nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು:  ಕಲುಷಿತ ನೀರು ಸೇವಿಸಿ ಎರಡು ಅಮಾಯಕ ಜೀವಗಳು ಬಲಿ!
    ತುಮಕೂರು October 23, 2024

    ತುಮಕೂರು:  ಕಲುಷಿತ ನೀರು ಸೇವಿಸಿ ಎರಡು ಅಮಾಯಕ ಜೀವಗಳು ಬಲಿ!

    By adminOctober 23, 2024No Comments2 Mins Read

    ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೋರಲು ಮಾವು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ.

    ಗುಂಡಮ್ಮ (60) ಮತ್ತು ಭುವನೇಶ್ವರಿ (10) ಮೃತ ದುರ್ದೈವಿಗಳಾಗಿದ್ದಾರೆ. ಗ್ರಾಮದ ಗುಂಡಮ್ಮ ವಾಂತಿಬೇದಿಯಿಂದ ಮಂಗಳವಾರ ಮನೆಯಲ್ಲಿ ಮೃತಪಟ್ಟಿದ್ದರು. ಭಾನುವಾರ ಬಾಲಕಿ ಮೃತಪಟ್ಟಿದ್ದಾರೆ  ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳು ಖಚಿತಪಡಿಸಿದ್ದಾರೆ.

    ರತ್ನಮ್ಮ ಎಂಬ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು ಚಿಕ್ಕನಾಯಕನಹಳ್ಳಿ ತಾಲೂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕಳುಹಿಸಲಾಗಿದೆ.

    ಇನ್ನು ರೇಣುಕಯ್ಯ ನೇತ್ರಾವತಿ ರತ್ನಮ್ಮ ಬಸವರಾಜು ಉಮೇಶ್ ಶ್ರೀಧರ್ ರುದ್ರಮ್ಮ ಸೇರಿದಂತೆ 10ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದು ಚಿಕ್ಕನಾಯಕನಹಳ್ಳಿ ತಾಲೂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇನ್ನು ಈ ಸಂಬಂಧ ಸ್ಪಷ್ಟನೆ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ಚಂದ್ರಶೇಖರ್ ಅವರು, ಸೋರಲು ಮಾವು ಗ್ರಾಮದಲ್ಲಿ ಕಳೆದ ಎರಡು ದಿನಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಇಬ್ಬರಿಗೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಎಂಟು ಮಂದಿಗೆ ವಾಂತಿಭೇದಿಯಿಂದ ಬಳಲುತ್ತಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಗ್ರಾಮಕ್ಕೆ ತಾಲೂಕು ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿ ಪೂರಕವಾದ ಚಿಕಿತ್ಸೆ ಸೌಲಭ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

    ಆ ಕುಟುಂಬದ ಗೃಹಕಾರ್ಯಗಳಿಗಿದ್ದ ಏಕೈಕ ಆಧಾರ ದಿವಂಗತ ರಂಗಮ್ಮನೇ ಆಗಿದ್ದರು. ಮೂರು ದಿನಗಳ ಹಿಂದೆ ಅಸುನೀಗಿದ ಭುವನೇಶ್ವರಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಈಕೆಯ ಕುಟುಂಬವೂ ಅದೇ ಟ್ಯಾಂಕ್’ನಿಂದ ನೀರು ಕುಡಿಯುತ್ತಿದ್ದುದಾಗಿ ಅವರ ತಾಯಿ ತಿಳಿಸಿದರು. ಭುವನೇಶ್ವರಿ ತನ್ನ ತಮ್ಮ ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ.

    ತಾಲ್ಲೂಕು ಆರೋಗ್ಯಾಧಿಕಾರಿ ಡಾ ಯಶ್ವಂತ್, ಆರಕ್ಷಕ ವೃತ್ತ ನಿರೀಕ್ಷಕ ಎಫ್ ಕೆ ನದಾಫ್ ಮತ್ತು ಪಂಚಾಯತ್ ಇಲಾಖೆಯ ಇತರೆ ಅಧಿಕಾರಿಗಳು ಮಂಗಳವಾರ ರಾತ್ರಿ ಭೇಟಿ ಕೊಟ್ಟು ತಡರಾತ್ರಿಯವರೆಗೂ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಕುಡಿಯುವುದಕ್ಕಾಗಿ ಮತ್ತು ಅಡುಗೆ ಮಾಡುವುದಕ್ಕಾಗಿ ಬಳಸುತ್ತಿದ್ದ ನೀರಿನ ಸ್ಯಾಂಪಲ್’ಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡುತ್ತಿರುವುದಾಗಿ ಡಾ ಯಶ್ವಂತ್ ತಿಳಿಸಿದರು.

