ತುಮಕೂರು: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿದ್ದ ಯುದ್ಧದ ನಡುವೆ ಸುರಕ್ಷಿತವಾಗಿ ಆಗಮಿಸಿದ ತುಮಕೂರಿನ ವಿದ್ಯಾನಗರದ ವಿದ್ಯಾರ್ಥಿನಿ ದೀಕ್ಷಾ ಅವರ ಮನೆಗೆ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಭೇಟಿ ನೀಡಿ ವಿದ್ಯಾರ್ಥಿನಿಗೆ ಸ್ವಾಗತಿಸಿ ,ಅಲ್ಲಿನ ಪರಿಸ್ಥಿತಿಯನ್ನು ಚರ್ಚಿಸಿದರು.
ಈ ವೇಳೆ ವಿದ್ಯಾರ್ಥಿಗೆ ಧೈರ್ಯ ತುಂಬಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ನಮ್ಮ ದೇಶದಿಂದ ಉಕ್ರೇನ್ ದೇಶಕ್ಕೆ ಮೆಡಿಕಲ್ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ನೂರಾರು ವಿದ್ಯಾರ್ಥಿನಿಯರು ನಮ್ಮ ದೇಶದಲ್ಲಿದ್ದಾರೆ. ಅಂತಹ ವಿದ್ಯಾರ್ಥಿನಿಯರಿಗೆ ನಮ್ಮ ಪಕ್ಷದ ಮುಖಂಡ ಪ್ರಭಾಕರ್ ಕೋರೆ ಹೇಳಿದಂತೆ, ನಮ್ಮ ದೇಶದಲ್ಲಿರುವ ಯೂನಿವರ್ಸಿಟಿಗಳಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡುವಂತೆ ಸರಕಾರ ಕೂಡಲೇ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಮ್ಮ ದೇಶದ ಮಕ್ಕಳು ನಮಗೆ ಸರ್ವಸಂಪತ್ತು ಇದ್ದಹಾಗೆ. ಆದರೆ, ಅವರು ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆಂದು ಹೋಗುವಂತಾಗಿರುವುದು ಸರಿಯಲ್ಲ. ಈ ಕೂಡಲೇ ಕೇಂದ್ರ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ವಿದ್ಯಾರ್ಥಿನಿಯ ಸಾಂತ್ವನದ ವೇಳೆ ಕೆಸಿಡಿಸಿ ನಿರ್ದೇಶಕರಾದ ಸದಾಶಿವಯ್ಯ ಉಪಸ್ಥಿತರಿದ್ದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy