ತುಮಕೂರು: ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬದ ಗ್ರಾಮದ ಕೆರೆಯಲ್ಲಿ ನಡೆದಿದೆ.
ಹರೀಶ್(31) ಯೋಗೀಶ್ (36) ಸಾವನ್ನಪ್ಪಿದ ಯುವಕರಾಗಿದ್ದಾರೆ. ಗ್ರಾಮದ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು ಗ್ರಾಮದ ಕೆರೆಗೂ ಕೂಡ ನೀರು ಹರಿದು ಬರುತ್ತಿದೆ ಈ ನಡುವೆ ತಮ್ಮ ಸ್ನೇಹಿತರೊಂದಿಗೆ ಈ ಯುವಕರು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು.
ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಇಬ್ಬರೂ ಕೂಡ ಕಾಲ ಜಾರಿ ಕೆರೆಗೆ ಬಿದ್ದಿದ್ದಾರೆ. ಆದರೆ ಸುತ್ತಮುತ್ತಲಿದ್ದ ಯುವಕರು ಇವರನ್ನು ಪಾರು ಮಾಡಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಗುಬ್ಬಿ ತಾಲ್ಲೂಕಿನ ಆಡುಗೊಂಡನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆಯಾದವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆದಿದೆ. ಕೆರೆಯ ಬಳಿ ನೂರಾರು ಮಂದಿ ಗ್ರಾಮಸ್ಥರು ಜಮಾಯಿಸಿದ್ದಾರೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA