ರೀತಿಯಲ್ಲಿ ಗುಬ್ಬಿ ತಾಲ್ಲೂಕಿನಲ್ಲಿಯೂ ಶ್ರೀ ಮಠದ ಶಾಖೆ ತೆರೆಯಲು ಉದ್ದೇಶಿಸಿದ್ದು ಬಡ ಮೈಲನ ಬಂಡೆ ಬಳಿ ಶಾಖೆ ಹಾಗೂ ಬಡ ಮಕ್ಕಳಿಗಾಗಿ ಶಿಕ್ಷಣ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ಸಭೆಯಲ್ಲಿ ಮುಖಂಡರು ತಿಳಿಸಿದರು.

    ಭಾನುವಾರ ನಡೆದ ಸಭೆಯಲ್ಲಿ ಲಕ್ಷ್ಮಣಗೌಡ, ಕೆ.ಟಿ.ಕೆ ಪ್ರಭು, ಎನ್.ಟಿ. ಪ್ರಕಾಶ್, ಸಿದ್ದರಾಜು, ಗುರುಲಿಂಗಯ್ಯ, ಕದರಪ್ಪ, ಸಣ್ಣ ತಿಮ್ಮಯ್ಯ, ಮಹಾಲಿಂಗಯ್ಯ, ಮಲ್ಲಿಕಾರ್ಜುನ್, ಸಿದ್ದಗಂಗಯ್ಯ, ಲಿಂಗರಾಜು, ರಾಜಣ್ಣ, ಶಿವಗಂಗಯ್ಯ, ಇನ್ನೂ ಮುಂತಾದ ಮುಖಂಡರು ಭಾಗವಹಿಸಿದ್ದರು.

    ಜನ ಜಾಗೃತಿ ಕಾರ್ಯಕ್ರಮವು ಜನವರಿ 8 ರಂದು ನಿಟ್ಟೂರು ಹೋಬಳಿ ಗುಡ್ಡದ ಓಬಳಾಪುರಹಟ್ಟಿಯಿಂದ ಆರಂಭವಾಗಿ ರಾಜನ ಪೆಂಟೆ, 9 ರಂದು ನಿಟ್ಟೂರು ಹೋಬಳಿ ಸಾಗರನಹಳ್ಳಿ ಮಾರ್ಗವಾಗಿ ಮಾರನಹಟ್ಟಿಯವರೆಗೆ, 10 ರಂದು ಹಗಲವಾಡಿ ಹೋಬಳಿ ಹರಳಕಟ್ಟೆಯಿಂದ ರಂಗನಹಳ್ಳಿ ಹಟ್ಟಿಯವರೆಗೆ, 11 ರಂದು ಚೇಳೂರು ಹೋಬಳಿ ಚೆನ್ನಿಹಟ್ಟಿಯಿಂದ ಮುಲ್ಲೇನಹಳ್ಳಿ ಹಟ್ಟಿಯವರೆಗೆ, 12 ರಂದು ಕಸಬಾ ಹೋಬಳಿ ಗುಡ್ಡದಹಳ್ಳಿ ಹಟ್ಟಿಯಿಂದ ಸುರಿಗೇನಹಳ್ಳಿಯವರೆಗೆ, 13 ರಂದು ಕಡಬ ಹೋಬಳಿ ಮಾರಶೆಟ್ಟಿಹಳ್ಳಿಯಿಂದ ಪುರದ ಗೊಲ್ಲರಹಟ್ಟಿಯವರೆಗೆ, 14 ರಂದು ಸಿ.ಎಸ್.ಪುರ ಹೋಬಳಿ ನರಸಿಂಹದೇವರ ಹಟ್ಟಿಯಿಂದ ಬಿಳಿಕಲ್ಲುಹಟ್ಟಿಯವರೆಗೆ ಈ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ವಿವರಗಳಿಗೆ 99861 46789 ಇವರನ್ನು ಸಂಪರ್ಕಿಸಲು ತಿಳಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025

    ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ

    December 24, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಉದ್ಧಟತನ ಕಲಿಸಿದ ಪಾಠ

    January 7, 2026

    ಒಮ್ಮೆ ಒಬ್ಬ ರಾಜ ಕುದುರೆ ಏರಿ ವನವಿಹಾರ ಮಾಡುತ್ತಾ, ಸೈನಿಕರಿರುವ ತನ್ನ ಬಿಡಾರದಿಂದ ಕಾಡಿನ ಸೌಂದರ್ಯ ಸವಿಯಲು ಬಹಳ ದೂರ…

    ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

    January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    January 7, 2026

    ತುರುವೇಕೆರೆ: ಕುರಿ ಮೇಕೆ ಸಾಕಾಣಿಕೆ ತರಬೇತಿ

    January 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.