ಬಿಲಾಸ್ ಪುರ: ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ನಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಎಸ್ ಯುವಿ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು ಏಳು ಮಂದಿ ಗಾಯಗೊಂಡಿದ್ದಾರೆ.
ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೆಂಡ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಮಿ ಗ್ರಾಮದ ಬಳಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಎಂಟು ಜನರೊಂದಿಗೆ ಎಸ್ ಯುವಿ ಮನೇಂದ್ರಗಢ—ಚಿರ್ಮಿರಿ–ಭಾರತ್ ಪುರ (ಎಂಸಿಬಿ) ಜಿಲ್ಲೆಯಿಂದ ಬಿಲಾಸ್ಪುರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸೋನ್ ನದಿಯ ಸೇತುವೆ ತಲುಪುವಷ್ಟರಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು, ನದಿಗೆ ಬಿದ್ದಿದೆ. ಅಪಘಾತದಲ್ಲಿ ಮಹಿಳಾ ಪಾದಚಾರಿ ಮತ್ತು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಸ್ ಯುವಿಯಲ್ಲಿದ್ದ ಇತರ ಏಳು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4