nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ
    ತುಮಕೂರು December 1, 2024

    ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ

    By adminDecember 1, 2024No Comments2 Mins Read
    jail

    ತುಮಕೂರು:  ರೈತರೊಬ್ಬರ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇರಿಸಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದ  ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಆರೋಪಿಗಳಿಬ್ಬರಿಗೆ  ತಲಾ ಮೂರುವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ದಂಡ ವಿಧಿಸಿ ತೀರ್ಪು ನೀಡಿದೆ.

    ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ  ರಶ್ಮಿ ಮತ್ತು ಗ್ರಾಮ ಸಹಾಯಕ  ಹೆಚ್.ಎನ್.ಪ್ರಕಾಶ್ ಅವರ ಮೇಲಿನ ಆರೋಪ ಸಾಬೀತಾಗಿದೆ.


    Provided by
    Provided by

    ಮೊದಲ ಆರೋಪಿಗೆ ಇಪ್ಪತ್ತು ಸಾವಿರ ರೂ. ದಂಡ, ಎರಡನೇ ಆರೋಪಿಗೆ ಹತ್ತು ಸಾವಿರ ರೂ. ದಂಡ ವಿಧಿಸಿದೆ.

    ಭೀಮಸಂದ್ರ ಗ್ರಾಮದ ವಾಸಿ ದೂರುದಾರರಾದ  ಡಿ.ನಾಗರಾಜು ಎಂಬುವರು ಭೀಮಸಂದ್ರ ಗ್ರಾಮದ ಸರ್ವೆ ನಂಬರ್:32/2ಎ7 ರಲ್ಲಿ 03 ಗುಂಟೆ ಜಮೀನನ್ನು ಕ್ರಯಕ್ಕೆ ಖರೀದಿ ಮಾಡಿದ್ದು, ಈ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ ರಶ್ಮಿ  12,000/- ರೂ. ಲಂಚದ ಹಣಕ್ಕೆ ಬೇಡಿಕೆ ಇರಿಸಿದ್ದರು. 28/09/2021 ರಂದು ಮದ್ಯಾಹ್ನ ಹೆಗ್ಗೆರೆಯಲ್ಲಿರುವ ತಮ್ಮ ಕಛೇರಿಯಲ್ಲಿ  ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ ರವರ ಮೂಲಕ ದೂರುದಾರರಿಂದ 2000/- ರೂ ಲಂಚದ ಹಣವನ್ನು ಮುಂಗಡವಾಗಿ ಪಡೆದುಕೊಂದಿದ್ದರು.

    ಉಳಿದ 8,000 ರೂ ಲಂಚದ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಾಗರಾಜು ರವರಿಗೆ, ಅಧಿಕಾರಿಗಳಿಗೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಷ್ಟವಿಲ್ಲದೇ 29/09/2021 ರಂದು ತುಮಕೂರು ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ಮಲ್ಲಕಾರ್ಜುನ ಚುಕ್ಕಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಪೊಲೀಸ್ ನಿರೀಕ್ಷಕ ಬೀರೇಂದ್ರ ಎನ್. ನೇತೃತ್ವದ ತಂಡ ದಾಳಿ ನಡೆಸಿ 29/09/2021 ರಂದು ಮಧ್ಯಾಹ್ನ 01.40 ಗಂಟೆ ಸಮಯದಲ್ಲಿ ತುಮಕೂರು ತಾಲ್ಲೂಕು ತಹಶೀಲ್ದಾರ್ ಕಛೇರಿಯ ಕೆಳಭಾಗದಲ್ಲಿರುವ ಕಸಬಾ ಹೋಬಳಿ ಕಂದಾಯ ನಿರೀಕ್ಷಕರ ಕಛೇರಿ ಮುಂಭಾಗ ಹೆಚ್.ಎನ್.ಪ್ರಕಾಶ್  8,000 ರೂ. ಲಂಚದ ಹಣವನ್ನು ದೂರುದಾರರಿಂದ ಪಡೆಯುತ್ತಿದ್ದರು.

    ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ಕಛೇರಿಯೊಳಗೆ ಕೂತಿದ್ದ  ರಶ್ಮಿ ಎಂ.ಎನ್. ರವರಿಗೆ ನೀಡಿದ್ದರು. ಈ ಪ್ರಕರಣದಲ್ಲಿ ವೀರೇಂದ್ರ ಎನ್., ಪೊಲೀಸ್ ನಿರೀಕ್ಷಕರು, ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆ, ತುಮಕೂರು ಮತ್ತು ರಾಮರೆಡ್ಡಿಕ., ಬೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ತುಮಕೂರು ರವರುಗಳು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

    ನ್ಯಾಯಧೀಶ ಸಿ.ಪಿ.ರಾಮಲಿಂಗೇಗೌಡ ಅವರು ಲೋಕಾಯುಕ್ತ ಪೊಲೀಸ್‌ ಠಾಣಾ ಮೊ.ನಂ:14/2021 ಕಲಂ-7(1) ಭ್ರಷ್ಟಾಚಾರ, ಪ್ರತಿಬಂಧ ಕಾಯ್ಯ ೧೦೦ (ತಿದ್ದುಪ9-2019) .ರ ಟ್ರ್ಯಾಪ್ ಪ್ರಕರಣವನ್ನು ನ್ಯಾಯಾಲಯದ ವಿಶೇಷ ಪ್ರಕರಣ ಸಂಖ್ಯೆ:300/2023 ರಲ್ಲ. ವಿಚಾರಣೆ ನಡೆಸಿ, ಆರೋಪಿ–1 ರಶ್ಮಿ .ಎಂ.ಎನ್. ಗ್ರಾಮ ಅಡಕತಾಧಿಕಾರಿ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳ, ತುಮಕೂರು ತಾಲ್ಲೂಕು ಮತ್ತು ಆರೋಪಿ–2 ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳಿ, ತುಮಕೂರು ತಾಲ್ಲೂಕು ರವರನ್ನು ದೋಷಿಗಳು ಎಂದು ಘೋಷಿಸಿದ್ದಾರೆ.

    ಈ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯ ಪರವಾಗಿ ಎನ್.ಬಸವರಾಜು, ವಿಶೇಷ ಸಾರ್ವಜನಿಕ ಅಭಿಯೋಜಕರು, ಕರ್ನಾಟಕ ಲೋಕಾಯುಕ್ತ, ತುಮಕೂರು ರವರು ವಾದ ಮಂಡಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಸರಗೂರು:  ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ…

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.