nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ
    • ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    • ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ
    • ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ
    • ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
    • ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
    • ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು
    • ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 28ರಂದು ತಿಂಡಿಗೆ ಬಂದ ತುಂಡೇರಾಯ ನಾಟಕ ಪ್ರದರ್ಶನ
    ತುಮಕೂರು January 27, 2025

    ಜನವರಿ 28ರಂದು ತಿಂಡಿಗೆ ಬಂದ ತುಂಡೇರಾಯ ನಾಟಕ ಪ್ರದರ್ಶನ

    By adminJanuary 27, 2025No Comments2 Mins Read
    gubbi veeranna

    ತುಮಕೂರು: ಲೋಕಚರಿತ ರಂಗಕೇಂದ್ರ (ರಿ) ಚಿಕ್ಕದಾಳವಟ್ಟ ಮತ್ತು ಸಮ್ಮತ ಥೀಯೇಟರ್ (ರಿ) ಆಯೋಜಿಸುವ ನಾಟಕ ‘ತಿಂಡಿಗೆ ಬಂದ ತುಂಡೇರಾಯ ‘ ಜನವರಿ 28ರಂದು ತುಮಕೂರಿನ ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ  6 ಗಂಟೆಗೆ ನಡೆಯಲಿದೆ.

    ಬರ್ಟೋಲ್ಟ್ ಬ್ರೆಕ್ಟ್ ರಚನೆಯ ಈ ನಾಟಕವನ್ನು ಶಕೀಲ್ ಅಹಮ್ಮದ್ ನಿರ್ದೇಶಿಸಿದ್ದಾರೆ. ಅನುಷ್ ಶೆಟ್ಟಿ, ಮುನ್ನ ಮೈಸೂರು ಸಂಗೀತ ನೀಡಿದ್ದಾರೆ. ರಂಗ ವಿನ್ಯಾಸ / ವಸ್ತ್ರ ವಿನ್ಯಾಸವನ್ನು ಶ್ವೇತಾ ರಾಣಿ ಎಚ್. ಕೆ. ಮಾಡಲಿದ್ದಾರೆ.


    Provided by
    Provided by

    ಶಕೀಲ್ ಅಹ್ಮದ್ : ಲೋಣಿ ಬಿ.ಕೆ. (ಬಿಜಾಪೂರ) ಊರಿನವರಾದ ಶಕೀಲ್ ಅಹ್ಮದ್, ಸಾಂಪ್ರದಾಯಿಕ ಮತ್ತು ಸಮಕಾಲೀನ ರಂಗಭೂಮಿಯ ತಂತ್ರಗಳನ್ನು ಬೆಸೆಯುವುದರ ಮೂಲಕ ತಮ್ಮದೇ ಆದ ರಂಗ ತರಬೇತಿಯನ್ನು ಸೃಷ್ಟಿಸಿದ್ದಾರೆ. ನೀನಾಸಂ ಹಾಗೂ ಸಿಂಗಾಪೂರಿನ ಇಂಟರ್ ಕಲ್ಟರ್ ಥಿಯೇಟರ್ ಇನ್ಸಿಟ್ಯೂಟ್ (ಐ.ಟಿ.ಐ) ನಲ್ಲಿ ಅಭಿನಯ ಕುರಿತು ತರಬೇತಿ ಪಡೆದಿರುತ್ತಾರೆ.

    “ಜನಮನದಾಟ” ತಂಡದಲ್ಲಿ ನಟರಾಗಿ, ಕರ್ನಾಟಕದ ಹಲವು ತಂಡಗಳಲ್ಲಿ ನಟ ಹಾಗೂ ತರಬೇತುದಾರರಾಗಿ ಮತ್ತು ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಇವರ ನಿರ್ದೇಶನದ ನಾಟಕಗಳು-ಉಳಿದ ದೇಹಗಳು, ರೇಖೆಗಳು, ಮದುವೆ ಹೆಣ್ಣು, ಉಳಿದ ಸಾಕ್ಷಿಗಳು, ಅಪರಿಚಿತ ಘಳಿಗೆ, ಫಾರ್ ಎ ಬೈಟ್ ಆಫ್ ಫೂಡ್ ಹಾಗೂ ಆನಾಮಿಕನ ಸಾವು.

