nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ
    ಗುಬ್ಬಿ January 6, 2026

    ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ

    By adminJanuary 6, 2026No Comments2 Mins Read
    gollarahatti

    ತುಮಕೂರು: ಗೊಲ್ಲರ ಹಟ್ಟಿಗಳಲ್ಲಿ ಇನ್ನೂ ಜೀವಂತವಿರುವ ಕೆಲವು ಹಿಂದಿನ ಆಚರಣೆಗಳು ಹಾಗೂ ಈಗಿನ ಸನ್ನಿವೇಶಕ್ಕೆ ಅವುಗಳ ಅಪ್ರಸ್ತುತತೆ ಬಗ್ಗೆ ಬೆಳಕು ಚೆಲ್ಲಲು ಗುಬ್ಬಿ ತಾಲ್ಲೂಕು ಸಮುದಾಯದ ಕೆಲವು ಮುಖಂಡರು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

    ತಾಲ್ಲೂಕಿನ ಶ್ರೀ ಯಾದವ ಸಂಸ್ಥಾನ ಮಠದ ಭಕ್ತ ವೃಂದವು ಈ ಅಭಿಯಾನ ಆರಂಭಿಸುತ್ತಿದ್ದು ಜನವರಿ 8 ರಿಂದ 14 ರ ವರೆಗೆ ಗುಬ್ಬಿ ತಾಲ್ಲೂಕಿನ ವಿವಿಧ ಗೊಲ್ಲರಹಟ್ಟಿಗಳಲ್ಲಿ ಈ ಕಾರ್ಯಕ್ರಮ ನಡೆಸಲು ಇತ್ತೀಚೆಗೆ ಸೇರಿದ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದರ ಜೊತೆಗೆ ಚಿತ್ರದುರ್ಗದಲ್ಲಿರುವ ಶ್ರೀ ಮಠಕ್ಕೆ ಸಹಾಯ ಹಸ್ತ ಚಾಚುವ ಉದ್ದೇಶದಿಂದ ಶ್ರೀ ಕೃಷ್ಣಯಾದವಾನಂದ ಸ್ವಾಮಿಗಳನ್ನು ಬರಮಾಡಿಕೊಂಡು ಅವರಿಗೆ ದವಸ ಧಾನ್ಯ ನೀಡುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ.


    Provided by
    Provided by

    ಶ್ರೀ ಮಠದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಅವರಿಗೆ ಪ್ರೋತ್ಸಾಹ ನೀಡಬೇಕಿದೆ. ಅಲ್ಲಿ ಗೋ ಶಾಲೆ ತೆರೆದಿದ್ದು ಅವುಗಳ ಬಗ್ಗೆ ನಿಗಾ ವಹಿಸಬೇಕಾಗಿದೆ. ನಿತ್ಯ ಹಲವಾರು ಭಕ್ತರು ಮಠಕ್ಕೆ ಬರುತ್ತಿದ್ದು ಅವರಿಗೆಲ್ಲ ಪ್ರಸಾದ ವ್ಯವಸ್ಥೆ ಮಾಡಬೇಕಿದೆ. ಇದೇ ರೀತಿಯಲ್ಲಿ ಗುಬ್ಬಿ ತಾಲ್ಲೂಕಿನಲ್ಲಿಯೂ ಶ್ರೀ ಮಠದ ಶಾಖೆ ತೆರೆಯಲು ಉದ್ದೇಶಿಸಿದ್ದು ಬಡ ಮೈಲನ ಬಂಡೆ ಬಳಿ ಶಾಖೆ ಹಾಗೂ ಬಡ ಮಕ್ಕಳಿಗಾಗಿ ಶಿಕ್ಷಣ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ಸಭೆಯಲ್ಲಿ ಮುಖಂಡರು ತಿಳಿಸಿದರು.

    ಭಾನುವಾರ ನಡೆದ ಸಭೆಯಲ್ಲಿ ಲಕ್ಷ್ಮಣಗೌಡ, ಕೆ.ಟಿ.ಕೆ ಪ್ರಭು, ಎನ್.ಟಿ. ಪ್ರಕಾಶ್, ಸಿದ್ದರಾಜು, ಗುರುಲಿಂಗಯ್ಯ, ಕದರಪ್ಪ, ಸಣ್ಣ ತಿಮ್ಮಯ್ಯ, ಮಹಾಲಿಂಗಯ್ಯ, ಮಲ್ಲಿಕಾರ್ಜುನ್, ಸಿದ್ದಗಂಗಯ್ಯ, ಲಿಂಗರಾಜು, ರಾಜಣ್ಣ, ಶಿವಗಂಗಯ್ಯ, ಇನ್ನೂ ಮುಂತಾದ ಮುಖಂಡರು ಭಾಗವಹಿಸಿದ್ದರು.

    ಜನ ಜಾಗೃತಿ ಕಾರ್ಯಕ್ರಮವು ಜನವರಿ 8 ರಂದು ನಿಟ್ಟೂರು ಹೋಬಳಿ ಗುಡ್ಡದ ಓಬಳಾಪುರಹಟ್ಟಿಯಿಂದ ಆರಂಭವಾಗಿ ರಾಜನ ಪೆಂಟೆ, 9 ರಂದು ನಿಟ್ಟೂರು ಹೋಬಳಿ ಸಾಗರನಹಳ್ಳಿ ಮಾರ್ಗವಾಗಿ ಮಾರನಹಟ್ಟಿಯವರೆಗೆ, 10 ರಂದು ಹಗಲವಾಡಿ ಹೋಬಳಿ ಹರಳಕಟ್ಟೆಯಿಂದ ರಂಗನಹಳ್ಳಿ ಹಟ್ಟಿಯವರೆಗೆ, 11 ರಂದು ಚೇಳೂರು ಹೋಬಳಿ ಚೆನ್ನಿಹಟ್ಟಿಯಿಂದ ಮುಲ್ಲೇನಹಳ್ಳಿ ಹಟ್ಟಿಯವರೆಗೆ, 12 ರಂದು ಕಸಬಾ ಹೋಬಳಿ ಗುಡ್ಡದಹಳ್ಳಿ ಹಟ್ಟಿಯಿಂದ ಸುರಿಗೇನಹಳ್ಳಿಯವರೆಗೆ, 13 ರಂದು ಕಡಬ ಹೋಬಳಿ ಮಾರಶೆಟ್ಟಿಹಳ್ಳಿಯಿಂದ ಪುರದ ಗೊಲ್ಲರಹಟ್ಟಿಯವರೆಗೆ, 14 ರಂದು ಸಿ.ಎಸ್.ಪುರ ಹೋಬಳಿ ನರಸಿಂಹದೇವರ ಹಟ್ಟಿಯಿಂದ ಬಿಳಿಕಲ್ಲುಹಟ್ಟಿಯವರೆಗೆ ಈ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ವಿವರಗಳಿಗೆ 99861 46789 ಇವರನ್ನು ಸಂಪರ್ಕಿಸಲು ತಿಳಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ

    February 26, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.