ಮೈಸೂರು: ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಇಬ್ಬರು ಕೈದಿಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಘಟನೆಯಲ್ಲಿ ಮತ್ತೊಬ್ಬ ಕೈದಿ ಅಸ್ವಸ್ಥಗೊಂಡಿದ್ದಾನೆ. ಮೈಸೂರಿನ ಮಾದೇಶ್ ಮತ್ತು ಚಾಮರಾಜನಗರದ ನಾಗರಾಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಹೊಸ ವರ್ಷದ ಮುನ್ನಾದಿನದಂದು ಎಸೆನ್ಸ್ ಸೇವಿಸಿ ಅಸ್ವಸ್ಥರಾಗಿದ್ದರು. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇವರು ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ವರ್ಷದ ಹಿನ್ನಲೆ ಕೇಕ್ ತಯಾರಿಸಲು ಸಾಮಗ್ರಿಗಳನ್ನು ತಂದಿರಸಲಾಗಿತ್ತು. ಇದರಲ್ಲಿ ಕೇಕ್ ಗೆ ಬಳಸುವ ಎಸೆನ್ಸ್ ತರಲಾಗಿತ್ತು. ಆದರೆ ಈ ಮೂವರು ಕಿಕ್ ಗಾಗಿ ಯಾರಿಗೂ ಹೇಳದೆ ಈ ಎಸೆನ್ಸ್ ಕುಡಿದಿದ್ದರು. ಈ ಘಟನೆ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx