nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025
    Facebook Twitter Instagram
    ಟ್ರೆಂಡಿಂಗ್
    • ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    • ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು
    • ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 28ರಂದು ತಿಂಡಿಗೆ ಬಂದ ತುಂಡೇರಾಯ ನಾಟಕ ಪ್ರದರ್ಶನ
    ತುಮಕೂರು January 27, 2025

    ಜನವರಿ 28ರಂದು ತಿಂಡಿಗೆ ಬಂದ ತುಂಡೇರಾಯ ನಾಟಕ ಪ್ರದರ್ಶನ

    By adminJanuary 27, 2025No Comments2 Mins Read
    gubbi veeranna

    ತುಮಕೂರು: ಲೋಕಚರಿತ ರಂಗಕೇಂದ್ರ (ರಿ) ಚಿಕ್ಕದಾಳವಟ್ಟ ಮತ್ತು ಸಮ್ಮತ ಥೀಯೇಟರ್ (ರಿ) ಆಯೋಜಿಸುವ ನಾಟಕ ‘ತಿಂಡಿಗೆ ಬಂದ ತುಂಡೇರಾಯ ‘ ಜನವರಿ 28ರಂದು ತುಮಕೂರಿನ ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ  6 ಗಂಟೆಗೆ ನಡೆಯಲಿದೆ.

    ಬರ್ಟೋಲ್ಟ್ ಬ್ರೆಕ್ಟ್ ರಚನೆಯ ಈ ನಾಟಕವನ್ನು ಶಕೀಲ್ ಅಹಮ್ಮದ್ ನಿರ್ದೇಶಿಸಿದ್ದಾರೆ. ಅನುಷ್ ಶೆಟ್ಟಿ, ಮುನ್ನ ಮೈಸೂರು ಸಂಗೀತ ನೀಡಿದ್ದಾರೆ. ರಂಗ ವಿನ್ಯಾಸ / ವಸ್ತ್ರ ವಿನ್ಯಾಸವನ್ನು ಶ್ವೇತಾ ರಾಣಿ ಎಚ್. ಕೆ. ಮಾಡಲಿದ್ದಾರೆ.


    Provided by
    Provided by

    ಶಕೀಲ್ ಅಹ್ಮದ್ : ಲೋಣಿ ಬಿ.ಕೆ. (ಬಿಜಾಪೂರ) ಊರಿನವರಾದ ಶಕೀಲ್ ಅಹ್ಮದ್, ಸಾಂಪ್ರದಾಯಿಕ ಮತ್ತು ಸಮಕಾಲೀನ ರಂಗಭೂಮಿಯ ತಂತ್ರಗಳನ್ನು ಬೆಸೆಯುವುದರ ಮೂಲಕ ತಮ್ಮದೇ ಆದ ರಂಗ ತರಬೇತಿಯನ್ನು ಸೃಷ್ಟಿಸಿದ್ದಾರೆ. ನೀನಾಸಂ ಹಾಗೂ ಸಿಂಗಾಪೂರಿನ ಇಂಟರ್ ಕಲ್ಟರ್ ಥಿಯೇಟರ್ ಇನ್ಸಿಟ್ಯೂಟ್ (ಐ.ಟಿ.ಐ) ನಲ್ಲಿ ಅಭಿನಯ ಕುರಿತು ತರಬೇತಿ ಪಡೆದಿರುತ್ತಾರೆ.

    “ಜನಮನದಾಟ” ತಂಡದಲ್ಲಿ ನಟರಾಗಿ, ಕರ್ನಾಟಕದ ಹಲವು ತಂಡಗಳಲ್ಲಿ ನಟ ಹಾಗೂ ತರಬೇತುದಾರರಾಗಿ ಮತ್ತು ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಇವರ ನಿರ್ದೇಶನದ ನಾಟಕಗಳು-ಉಳಿದ ದೇಹಗಳು, ರೇಖೆಗಳು, ಮದುವೆ ಹೆಣ್ಣು, ಉಳಿದ ಸಾಕ್ಷಿಗಳು, ಅಪರಿಚಿತ ಘಳಿಗೆ, ಫಾರ್ ಎ ಬೈಟ್ ಆಫ್ ಫೂಡ್ ಹಾಗೂ ಆನಾಮಿಕನ ಸಾವು.

