ಗದಗ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವನಪ್ಪಿರುವ ಘಟನೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. 5 ವರ್ಷದ ಬಾಲಕ ಮನೋಜ್ ಹಾಗೂ 34 ವರ್ಷದ ಗೀತಾ ಹೆಸರೂರು ಮೃತ ದುರ್ದೈವಿಗಳಾಗಿದ್ದಾರೆ.
ತಂಗಿಯ ಮಗನೊಂದಿಗೆ ಕೃಷಿ ಹೊಂಡದಲ್ಲಿ ಜಲಸಮಾಧಿ ಆಗಿದ್ದಾರೆ ಮಹಿಳೆ. ಕೃಷಿ ಹೊಂಡದಿಂದ ನೀರು ತರಲು ಹೋದಾಗ ಕಾಲು ಜಾರಿ ಮನೋಜ್ ಮೊದಲು ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಬಾಲಕ ಮನೋಜ್ ರಕ್ಷಣೆಗೆ ಹೋದಾಗ ಗೀತಾ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಆದರೆ, ನೀರಿನ ಅಭಾವದಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296