    ತಾಲ್ಲೂಕು ಆರೋಗ್ಯಾಧಿಕಾರಿ ಡಾ ಯಶ್ವಂತ್’ರವರ ಮಾಹಿತಿಪ್ರಕಾರ ಭುವನೇಶ್ವರಿಗೆ ಮೂರ್ಛೆರೋಗದ ಸಮಸ್ಯೆ ಇತ್ತಂತೆ. ಅವರು ಅದಕ್ಕಾಗಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರಂತೆ. ಅದರ ಎಲ್ಲ ವಿವರಗಳನ್ನು ಅವರು ಗ್ರಾಮಸ್ಥರ ಎದುರೇ ಬಿಡಿಸಿ ವಿವರಿಸಿದರು. ಆದರೆ, ಗ್ರಾಮಸ್ಥರು ಅವರ ಮಾತನ್ನು ತಳ್ಳಿಹಾಕಿದರು. ರಂಗಮ್ಮನವರ ಸಾವಿಗೆ ವಯೋಸಹಜ ಕಾಯಿಲೆಗಳ ಅಡ್ಡಪರಿಣಾಮದ ಹಿನ್ನೆಲೆಯ ಆಯಾಮದಿಂದದ ಕೂಡ ಪರಿಶೀಲನೆ ನಡೆಸಲಾಗುತ್ತಿದೆ.

    ಊರಿಗೆ, ಜೆಜೆಎಂ ಯೋಜನೆಯಡಿ ಮನೆ ಮನೆ ಗಂಗೆ ಮೂಲಕ ಗ್ರಾಮದ ಮನೆ ಮನೆಗೂ ನೀರು ಕಲ್ಪಿಸುವ ಕಾಮಗಾರಿಯ ಎಡವಟ್ಟುಗಳೇ ಇಷ್ಟೆಲ್ಲಕ್ಕೂ ಕಾರಣ ಎಂದು ಗ್ರಾಮಸ್ಥರು ದೂರುತ್ತಾರೆ. ಜೆಜೆಎಂ ಕಾಮಗಾರಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರ ಇಬ್ಬರೂ ಇಷ್ಟೆಲ್ಲ ದುರಂತಕ್ಕೆ ಕಾರಣ ಎಂದು ತಹಸೀಲ್ದಾರ್ ಹಾಗೂ ಉಪ-ವಿಭಾಗಾಧಿಕಾರಿಗಳ ಬಳಿ ಗ್ರಾಮಸ್ಥರು ನೇರವಾಗಿ ದೂರಿದರು. ಒಡೆದ ಪೈಪುಗಳು, ಬಾಯ್ತೆರೆದ ಗುಂಡಿಗಳು, ಒಡೆದ ಪೈಪುಗಳಿಂದ ಗ್ರಾಮದ ಗಲ್ಲಿಗಲ್ಲಿಯಲ್ಲೂ ಹರಿಯುತ್ತಿರುವ ನೀರು. ಇದು ಈಗ ಸೋರಲಮಾವು ಗ್ರಾಮದ ಚಿತ್ರಣ. ಸೀಪೇಜ್ ನಿಲ್ಲದ ರಸ್ತೆಗಳು ಹಾಗೂ ಪೈಪ್ ಅಳವಡಿಸಲು ಬಗೆದ ಗುಂಡಿಗಳನ್ನು ಸರಿಯಾಗಿ ಮುಚ್ಚದೆ ಹಾಗೇ ಬಿಟ್ಟುಹೋದದ್ದರ ಪರಿಣಾಮ ಗ್ರಾಮದ ಶುದ್ಧ ಕುಡಿಯುವ ನೀರಿನ ಸಂಸ್ಕರಣಾ ಘಟಕಕ್ಕೆ ಪೈಪುಗಳ ಮೂಲಕ ಹರಿಯುವ ನೀರಿನಲ್ಲಿ ಉದ್ದಕ್ಕೂ ಕಲ್ಮಶ ಮಿಶ್ರಿತಗೊಂಡಿದೆ. ಉದ್ದಕ್ಕೂ ಕಲುಷಿತಗೊಂಡಿರುವ ಆ ನೀರನ್ನು ಸಂಸ್ಕರಣಾ ಘಟಕ ಇನ್ನೆಷ್ಟು ಶುದ್ಧಗೊಳಿಸೀತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.

    ಶುದ್ಧ ಕುಡಿಯುವ ನೀರಿನ ಸಂಸ್ಕರಣಾ ಘಟಕಕ್ಕೆ ತಹಶೀಲ್ದಾರ್ ಪುರಂದರ್’ರವರು ಭೇಟಿಕೊಟ್ಟು, ಗ್ರಾಮಸ್ಥರು ನಿತ್ಯ ಕುಡಿಯುತ್ತಿರುವ ಆ ನೀರನ್ನು ತಾವೇ ಕುಡಿದು ಪರಿಶೀಲಿಸಿದರು. ನಂತರ, ಈ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿ, ಪರೀಕ್ಷಿಸಿದ ನಂತರ ಇದರ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.