    ನಾಟಕದ ಕುರಿತು:

    ತಿಂಡಿಗೆ ಬಂದ ತುಂಡೇರಾಯ ಜರ್ಮನ್ ನಾಟಕಕಾರ ಬರ್ಟೋಲ್ಟ್‌ ಬ್ರೆಕ್ಟ್ ಅವರ “The resistible rise of Arthuro Ui” ನಾಟಕವನ್ನು ಆಧರಿಸಿದೆ. ಅದು ಎರಡನೇಯ ವಿಶ್ವಯುದ್ದಕ್ಕೂ ಮೊದಲು. ಜರ್ಮನಿಯಲ್ಲಿ. ಅಡಾಲ್ಫ್ ಹಿಟ್ಲ‌ರ್ ಮತ್ತು ನಾಝಿ ಪಕ್ಷದ ಬೆಳವಣಿಗೆಯ ಸಂಕೇತವಾಗಿ ಹುಟ್ಟಿದ ವಿಡಂಬನಾತ್ಮಕ ನಾಟಕ. ಈ ನಾಟಕದ ಎಲ್ಲಾ ಪಾತ್ರಗಳು ಹಾಗೂ ಘಟನೆಗಳು, ನಾಝಿ ಜರ್ಮನಿಯ ಇತಿಹಾಸದಲ್ಲಿ ನಡೆದ ನೈಜ ಘಟನೆಗಳನ್ನು ಆಧರಿಸಿದೆ.

    ಸಣ್ಣಪುಟ್ಟ ಕೊಲೆ, ಸುಲಿಗೆ, ದರೋಡೆ ಮಾಡಿಕೊಂಡು ಬದುಕಿದ್ದ ತುಂಡೇರಾಯನ ಹೆಸರು, ರಾಜ್ಯದ ಆರ್ಥಿಕ ಸಂಕಷ್ಟದಿಂದಾಗಿ, ಸಮಾಜದ ಭಯರಹಿತ ವಾತಾವರಣದಿಂದಾಗಿ, ಜನರ ಮನಸ್ಸಿನಿಂದ ಮರೆಯಾಗಲಾರಂಬಿಸುತ್ತದೆ. ಸರ್ಕಾರದ ಆಸ್ತಿಯನ್ನು ಖಾಸಗೀಕರಣಗೊಳಿಸುವುದರಲ್ಲಿ ಲಂಚ ಪಡೆದ ಬ್ರಷ್ಟ ರಾಜಕಾರಣಿಯ ಕಥೆ ಕಿವಿಗೆ ಬೀಳುತ್ತಿದ್ದಂತೆ, ಅವನ ಮಹತ್ವಾಕಾಂಕ್ಷೆಯ ಕನಸಿಗೆ ರೆಕ್ಕೆ ಮೂಡಲಾರಂಭಿಸುತ್ತದೆ. ಇದನ್ನೇ ಮೆಟ್ಟಿಲನ್ನಾಗಿಸಿಕೊಳ್ಳುವ ತುಂಡೇರಾಯ ತನ್ನದೇ ಆದ ಪ್ರತ್ಯೇಕ ಗುಂಪು ಕಟ್ಟಿಕೊಂಡು, ದೊಂಬಿ-ಗಲಭೆಗಳನ್ನು ಸೃಷ್ಟಿಸುತ್ತಾ ತನ್ನ ಬುದ್ದಿ ಹಾಗೂ ಬಲಪ್ರಯೋಗದಿಂದ ಅಧಿಕಾರ ಗದ್ದುಗೆ ಹಿಡಿಯುತ್ತಾನೆ. ದುರಾಸೆ ಮತ್ತು ಅಧಿಕಾರ ದಾಹ ಹೆಚ್ಚಾದಂತೆ ಅದನ್ನು ಸಾಧಿಸುವ ಮಾರ್ಗ ಇನ್ನೂ ಹೆಚ್ಚು ಹೆಚ್ಚು ಕ್ರೂರವಾಗುತ್ತಾ ಹೋಗುತ್ತದೆ. ಜನರನ್ನು ಮರುಳು ಮಾಡುತ್ತಾ, ಮರುಳಾಗದ್ದವರನ್ನು ಕೊಲ್ಲುತ್ತಾ, ಒಂದಾದ ಮೇಲೊಂದರಂತೆ ಎಲ್ಲಾ ರಾಜ್ಯಗಳನ್ನು ಕಬಳಿಸುತ್ತಾ, ಅನಭಿಷಿಕ್ತ ದೊರೆಯಾಗಿ ಮೆರೆಯುತ್ತಾನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ತುಮಕೂರು | ಕುದ್ಮಲ್ ರಂಗರಾವ್ ರಾಜ್ಯ ಪ್ರಶಸ್ತಿ ಪ್ರದಾನ–ಕವಿಗೋಷ್ಠಿ

    December 24, 2025

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    Comments are closed.

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025

    ಸರಗೂರು:  ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ…

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025

    ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.