nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ
    ತುಮಕೂರು December 1, 2024

    ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ

    By adminDecember 1, 2024No Comments2 Mins Read
    jail

    ತುಮಕೂರು:  ರೈತರೊಬ್ಬರ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇರಿಸಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದ  ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಆರೋಪಿಗಳಿಬ್ಬರಿಗೆ  ತಲಾ ಮೂರುವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ದಂಡ ವಿಧಿಸಿ ತೀರ್ಪು ನೀಡಿದೆ.

    ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ  ರಶ್ಮಿ ಮತ್ತು ಗ್ರಾಮ ಸಹಾಯಕ  ಹೆಚ್.ಎನ್.ಪ್ರಕಾಶ್ ಅವರ ಮೇಲಿನ ಆರೋಪ ಸಾಬೀತಾಗಿದೆ.


    Provided by
    Provided by

    ಮೊದಲ ಆರೋಪಿಗೆ ಇಪ್ಪತ್ತು ಸಾವಿರ ರೂ. ದಂಡ, ಎರಡನೇ ಆರೋಪಿಗೆ ಹತ್ತು ಸಾವಿರ ರೂ. ದಂಡ ವಿಧಿಸಿದೆ.

    ಭೀಮಸಂದ್ರ ಗ್ರಾಮದ ವಾಸಿ ದೂರುದಾರರಾದ  ಡಿ.ನಾಗರಾಜು ಎಂಬುವರು ಭೀಮಸಂದ್ರ ಗ್ರಾಮದ ಸರ್ವೆ ನಂಬರ್:32/2ಎ7 ರಲ್ಲಿ 03 ಗುಂಟೆ ಜಮೀನನ್ನು ಕ್ರಯಕ್ಕೆ ಖರೀದಿ ಮಾಡಿದ್ದು, ಈ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ ರಶ್ಮಿ  12,000/- ರೂ. ಲಂಚದ ಹಣಕ್ಕೆ ಬೇಡಿಕೆ ಇರಿಸಿದ್ದರು. 28/09/2021 ರಂದು ಮದ್ಯಾಹ್ನ ಹೆಗ್ಗೆರೆಯಲ್ಲಿರುವ ತಮ್ಮ ಕಛೇರಿಯಲ್ಲಿ  ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ ರವರ ಮೂಲಕ ದೂರುದಾರರಿಂದ 2000/- ರೂ ಲಂಚದ ಹಣವನ್ನು ಮುಂಗಡವಾಗಿ ಪಡೆದುಕೊಂದಿದ್ದರು.

    ಉಳಿದ 8,000 ರೂ ಲಂಚದ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಾಗರಾಜು ರವರಿಗೆ, ಅಧಿಕಾರಿಗಳಿಗೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಷ್ಟವಿಲ್ಲದೇ 29/09/2021 ರಂದು ತುಮಕೂರು ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ಮಲ್ಲಕಾರ್ಜುನ ಚುಕ್ಕಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಪೊಲೀಸ್ ನಿರೀಕ್ಷಕ ಬೀರೇಂದ್ರ ಎನ್. ನೇತೃತ್ವದ ತಂಡ ದಾಳಿ ನಡೆಸಿ 29/09/2021 ರಂದು ಮಧ್ಯಾಹ್ನ 01.40 ಗಂಟೆ ಸಮಯದಲ್ಲಿ ತುಮಕೂರು ತಾಲ್ಲೂಕು ತಹಶೀಲ್ದಾರ್ ಕಛೇರಿಯ ಕೆಳಭಾಗದಲ್ಲಿರುವ ಕಸಬಾ ಹೋಬಳಿ ಕಂದಾಯ ನಿರೀಕ್ಷಕರ ಕಛೇರಿ ಮುಂಭಾಗ ಹೆಚ್.ಎನ್.ಪ್ರಕಾಶ್  8,000 ರೂ. ಲಂಚದ ಹಣವನ್ನು ದೂರುದಾರರಿಂದ ಪಡೆಯುತ್ತಿದ್ದರು.

    ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ಕಛೇರಿಯೊಳಗೆ ಕೂತಿದ್ದ  ರಶ್ಮಿ ಎಂ.ಎನ್. ರವರಿಗೆ ನೀಡಿದ್ದರು. ಈ ಪ್ರಕರಣದಲ್ಲಿ ವೀರೇಂದ್ರ ಎನ್., ಪೊಲೀಸ್ ನಿರೀಕ್ಷಕರು, ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆ, ತುಮಕೂರು ಮತ್ತು ರಾಮರೆಡ್ಡಿಕ., ಬೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ತುಮಕೂರು ರವರುಗಳು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

    ನ್ಯಾಯಧೀಶ ಸಿ.ಪಿ.ರಾಮಲಿಂಗೇಗೌಡ ಅವರು ಲೋಕಾಯುಕ್ತ ಪೊಲೀಸ್‌ ಠಾಣಾ ಮೊ.ನಂ:14/2021 ಕಲಂ-7(1) ಭ್ರಷ್ಟಾಚಾರ, ಪ್ರತಿಬಂಧ ಕಾಯ್ಯ ೧೦೦ (ತಿದ್ದುಪ9-2019) .ರ ಟ್ರ್ಯಾಪ್ ಪ್ರಕರಣವನ್ನು ನ್ಯಾಯಾಲಯದ ವಿಶೇಷ ಪ್ರಕರಣ ಸಂಖ್ಯೆ:300/2023 ರಲ್ಲ. ವಿಚಾರಣೆ ನಡೆಸಿ, ಆರೋಪಿ–1 ರಶ್ಮಿ .ಎಂ.ಎನ್. ಗ್ರಾಮ ಅಡಕತಾಧಿಕಾರಿ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳ, ತುಮಕೂರು ತಾಲ್ಲೂಕು ಮತ್ತು ಆರೋಪಿ–2 ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳಿ, ತುಮಕೂರು ತಾಲ್ಲೂಕು ರವರನ್ನು ದೋಷಿಗಳು ಎಂದು ಘೋಷಿಸಿದ್ದಾರೆ.

    ಈ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯ ಪರವಾಗಿ ಎನ್.ಬಸವರಾಜು, ವಿಶೇಷ ಸಾರ್ವಜನಿಕ ಅಭಿಯೋಜಕರು, ಕರ್ನಾಟಕ ಲೋಕಾಯುಕ್ತ, ತುಮಕೂರು ರವರು ವಾದ ಮಂಡಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026

    ಒಳಮೀಸಲಾತಿ: “ನಾಗಮೋಹನ್ ದಾಸ್  ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ

    March 24, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ತುಮಕೂರು: ಜಿಲ್ಲಾ ಕೇಂದ್ರದ ಮುಖ್ಯ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ಹತ್ತಲು ಹೋದ…

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.