    ನಾಟಕದ ಕುರಿತು:

    ತಿಂಡಿಗೆ ಬಂದ ತುಂಡೇರಾಯ ಜರ್ಮನ್ ನಾಟಕಕಾರ ಬರ್ಟೋಲ್ಟ್‌ ಬ್ರೆಕ್ಟ್ ಅವರ “The resistible rise of Arthuro Ui” ನಾಟಕವನ್ನು ಆಧರಿಸಿದೆ. ಅದು ಎರಡನೇಯ ವಿಶ್ವಯುದ್ದಕ್ಕೂ ಮೊದಲು. ಜರ್ಮನಿಯಲ್ಲಿ. ಅಡಾಲ್ಫ್ ಹಿಟ್ಲ‌ರ್ ಮತ್ತು ನಾಝಿ ಪಕ್ಷದ ಬೆಳವಣಿಗೆಯ ಸಂಕೇತವಾಗಿ ಹುಟ್ಟಿದ ವಿಡಂಬನಾತ್ಮಕ ನಾಟಕ. ಈ ನಾಟಕದ ಎಲ್ಲಾ ಪಾತ್ರಗಳು ಹಾಗೂ ಘಟನೆಗಳು, ನಾಝಿ ಜರ್ಮನಿಯ ಇತಿಹಾಸದಲ್ಲಿ ನಡೆದ ನೈಜ ಘಟನೆಗಳನ್ನು ಆಧರಿಸಿದೆ.

    ಸಣ್ಣಪುಟ್ಟ ಕೊಲೆ, ಸುಲಿಗೆ, ದರೋಡೆ ಮಾಡಿಕೊಂಡು ಬದುಕಿದ್ದ ತುಂಡೇರಾಯನ ಹೆಸರು, ರಾಜ್ಯದ ಆರ್ಥಿಕ ಸಂಕಷ್ಟದಿಂದಾಗಿ, ಸಮಾಜದ ಭಯರಹಿತ ವಾತಾವರಣದಿಂದಾಗಿ, ಜನರ ಮನಸ್ಸಿನಿಂದ ಮರೆಯಾಗಲಾರಂಬಿಸುತ್ತದೆ. ಸರ್ಕಾರದ ಆಸ್ತಿಯನ್ನು ಖಾಸಗೀಕರಣಗೊಳಿಸುವುದರಲ್ಲಿ ಲಂಚ ಪಡೆದ ಬ್ರಷ್ಟ ರಾಜಕಾರಣಿಯ ಕಥೆ ಕಿವಿಗೆ ಬೀಳುತ್ತಿದ್ದಂತೆ, ಅವನ ಮಹತ್ವಾಕಾಂಕ್ಷೆಯ ಕನಸಿಗೆ ರೆಕ್ಕೆ ಮೂಡಲಾರಂಭಿಸುತ್ತದೆ. ಇದನ್ನೇ ಮೆಟ್ಟಿಲನ್ನಾಗಿಸಿಕೊಳ್ಳುವ ತುಂಡೇರಾಯ ತನ್ನದೇ ಆದ ಪ್ರತ್ಯೇಕ ಗುಂಪು ಕಟ್ಟಿಕೊಂಡು, ದೊಂಬಿ-ಗಲಭೆಗಳನ್ನು ಸೃಷ್ಟಿಸುತ್ತಾ ತನ್ನ ಬುದ್ದಿ ಹಾಗೂ ಬಲಪ್ರಯೋಗದಿಂದ ಅಧಿಕಾರ ಗದ್ದುಗೆ ಹಿಡಿಯುತ್ತಾನೆ. ದುರಾಸೆ ಮತ್ತು ಅಧಿಕಾರ ದಾಹ ಹೆಚ್ಚಾದಂತೆ ಅದನ್ನು ಸಾಧಿಸುವ ಮಾರ್ಗ ಇನ್ನೂ ಹೆಚ್ಚು ಹೆಚ್ಚು ಕ್ರೂರವಾಗುತ್ತಾ ಹೋಗುತ್ತದೆ. ಜನರನ್ನು ಮರುಳು ಮಾಡುತ್ತಾ, ಮರುಳಾಗದ್ದವರನ್ನು ಕೊಲ್ಲುತ್ತಾ, ಒಂದಾದ ಮೇಲೊಂದರಂತೆ ಎಲ್ಲಾ ರಾಜ್ಯಗಳನ್ನು ಕಬಳಿಸುತ್ತಾ, ಅನಭಿಷಿಕ್ತ ದೊರೆಯಾಗಿ ಮೆರೆಯುತ್ತಾನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ

    January 28, 2026

    ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ

    January 27, 2026

    ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್

    January 27, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಗುಬ್ಬಿ: ತಾಲೂಕು ಕಚೇರಿಯ ಭೂ ಮಾಪನ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಖ್ಯಾತ ರಂಗಕರ್ಮಿ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯೆ ಬಿ.…

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ

    January 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.