ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಎ. ಮಹಾಲಿಂಗಯ್ಯನವರ ನೇತೃತ್ವದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಪ್ರಸಕ್ತ ಸಾಲಿನ 2025–26ರ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ರಷ್ಟು ಅಧಿಕ ಅಂಕ ಹಾಗೂ ಉನ್ನತ ಸ್ನಾತಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಕುರುಬ ಜನಾಂಗದ ವಿದ್ಯಾರ್ಥಿಗಳು ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮುಖ್ಯಶಿಕ್ಷಕರು/ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿಪ್ರಮಾಣಪತ್ರ, ಆಧಾರ್ ಕಾರ್ಡ್, ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ, ವಿದ್ಯಾರ್ಥಿಯ ಮತ್ತು ಪೋಷಕರ ಮೊಬೈಲ್ ನಂಬರ್, ವಿಳಾಸದೊಂದಿಗೆ ತುಮಕೂರಿನ ಜಿಲ್ಲಾ ಕಚೇರಿಗೆ ಖುದ್ದಾಗಿ ಅಥವಾ ಮುಚ್ಚಿದ ಲಕೋಟೆಯಲ್ಲಿ ಅಂಚೆ ಕಚೇರಿ ಮೂಲಕ ಎ. ಮಹಾಲಿಂಗಯ್ಯ, ಜಿಲ್ಲಾಧ್ಯಕ್ಷರು, ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ (ರಿ.), ಅನಿತಾನಿಲಯ, 7ನೇ ಕ್ರಾಸ್, ಶ್ರೀರಾಮನಗರ, ತುಮಕೂರು ಇಲ್ಲಿಗೆ ಸಲ್ಲಿಸುವಂತೆ ಸಂಘದ ಕಾರ್ಯದರ್ಶಿ ವೈ. ಬಸವರಾಜು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ: 9880647383, ಪ್ರಧಾನ ಕಾರ್ಯದರ್ಶಿ, ಎಂ.ಆರ್.ಚಂದ್ರಶೇಖರ್ ಮೊ: 9008805842ಕ್ಕೆ ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


