nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

    June 16, 2026

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    • ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ
    • ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ
    ತುಮಕೂರು December 1, 2024

    ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ

    By adminDecember 1, 2024No Comments2 Mins Read
    jail

    Provided by
    Provided by

    ತುಮಕೂರು:  ರೈತರೊಬ್ಬರ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇರಿಸಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದ  ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಆರೋಪಿಗಳಿಬ್ಬರಿಗೆ  ತಲಾ ಮೂರುವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ದಂಡ ವಿಧಿಸಿ ತೀರ್ಪು ನೀಡಿದೆ.

    ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ  ರಶ್ಮಿ ಮತ್ತು ಗ್ರಾಮ ಸಹಾಯಕ  ಹೆಚ್.ಎನ್.ಪ್ರಕಾಶ್ ಅವರ ಮೇಲಿನ ಆರೋಪ ಸಾಬೀತಾಗಿದೆ.

    ಮೊದಲ ಆರೋಪಿಗೆ ಇಪ್ಪತ್ತು ಸಾವಿರ ರೂ. ದಂಡ, ಎರಡನೇ ಆರೋಪಿಗೆ ಹತ್ತು ಸಾವಿರ ರೂ. ದಂಡ ವಿಧಿಸಿದೆ.

    ಭೀಮಸಂದ್ರ ಗ್ರಾಮದ ವಾಸಿ ದೂರುದಾರರಾದ  ಡಿ.ನಾಗರಾಜು ಎಂಬುವರು ಭೀಮಸಂದ್ರ ಗ್ರಾಮದ ಸರ್ವೆ ನಂಬರ್:32/2ಎ7 ರಲ್ಲಿ 03 ಗುಂಟೆ ಜಮೀನನ್ನು ಕ್ರಯಕ್ಕೆ ಖರೀದಿ ಮಾಡಿದ್ದು, ಈ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ ರಶ್ಮಿ  12,000/- ರೂ. ಲಂಚದ ಹಣಕ್ಕೆ ಬೇಡಿಕೆ ಇರಿಸಿದ್ದರು. 28/09/2021 ರಂದು ಮದ್ಯಾಹ್ನ ಹೆಗ್ಗೆರೆಯಲ್ಲಿರುವ ತಮ್ಮ ಕಛೇರಿಯಲ್ಲಿ  ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ ರವರ ಮೂಲಕ ದೂರುದಾರರಿಂದ 2000/- ರೂ ಲಂಚದ ಹಣವನ್ನು ಮುಂಗಡವಾಗಿ ಪಡೆದುಕೊಂದಿದ್ದರು.

    ಉಳಿದ 8,000 ರೂ ಲಂಚದ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಾಗರಾಜು ರವರಿಗೆ, ಅಧಿಕಾರಿಗಳಿಗೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಷ್ಟವಿಲ್ಲದೇ 29/09/2021 ರಂದು ತುಮಕೂರು ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ಮಲ್ಲಕಾರ್ಜುನ ಚುಕ್ಕಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಪೊಲೀಸ್ ನಿರೀಕ್ಷಕ ಬೀರೇಂದ್ರ ಎನ್. ನೇತೃತ್ವದ ತಂಡ ದಾಳಿ ನಡೆಸಿ 29/09/2021 ರಂದು ಮಧ್ಯಾಹ್ನ 01.40 ಗಂಟೆ ಸಮಯದಲ್ಲಿ ತುಮಕೂರು ತಾಲ್ಲೂಕು ತಹಶೀಲ್ದಾರ್ ಕಛೇರಿಯ ಕೆಳಭಾಗದಲ್ಲಿರುವ ಕಸಬಾ ಹೋಬಳಿ ಕಂದಾಯ ನಿರೀಕ್ಷಕರ ಕಛೇರಿ ಮುಂಭಾಗ ಹೆಚ್.ಎನ್.ಪ್ರಕಾಶ್  8,000 ರೂ. ಲಂಚದ ಹಣವನ್ನು ದೂರುದಾರರಿಂದ ಪಡೆಯುತ್ತಿದ್ದರು.

    ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ಕಛೇರಿಯೊಳಗೆ ಕೂತಿದ್ದ  ರಶ್ಮಿ ಎಂ.ಎನ್. ರವರಿಗೆ ನೀಡಿದ್ದರು. ಈ ಪ್ರಕರಣದಲ್ಲಿ ವೀರೇಂದ್ರ ಎನ್., ಪೊಲೀಸ್ ನಿರೀಕ್ಷಕರು, ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆ, ತುಮಕೂರು ಮತ್ತು ರಾಮರೆಡ್ಡಿಕ., ಬೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ತುಮಕೂರು ರವರುಗಳು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

    ನ್ಯಾಯಧೀಶ ಸಿ.ಪಿ.ರಾಮಲಿಂಗೇಗೌಡ ಅವರು ಲೋಕಾಯುಕ್ತ ಪೊಲೀಸ್‌ ಠಾಣಾ ಮೊ.ನಂ:14/2021 ಕಲಂ-7(1) ಭ್ರಷ್ಟಾಚಾರ, ಪ್ರತಿಬಂಧ ಕಾಯ್ಯ ೧೦೦ (ತಿದ್ದುಪ9-2019) .ರ ಟ್ರ್ಯಾಪ್ ಪ್ರಕರಣವನ್ನು ನ್ಯಾಯಾಲಯದ ವಿಶೇಷ ಪ್ರಕರಣ ಸಂಖ್ಯೆ:300/2023 ರಲ್ಲ. ವಿಚಾರಣೆ ನಡೆಸಿ, ಆರೋಪಿ–1 ರಶ್ಮಿ .ಎಂ.ಎನ್. ಗ್ರಾಮ ಅಡಕತಾಧಿಕಾರಿ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳ, ತುಮಕೂರು ತಾಲ್ಲೂಕು ಮತ್ತು ಆರೋಪಿ–2 ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳಿ, ತುಮಕೂರು ತಾಲ್ಲೂಕು ರವರನ್ನು ದೋಷಿಗಳು ಎಂದು ಘೋಷಿಸಿದ್ದಾರೆ.

    ಈ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯ ಪರವಾಗಿ ಎನ್.ಬಸವರಾಜು, ವಿಶೇಷ ಸಾರ್ವಜನಿಕ ಅಭಿಯೋಜಕರು, ಕರ್ನಾಟಕ ಲೋಕಾಯುಕ್ತ, ತುಮಕೂರು ರವರು ವಾದ ಮಂಡಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)

    June 16, 2026

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    June 15, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

    June 16, 2026

    ಸರಗೂರು: ಹಳೇ ಮೈಸೂರು ಪ್ರಾಂತ್ಯದ ಪರಿಶಿಷ್ಟ ಪಂಗಡ (ST) ಸಮಾಜದ ರಾಜಕೀಯ ನಾಯಕರಿಗೆ ಪ್ರಸ್ತುತ ಸರ್ಕಾರದಲ್ಲಿ ಯಾವುದೇ ಸಚಿವ ಸ್ಥಾನ…

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.